ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಅಕ್ಕಿ, ಮೊಟ್ಟೆ ಸಮಸ್ಯೆಯಿಲ್ಲ: ಸರ್ಕಾರ
ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಅಕ್ಕಿ, ಸಕ್ಕರೆ, ಮೊಟ್ಟೆ ಇಲ್ಲ ಎಂದು ಹೇಳಿದ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು. ಬೆಂಗಳೂರಿನಲ್ಲಿ ವಿವಿಧೆಡೆ ಲಭ್ಯವಿರುವ ಅಕ್ಕಿ, ಮೊಟ್ಟೆ, ಸಕ್ಕರೆ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ಯ
ಬೆಂಗಳೂರು, ಜೂನ್ 10: ದೇಶದ ನಾಗರಿಕರಲ್ಲಿ ಆತಂಕ ಹುಟ್ಟಿಸಿರುವ ಪ್ಲಾಸ್ಟಿಕ್ ಮೊಟ್ಟೆ, ಅಕ್ಕಿ ಸಮಸ್ಯೆಯು ಬೆಂಗಳೂರಿನಲ್ಲಿ ಇಲ್ಲ ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಇತ್ತೀಚೆಗೆ, ರಾಜ್ಯದ ಅಲ್ಲಲ್ಲಿ ಅನ್ನಭಾಗ್ಯ ಯೋಜನೆಯಡಿಯಲ್ಲೇ ನೀಡಲಾದ ಅಕ್ಕಿಯಲ್ಲಿಯೂ ಪ್ಲಾಸ್ಟಿಕ್ ಅಕ್ಕಿ ಮಿಶ್ರವಾಗಿದ್ದು ಪತ್ತೆಯಾಗಿತ್ತು. ಅಲ್ಲದೆ, ಗದಗ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಸಕ್ಕರೆ ಪತ್ತೆಯಾಗಿತ್ತು. ಇದರಿಂದಾಗಿ ನಾಗರಿಕರು ಆತಂಕಗೊಂಡಿದ್ದರು. ಮಾಗಡಿಯಲ್ಲಿ ಪ್ಲಾಸ್ಟಿಕ್ ಮೊಟ್ಟೆ ಸಿಕ್ಕಿತ್ತು.

ಈ ಹಿನ್ನೆಲೆಯಲ್ಲಿ, ರಾಜ್ಯ ಆಹಾರ ಹಾಗೂ ನಾಗರಿಕ ಸರಬರಾಜು ಇಲಾಖೆಯ ಆಹಾರ ಸುರಕ್ಷಿತ ದಳವು ನಗರದೆಲ್ಲೆಡೆ ಸಿಗುತ್ತಿರುವ ಅಕ್ಕಿ, ಮೊಟ್ಟೆ, ಸಕ್ಕರೆಗಳನ್ನು ವಶಪಡಿಸಿಕೊಂಡು ಅದನ್ನು ಪರೀಕ್ಷೆ ನಡೆಸಿದ್ದು, ಅವು ಕಲಬೆರಕೆಗೊಂಡಿಲ್ಲ ಹಾಗೂ ಸುರಕ್ಷಿತವಾಗಿವೆ ಎಂದಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆಹಾರ ಸುರಕ್ಷಿತ ದಳದ ಉಪ ಆಯುಕ್ತ ಡಾ. ಹರ್ಷವರ್ಧನ್ ಅವರು, ''ಸದ್ಯದ ಮಟ್ಟಿಗೆ ಬೆಂಗಳೂರಿನ ನಾಗರಿಕರು ಸೇಫ್ ಆಗಿದ್ದಾರೆ. ನಾವು ಎಲ್ಲೆಡೆ ದೊರಕುತ್ತಿರುವ ಅಕ್ಕಿ, ಮೊಟ್ಟೆ, ಸಕ್ಕರೆಗಳನ್ನು ಪರೀಕ್ಷೆ ಮಾಡಿದ್ದು ಅದರಲ್ಲಿ ಯಾವುದೇ ನಕಲಿ ಪದಾರ್ಥ ಅಥವಾ ಕಲಬೆರೆಕೆ ಪತ್ತೆಯಾಗಿಲ್ಲ'' ಎಂದು ತಿಳಿಸಿದ್ದಾರೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications