Bengaluru School Timings: ಶಾಲಾ ಸಮಯ ಬದಲಾವಣೆ ಕುರಿತು ಅಕ್ಟೋಬರ್ 5ಕ್ಕೆ ಹೈ ವೋಲ್ಟೇಜ್ ಮೀಟಿಂಗ್
ಬೆಂಗಳೂರು, ಅಕ್ಟೋಬರ್, 03: ಬೆಂಗಳೂರು ಅಂದ್ರೇನೆ ಟ್ರಾಫಿಕ್ ಜಾಮ್ಗೆ ಹೆಸರುವಾಸಿಯಾದ ರಾಜ್ಯದ ಬೃಹತ್ ನಗರವಾಗಿದೆ. ಇಲ್ಲಿ ಪ್ರತಿನಿತ್ಯ ಬೆಳ್ಳಂಬೆಳ್ಳಗೆಯೇ ಟ್ರಾಫಿಕ್ ಜಂಜಾಟದಿಂದ ಶಾಲೆಗೆ ತೆರಳುವ ಮಕ್ಕಳು ಒಂದಲ್ಲ ಒಂದು ರೀತಿಯ ಸಮಸ್ಯೆಯನ್ನು ಅನುಭವಿಸುತ್ತಲೇ ಇದ್ದಾರೆ. ಆದ್ದರಿಂದ ಇಲ್ಲಿನ ಶಾಲೆಗಳ ಸಮಯ ಬದಲಾವಣೆ ಮಾಡುವ ಪ್ರಕ್ರಿಯೆಯನ್ನು ಶಿಕ್ಷಣ ಇಲಾಖೆ ಆರಂಭಿಸಿದೆ. ಈಗಾಗಲೇ ಈ ಸಂಬಂಧ ಶುಕ್ರವಾರ ಶಿಕ್ಷಣ ಇಲಾಖೆ ಮಹತ್ವದ ಸಭೆ ಕರೆದಿದ್ದು, ಸಭೆಯಲ್ಲಿ ಶಾಲಾ ಸಮಯದ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಹೆಚ್ಚಿದೆ.
ಟ್ರಾಫಿಕ್ ಸಮಸ್ಯೆ ಹಿನ್ನೆಲೆ ಬೆಂಗಳೂರಿನಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಸಮಸ್ಯೆ ಆಗುತ್ತಿದ್ದು, ಈ ಹಿನ್ನೆಲೆ ಹೈಕೋರ್ಟ್ ಸಮಯ ಬದಲಾವಣೆ ಮಾಡಲು ಶಿಕ್ಷಣ ಇಲಾಖೆಗೆ ಸೂಚಿಸಿತ್ತು. ಇದೀಗ ಹೈಕೋರ್ಟ್ ಸೂಚನೆಯ ಮೇರೆ ಶಿಕ್ಷಣ ಇಲಾಖೆಯು ಶಾಲಾ ಸಮಯ ಬದಲಾವಣೆಯ ಪ್ರಕ್ರಿಯೆಗೆ ಮುಂದಾಗಿದೆ. ಇನ್ನು ಶಾಲಾ ಸಮಯ ಬದಲಾವಣೆ ಕುರಿತು ಇದೇ ಗುರುವಾರ (ಅಕ್ಟೋಬರ್ 5) ಶಿಕ್ಷಣ ಇಲಾಖೆ ಮಹತ್ವದ ಸಭೆ ಕರೆದಿದಿದ್ದು ಆ ಸಭೆಯಲ್ಲೇ ಮಹತ್ವದ ಮಾಹಿತಿ ಹೊರಬೀಳಲಿದೆ.

ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಈ ವೇಳೆ ಸಾರಿಗೆ ಇಲಾಖೆ, ಸಂಚಾರಿ ಪೊಲೀಸ್ ಇಲಾಖೆ, ಪೋಷಕರ ಸಂಘ, ಖಾಸಗಿ ಶಾಲೆಗಳ ಆಡಳಿತ ಮಂಡಳಿ, ಶಾಲಾ ವಾಹನ ಅಸೋಸಿಯೇಷನ್ ಸದಸ್ಯರು, ಶಿಕ್ಷಕರ ಸಂಘದ ಸದಸ್ಯರು ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಎಲ್ಲರ ಅಭಿಪ್ರಾಯ ಪಡೆದು ಸಮಯ ಬದಲಾವಣೆ ಮಾಡುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.
ಪ್ರಸ್ತುತ ಇದೀಗ ಶಾಲಾ ಸಮಯ ಬೆಳಗ್ಗೆ 9.30 ರಿಂದ ಸಂಜೆ 4.30ಕ್ಕೆ ಇದೆ. ಈ ಸಮಯವನ್ನು ಅರ್ಧ ಗಂಟೆ ಅಥವಾ ಒಂದು ಗಂಟೆ ಮುಂಚೆ ಪ್ರಾರಂಭ ಮಾಡುವ ಪ್ರಸ್ತಾವನೆ ಶಿಕ್ಷಣ ಇಲಾಖೆ ಮುಂದಿದೆ. ಬೆಳಗ್ಗೆ 8.30 ರಿಂದ 3.30 ಅಥವಾ ಬೆಳಗ್ಗೆ 9 ರಿಂದ ಸಂಜೆ 3.30 ರವರೆಗೆ ಶಾಲೆ ತೆರೆಯುವ ಪ್ರಸ್ತಾಪ ಇದ್ದು, ಯಾವ ಸಮಯ ಅಂತ ಸಭೆಯಲ್ಲಿ ಅಂತಿಮ ನಿರ್ಧಾರ ಆಗುವ ಸಾಧ್ಯತೆಯಿದೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications