Get Updates
Get notified of breaking news, exclusive insights, and must-see stories!

Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್‌: ಉದ್ಯಮಿ ಕಿರಣ್‌ ಮಜುಂದಾರ್‌ ಶಾ

Bengaluru Second Airport: ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಕಿರಣ್‌ ಮಜುಂದಾರ್‌ ಶಾ ಅವರು ಕರ್ನಾಟಕಕ್ಕೆ ಸರ್ಕಾರಕ್ಕೆ ಮಹತ್ವದ ಸಲಹೆ ನೀಡಿದ್ದಾರೆ. ಕರ್ನಾಟಕ ಸರ್ಕಾರವು ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಈಚೆಗೆ ಮಂಡಿಸಲಾದ ರಾಜ್ಯ ಬಜೆಟ್‌ 2026 - 2027ರಲ್ಲಿ ಉಲ್ಲೇಖ ಮಾಡಲಾಗಿತ್ತು. ಇದಾದ ನಂತರ ಇದೀಗ ಈ ವಿಚಾರವು ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಈ ಬಗ್ಗೆ ಕಿರಣ್ ಮಜುಂದಾರ್ ಶಾ ಅವರು ಸಹ ಮಹತ್ವದ ಸಲಹೆ ನೀಡಿದ್ದಾರೆ.

ಬೆಂಗಳೂರಿಗೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಅವಶ್ಯಕತೆ ಇದೆ. ಬೆಂಗಳೂರಿನಲ್ಲಿ ಈಗ ಇರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಒತ್ತಡ ಹೆಚ್ಚಾಗುತ್ತಿದ್ದು ಮುಂದಿನ ದಿನಗಳಲ್ಲಿ ಬೆಂಗಳೂರಿಗೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಅವಶ್ಯಕ ಎಂದು ಪರಿಗಣಿಸಲಾಗಿತ್ತು. ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಂದ್ರ ತಂಡವು ಬಂದು ಪರಿಶೀಲನೆಯನ್ನು ಸಹ ನಡೆಸಿತ್ತು. ಇದಾದ ನಂತರ ಕೆಲವೊಂದು ಗೊಂದಲಗಳು ಸೃಷ್ಟಿಯಾಗಿದ್ದವು. ಇದೀಗ ಕರ್ನಾಟಕದ ಬಜೆಟ್‌ನಲ್ಲಿ ಮತ್ತೆ ಈ ವಿಚಾರವನ್ನು ಪ್ರಸ್ತಾವನೆ ಮಾಡುವ ಮೂಲಕ ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಅಭಿವೃದ್ಧಿಯ ಬಗ್ಗೆ ಮಹತ್ವದ ಹೆಜ್ಜೆ ಇರಿಸಲಾಗಿದೆ.

Bengaluru Second Airport

ಉದ್ಯಮಿ ಕಿರಣ್‌ ಮಜುಂದಾರ್‌ ಶಾ ಹೇಳಿದ್ದೇನು

ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ವಿಚಾರವು ಕರ್ನಾಟಕದಲ್ಲೇ ಪೈಪೋಟಿಗೆ ಕಾರಣವಾಗಿತ್ತು. ಅಲ್ಲದೆ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ವಿಚಾರವು ರಾಜಕೀಯ ಸ್ವರೂಪವನ್ನೂ ಸಹ ಪಡೆದುಕೊಂಡಿತ್ತು. ಇದೀಗ ಸರ್ಕಾರವೇ ಈ ವಿಚಾರವನ್ನು ಪ್ರಸ್ತಾವನೆ ಮಾಡಿದೆ. ಇದೀಗ ಈ ವಿಚಾರವಾಗಿ ರಿಯಾಕ್ಟ್‌ ಮಾಡಿರುವ ಉದ್ಯಮಿ ಕಿರಣ್‌ ಮಜುಂದಾರ್‌ ಶಾ ಅವರು, ಬೆಂಗಳೂರಿನ ಹೊಸ ಹಾಗೂ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ರಾಜಕೀಯ ಆದ್ಯತೆಗಳ ಆಧಾರದ ಮೇಲೆ ಅಲ್ಲ, ಸಂಚಾರ ದಟ್ಟಣೆಯ ಆಧಾರದ ಮೇಲೆ ಸ್ಥಳವನ್ನು ಆಯ್ಕೆ ಮಾಡಲಾಗುತ್ತದೆ ಎಂದು ಆಶಿಸೋಣ. ದಕ್ಷಿಣ ಬೆಂಗಳೂರು ಅತ್ಯಂತ ಜನದಟ್ಟಣೆಯಿಂದ ಕೂಡಿರುವುದರಿಂದ ಕನಕಪುರ ತಾರ್ಕಿಕವಾಗಿ ನೆಲಮಂಗಲಕ್ಕಿಂತ ಉತ್ತಮವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Bengaluru Second Airport: 2ನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಗುರುತಿಸಿದ ಜಾಗಗಳು

ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ 2026-27ರ ಬಜೆಟ್‌ನಲ್ಲಿ ಕೆಐಎಯಲ್ಲಿ ದಟ್ಟಣೆಯನ್ನು ಕಡಿಮೆ ಮಾಡಲು ಕರ್ನಾಟಕವು 2ನೇ ಬೆಂಗಳೂರು ವಿಮಾನ ನಿಲ್ದಾಣದ ಯೋಜನೆಗಳನ್ನು ಪ್ರಸ್ತಾಪಿಸಿದೆ. ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುತಿಸಲಾಗಿರುವ ಮೂರು ಪ್ರದೇಶಗಳ ವಿವರ.

1. ಕನಕಪುರ ರಸ್ತೆಯಲ್ಲಿರುವ ಚೂಡಹಳ್ಳಿ

2. ಕನಕಪುರ ರಸ್ತೆಯಲ್ಲಿರುವ ಸೋಮನಹಳ್ಳಿ

3. ಕುಣಿಗಲ್ ರಸ್ತೆಯಲ್ಲಿರುವ ನೆಲಮಂಗಲ

ಬಜೆಟ್ ಬಗ್ಗೆ ಕಿರಣ್ ಹೇಳಿದ್ದೇನು

2026 ರ ಭವಿಷ್ಯದ ಬಜೆಟ್‌ಗಾಗಿ ಕರ್ನಾಟಕ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಿರಣ್ ಅವರು ಶ್ಲಾಘಿಸಿದ್ದಾರೆ. ಬೆಂಗಳೂರಿನ ಮೂಲಸೌಕರ್ಯಕ್ಕೆ ಗಣನೀಯ ಬಜೆಟ್ ಹಂಚಿಕೆ, ಜೀನೋಮಿಕ್ಸ್ ಮತ್ತು ನಿಖರ ಔಷಧವನ್ನು ಮುಂದುವರಿಸುವಲ್ಲಿ ಬಯೋಟೆಕ್‌ಗೆ ಬೂಸ್ಟರ್ ಡೋಸ್, CHG ಅಪ್‌ಗ್ರೇಡ್, IBAB ಮತ್ತು C-CAMP ನಲ್ಲಿ AI CoE ಮತ್ತು AI ನೇತೃತ್ವದ ಮೆಡ್‌ಟೆಕ್ ಮತ್ತು ರೊಬೊಟಿಕ್ಸ್ ಮತ್ತು LEAP K-ಕಾಂಬಿನೇಟರ್ ಆಕ್ಸಿಲರೇಟರ್‌ನಲ್ಲಿ ಹೂಡಿಕೆಯಲ್ಲಿ ಗಮನಾರ್ಹ ಹೆಚ್ಚಳವನ್ನು ನಾನು ಪ್ರಶಂಸಿಸುತ್ತೇನೆ. ಮಹಿಳಾ ಉದ್ಯಮಿಗಳು ಸೇರಿದಂತೆ ಮಹಿಳಾ ಕೇಂದ್ರಿತ ಅಭಿವೃದ್ಧಿಯ ಮೇಲೆ ಗಮನಹರಿಸುವುದನ್ನು ನಾನು ಸ್ವಾಗತಿಸುತ್ತೇನೆ ಎಂದೂ ಅವರು ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+