Get Updates
Get notified of breaking news, exclusive insights, and must-see stories!

Bengaluru Second Airport Updates: ಬೆಂಗಳೂರು 2ನೇ ವಿಮಾನ ನಿಲ್ದಾಣ ವಿಳಂಬಕ್ಕೆ ಇದೇ ಕಾರಣ!

Bengaluru Second Airport Updates: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ವಿಚಾರವು ಕಳೆದ ಆರು ತಿಂಗಳುಗಳಿಂದಲೂ ಕಗ್ಗಂಟಾಗಿಯೇ ಉಳಿದಿದೆ. ಬೆಂಗಳೂರಿನಲ್ಲಿ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಜಾಗಗಳನ್ನು ಕೇಂದ್ರದಿಂದ ತಂಡ ಬಂದು ಅಧ್ಯಯನ ಮಾಡಿದ್ದರೂ ಮುಂದಿನ ಹಂತಕ್ಕೆ ಹೋಗುತ್ತಿಲ್ಲ. ಇದೀಗ ಕೊನೆಗೂ ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಕಾರ್ಯ ವಿಳಂಬವಾಗುತ್ತಿರುವುದೇಕೆ ಎನ್ನುವುದಕ್ಕೆ ಸಂಬಂಧಿಸಿಸದಂತೆ ನಿಖರ ಕಾರಣ ಸಿಕ್ಕಿದೆ.

ಬೆಂಗಳೂರು ಬೆಳೆಯುತ್ತಿದ್ದು, ಇದೀಗ ದೇವನಹಳ್ಳಿಯಲ್ಲಿರುವ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರ್ಯಾಯವಾಗಿ ಮತ್ತೊಂದು ವಿಮಾನ ನಿಲ್ದಾಣವನ್ನು ಬೆಂಗಳೂರಿನ ಸಮೀಪದಲ್ಲೇ ನಿರ್ಮಾಣ ಮಾಡಬೇಕು ಎಂದು ರಾಜ್ಯ ಕಾಂಗ್ರೆಸ್ ಸರ್ಕಾರವು ನಿರ್ಧರಿಸಿದ್ದು. ಇದಕ್ಕೆ ಬೇಕಾದ ಪ್ರಾಥಮಿಕ ಹಂತದ ಸಿದ್ಧತೆಗಳನ್ನೂ ಮಾಡಿಕೊಂಡಿದೆ. ಆದರೆ ಇಷ್ಟು ದಿನಗಳ ಕಾಲ ಕೇಂದ್ರ ಸರ್ಕಾರದ ವಿಳಂಬ ಧೋರಣೆಯಿಂದಲೇ ಈ ಯೋಜನೆ ವಿಳಂಬವಾಗುತ್ತಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಇದೀಗ ಕೊನೆಗೂ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ವಿಳಂಬಕ್ಕೆ ಕಾರಣ ಏನು ಎನ್ನುವುದು ಕೇಂದ್ರ ತಂಡದ ವರದಿಯಲ್ಲಿ ಉಲ್ಲೇಖವಾಗಿದ್ದು ಅದನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗಿದೆ.

Bengaluru Second Airport Project Faces Delay Here s the Real Reason Behind the Setback

ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಗುರುತಿಸಿರುವ ಮೂರು ಸ್ಥಳಗಳಲ್ಲೂ ವಿಮಾನ ಸಂಚಾರಕ್ಕೆ ಅಗತ್ಯವಾದ ಮಾರ್ಗಗಳು (Airway) ಇಲ್ಲದೆ ಇರುವುದು ಬಹುದೊಡ್ಡ ಸಮಸ್ಯೆ ಆಗಿದೆ ಎಂದು ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಸಾಧ್ಯತೆಗಳ ಬಗ್ಗೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಹೇಳಿದ್ದಾರೆ ಎಂದು "ಪ್ರಜಾವಾಣಿ" ವರದಿ ಮಾಡಿದೆ.

ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಧ್ಯಯನ ನಡೆಸಿದ್ದರಾದರೂ ಆ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ ಮಾಡುವುದಕ್ಕೆ ಮೂರು ತಿಂಗಳಿಗೂ ಹೆಚ್ಚು ಅವಧಿಯನ್ನು ತೆಗೆದುಕೊಂಡಿದ್ದಾರೆ. ಈ ತಂಡವು ಉದ್ದೇಶಿತ ಸ್ಥಳಗಳಲ್ಲಿ ಪರಿಶೀಲನೆ ನಡೆಸಿತ್ತು. ಅಲ್ಲದೇ ಇದೀಗ ಕಾರ್ಯಸಾಧ್ಯತಾ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗಿದೆ. ಈ ವರದಿಯಲ್ಲಿ ವಿಮಾನ ಸಂಚರಿಸುವ ವಾಯು ಮಾರ್ಗಗಳ ಕುರಿತು ಪ್ರಮುಖವಾಗಿ ಉಲ್ಲೇಖ ಮಾಡಲಾಗಿದೆ ಎಂದು ಹೇಳಲಾಗಿದೆ.

ಈಗಾಗಲೇ ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗುರುತಿಸಲಾಗಿರುವ ಸ್ಥಳಗಳಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಸಾಧ್ಯವಾಗದೆ ಇದ್ದರೆ ಹೊಸ ಜಾಗಗಗಳನ್ನು ಪರಿಶೀಲನೆ ಮಾಡುವ ಸಾಧ್ಯತೆ ಇದೆ. ರಾಜ್ಯ ಸರ್ಕಾರವು ಕನಕಪುರ ರಸ್ತೆಯ ಚೂಡಹಳ್ಳಿ- ಸೋಮನಹಳ್ಳಿ ಸುತ್ತಲಿನ ಹತ್ತಿರದ 4,800 ಎಕರೆ ಹಾಗೂ ಕರಿಯಾಳ ಕರೆನಹಳ್ಳಿ 5,000 ಎಕರೆ ಪ್ರದೇಶಗಳು, ನೆಲಮಂಗಲ- ಕುಣಿಗಲ್ ರಸ್ತೆಯ ಸೋಲದೇವನಹಳ್ಳಿ ಟೋಲ್ ಸಮೀಪದ 5,200 ಎಕರೆ ಪ್ರ- ದೇಶಗಳಲ್ಲಿ ವಿಮಾನ ಸಂಚಾರಕ್ಕೆ ಅಗತ್ಯವಾದ ವಾಯು ಮಾರ್ಗಗಳು ಸೀಮಿತವಾಗಿವೆ ಎಂದು ಹೇಳಲಾಗಿದೆ. ಇದು ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಹೊಸ ತಲೆನೋವಾಗಿ ಪರಿಣಮಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+