Bengaluru Weather: ಇಂದು ರಾಜಧಾನಿಗೆ ಭಾರೀ ಮಳೆ ಆರ್ಭಟ, ಯೆಲ್ಲೋ ಅಲರ್ಟ್: ನೆನ್ನೆ ಮಳೆಗೆ ಸಂಚಾರ ಅಸ್ತವ್ಯಸ್ತ!
ಬೆಂಗಳೂರು, ಜೂನ್ 11: ಬೆಂಗಳೂರಿನಾದ್ಯಂತ ಮಂಗಳವಾರ ರಾತ್ರಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಸಂಜೆ ಸುರಿಯುತ್ತಿದ್ದ ಮಳೆ ಇದೀಗ ರಾತ್ರಿಗೆ ಶಿಫ್ಟ್ ಆದಂತೆ ಕಾಣುತ್ತಿದೆ. ಜೋರು ಮಳೆಗೆ ಪ್ರಮುಖ ರಸ್ತೆಗಳೇ ಜಲಾವೃತಗೊಂಡಿವೆ. ಮರ ಕೊಂಬೆಗಳು ಅಲ್ಲಲ್ಲಿ ಮುರಿದು ಬಿದ್ದಿವೆ. ಬೊಮ್ಮನಹಳ್ಳಿಯಲ್ಲಿ ಬರೋಬ್ಬರಿ 54.5 ಮಿಲಿ ಮೀಟರ್ ಮಳೆ ದಾಖಲಾಗಿದೆ. ಕೋರಮಂಗಲ, ಸಿಂಗಸಂದ್ರ ಸೇರಿದಂತೆ ಈ ಭಾಗದ ಸುತ್ತಮುತ್ತ ಹೆಚ್ಚಿನ ಮಳೆ ಆಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಮಾಹಿತಿ ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬಾರಿ ಮುಂಗಾರು ಮಳೆ ಆರ್ಭಟಿಸುವುದು ನಿಕ್ಕಿಯಾಗಿದೆ. ಈ ಕಾರಣದಿಂದ ಇಂದು ಜೂನ್ 11ರಂದು ಬುಧವಾರ 'ಯೆಲ್ಲೋ ಅಲರ್ಟ್' ನೀಡಲಾಗಿದೆ. ಕನಿಷ್ಠ 65.5 ಮಿಲಿ ಮೀಟರ್ನಿಂದ 110.5 ಮಿಲಿ ಮೀಟರ್ವರೆಗೆ ಮಳೆ ದಾಖಲಾಗುವ ನಿರೀಕ್ಷೆ ಇದೆ. ಅಂದೆ ಬೆಂಗಳೂರಿನಲ್ಲಿ ಇಂದು ಸಾಧಾರಣದಿಂದ ಭಾರೀ ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ನೆನ್ನೆ ಸುರಿದ ಮಳೆಯಿಂದಾಗಿ ನಗರದಲ್ಲಿ ಸಾಕಷ್ಟು ಸಮಸ್ಯೆ ಉಂಟಾಗಿವೆ. ಕೋರಮಂಗಲದಲ್ಲಿ 41.5 ಮಿ.ಮೀ, ಸಿಂಗಸಂದ್ರ-2 36.5 ಮಿ.ಮೀ, ಬಿಟಿಎಂ ಬಡಾವಣೆ- 34 ಮಿ.ಮೀ, ಎಚ್ಎಸ್ಆರ್ ಬಡಾವಣೆ 28 ಮಿ.ಮೀ, ಸಂಪಂಗಿರಾಮನಗರ 26, ಎಚ್ಎಎಲ್ ವಿಮಾನ ನಿಲ್ದಾಣ 21.5, ಮಿ.ಮೀ, ಮಾರತ್ತಹಳ್ಳಿ 21 ಮಿ.ಮೀ, ಪುಲಕೇಶಿ ನಗರ 19.50 ಮಿ.ಮೀ, ದಯಾನಂದನಗರ 16.5 ಮಿ.ಮೀ, ಬೆಳ್ಳಂದೂರು 15 ಮಿ.ಮೀ, ಬಿಳೇಕಹಳ್ಳಿ 15 ಮಿ.ಮೀ, ವಿವಿ ಪುರಂ 14ಮಿ.ಮೀ, ಅರಕೇರೆ 13ಮಿ.ಮೀ, ಹೊರಮಾವು 13ಮಿ.ಮೀ, ಹಂಪಿನಗರ 13ಮಿ.ಮೀ. ಮಳೆ ಆಗಿದೆ. ಉಳಿದೆ ಕೆಲವು ಕಡೆಗಳಲ್ಲಿ ಸಾಮಾನ್ಯ ಮಳೆ ದಾಖಲಾಗಿದೆ.
ಮಳೆ ನೀರು ನಿಂತು ಸಮಸ್ಯೆ: ಟ್ರಾಫಿಕ್ ಸಲಹೆ
ನೆನ್ನೆ ಹಗುರ ಮಳೆ ಬಂದ ಪ್ರದೇಶಗಳಲ್ಲಿ ಸಮಸ್ಯೆ ಹೆಚ್ಚಾಗಿಲ್ಲ. ಆದರೆ ಹೆಚ್ಚು ಮಳೆ ದಾಖಲಾದ ಪ್ರದೇಶಗಳ ಬಡಾವಣೆಗಳ ತಗ್ಗು ಪ್ರದೇಶಗಳಲ್ಲಿ, ಪ್ರಮುಖ ರಸ್ತೆಗಳಲ್ಲಿ ನೀರು ನಿಂತು ಸಮಸ್ಯೆ ಆಗಿದೆ.ಇಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಲ್ಲಿ ಮಳೆ ನೀರು ನಿಂತಿರುವುದರಿಂದ ಸಿಂಗಸಂದ್ರ ಮೆಟ್ರೋ ನಿಲ್ದಾಣದಿಂದ ನಗರದ ಕಡೆಗೆ ಸಂಚಾರ ಸಮಸ್ಯೆ ಉಂಟಾಯಿತು. ಕೆಲವೆಡೆ ಬೆಳಗ್ಗೆವರೆಗೂ ನೀರು ನಿಂತಿದ್ದು ಕಂಡು ಬಂತು.
ಇನ್ನು ಆಟೋ ಮಾರ್ಟ್ ಬಳಿ ಮಳೆ ನೀರು ನಿಂತಿರುವುದರಿಂದ 14 ನೇ ಮುಖ್ಯ ರಸ್ತೆ ಎಚ್ಎಸ್ಆರ್ ಲೇಔಟ್ ಕಡೆಗೆ ಸಂಚಾರ ನಿಧಾನಗತಿಯಲ್ಲಿರಲಿದೆ. ಅದೇ ರೀತಿ ಭದ್ರಪ್ಪ ಲೇಔಟ್ ರೈಲ್ವೆ ಕೆಳ ಸೇತುವೆಯ ರಸ್ತೆಯಲ್ಲಿ ಎರಡು ಅಡಿಯಷ್ಟು ಮಳೆ ನೀರು ನಿಂತಿರುವುದರಿಂದ ಡಾಲರ್ಸ್ ಕಾಲೋನಿ ಕಡೆಗೆ ನಿಧಾನಗತಿಯ ವಾಹನ ಸಂಚಾರವಿರುತ್ತದೆ ಎಂದು ಬೆಂಗಳೂರು ಸಂಚಾರಿ ಪೊಲೀಸರು ಮಾಹಿತಿ ನಿಡಿದ್ದಾರೆ.
-
Bengaluru Rain: ಬೆಂಗಳೂರಿನಲ್ಲಿ ತಾಪಮಾನ ಕುಸಿತ: ಸುಡುಬಿಸಿಲಿಗೆ ಬ್ರೇಕ್ ಹಾಕಿದ ವರ್ಷದ ಮೊದಲ ಮಳೆ, ತಂಪಾದ ಸಿಲಿಕಾನ್ ಸಿಟಿ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ? -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು












Click it and Unblock the Notifications