ಆಲಿಕಲ್ಲು ಮಳೆಯಲ್ಲಿ ಮಿಂದು ತಂಪಾದ ಬೆಂಗಳೂರು
ಬೇಸಿಗೆ ಬಿಸಿಲಿನ ತಾಪಕ್ಕೆ ಬೆಂದಿದ್ದ ಬೆಂಗಳೂರಿಗೆ ಶನಿವಾರ ಸಂಜೆ ಸುರಿದ ಆಲಿಕಲ್ಲು ಸಹಿತ ಮಳೆ ತಂಪೆರೆದಿದೆ. ಗುಡುಗು ಸಹಿತ ಭಾರಿ ಮಳೆ ಇನ್ನೂ ಹಲವೆಡೆ ಮುಂದುವರೆದಿದೆ.
ಬೆಂಗಳೂರು, ಏಪ್ರಿಲ್ 29: ಬೇಸಿಗೆ ಬಿಸಿಲಿನ ತಾಪಕ್ಕೆ ಬೆಂದಿದ್ದ ಬೆಂಗಳೂರಿಗೆ ಶನಿವಾರ ಸಂಜೆ ಸುರಿದ ಆಲಿಕಲ್ಲು ಸಹಿತ ಮಳೆ ತಂಪೆರೆದಿದೆ. ಗುಡುಗು ಸಹಿತ ಜೋರು ಮಳೆ ಇನ್ನೂ ಹಲವೆಡೆ ಮುಂದುವರೆದಿದೆ.
ಬೆಂಗಳೂರಿನ ರಾಜರಾಜೇಶ್ವರಿನಗರ, ಕೆಂಗೇರಿ, ನಾಯಂಡಹಳ್ಳಿ, ಬಸವನಗುಡಿ, ಜಯನಗರ, ಶಿವಾಜಿನಗರ, ಆಡುಗೋಡಿ ಮುಂತಾದೆಡೆ ಆಲಿಕಲ್ಲು ಮಳೆಯನ್ನು ಕಂಡ ಜನರು ಆನಂದದಿಂದ ಕೆಲ ಹೊತ್ತು ಮಳೆಯಲ್ಲಿ ನೆಂದು ನಂತರ ಮನೆ ಸೇರಿದ್ದಾರೆ.

ಕೆಂಗೇರಿಯಲ್ಲಿ ಮರದ ಕೊಂಬೆ ಬಿದ್ದ ಕಾರಣ ಕಾರೊಂದು ಜಖಂಗೊಂಡಿದೆ. ಕೋರಮಂಗಲ, ಸಿಲ್ಕ್ ಬೋರ್ಡ್, ಬನಶಂಕರಿ ಹೊರ ವರ್ತುಲ ರಸ್ತೆ, ಕೆ.ಆರ್ ಮಾರುಕಟ್ಟೆ, ಜೆಸಿ ರಸ್ತೆ, ಜಯದೇವ ಮೇಲ್ಸೇತುವೆ, ಹಡ್ಸನ್ ಸರ್ಕಲ್, ಲಾಲ್ ಬಾಗ್, ಗೂಡ್ಸ್ ಶೆಡ್ ರಸ್ತೆ, ಮೈಸೂರು ರಸ್ತೆ, ಮೇಖ್ರಿ ವೃತ್ತ, ಹೆಬ್ಬಾಳ ಸೇರಿದಂತೆ ಅನೇಕ ಕಡೆ ಟ್ರಾಫಿಕ್ ಜಾಮ್ ಸಮಸ್ಯೆ ಸಂಜೆ ಹೊತ್ತು ಹೆಚ್ಚಾಗಿತ್ತು.
Hail! Bangalore. #bangalorerain #hailstorm pic.twitter.com/Qu8GoYO4DH
— Subhashini (@NeelaVanam) April 29, 2017
ಹವಾಮಾನ ಮುನ್ಸೂಚನೆ: ಕರ್ನಾಟಕದ ಒಳನಾಡು, ಬೆಂಗಳೂರು ಗ್ರಾಮಾಂತರ ಹಾಗೂ ಇನ್ನಿತರ ಭಾಗಗಳಲ್ಲಿ ಪೂರ್ವ ಮುಂಗಾರು ಮಾರುತಗಳು ಇನ್ನೆರಡು ದಿನಗಳ ಕಾಲ ಗುಡುಗು ಸಹಿತ ಮಳೆ ಸುರಿಸಲಿವೆ. ಕೆಲ ಪ್ರದೇಶದಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆಯೂ ಇದೆ ಎಂದು ಸ್ಕೈಮೆಟ್ ವೆದರ್ ವರದಿ ಮಾಡಿದೆ.
More From
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Bengaluru Rain: ಬೆಂಗಳೂರಲ್ಲಿ ಮಳೆ ಬಂದಾಗ ಪವರ್ ಕಟ್ ಆಗುವುದ್ಯಾಕೆ, ಡಾಕ್ಟರ್ ಪ್ರಶ್ನೆಗೆ ನೆಟ್ಟಿಗರು ಹೇಳಿದ್ದೇನು -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ












Click it and Unblock the Notifications