ಇತಿಹಾಸ ಸೇರಲಿದೆ ಲಾಕಪ್ ಡೆತ್, ಸಿಎಂ ರಾಜೀನಾಮೆಗೆ ಸಾಕ್ಷಿಯಾಗಿದ್ದ ಪೊಲೀಸ್ ಠಾಣೆ
ಬೆಂಗಳೂರು, ಫೆಬ್ರವರಿ 20: ಕರ್ನಾಟಕದ ಮೊದಲ ಲಾಕಪ್ ಡೆತ್, ಪ್ರತಿಪಕ್ಷಗಳ ಆಕ್ರೋಶ, ಮುಖ್ಯಮಂತ್ರಿಗಳ ರಾಜೀನಾಮೆಗೆ ಸಾಕ್ಷಿಯಾಗಿದ್ದ ಬೆಂಗಳೂರು ನಗರದ ಕಟ್ಟಡವೊಂದು ಇತಿಹಾಸ ಸೇರಲಿದೆ. ಈ ಕಟ್ಟದಲ್ಲಿದ್ದ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದು ಆಗ ಮುಖ್ಯಮಂತ್ರಿಯಾಗಿದ್ದ ಎಸ್. ನಿಜಲಿಂಗಪ್ಪ ರಾಜೀನಾಮೆಗೆ ಕಾರಣವಾಗಿತ್ತು. ಈ ಕಟ್ಟಡ ಇರುವುದು ಬೆಂಗಳೂರು ನಗರದ ಶೇಷಾದ್ರಿಪುರಂನಲ್ಲಿ.
ಶೇಷಾದ್ರಿಪುರಂ ಪೊಲೀಸ್ ಠಾಣೆಯ ಕಟ್ಟಡವನ್ನು ಕೆಡವಿ ಹೊಸ ಕಟ್ಟವನ್ನು ನಿರ್ಮಾಣ ಮಾಡಲಾಗುತ್ತದೆ. ಈಗಾಗಲೇ ಪೊಲೀಸ್ ಠಾಣೆಯನ್ನು ಬೇರೆ ಕಟ್ಟಡಕ್ಕೆ ಸ್ಥಳಾಂತರ ಮಾಡಲಾಗಿದೆ. ಹೊಸ ಕಟ್ಟಡ ನಿರ್ಮಾಣ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದೆ.

1893ರಲ್ಲಿ ಮೈಸೂರು ದಿವಾನರಾಗಿದ್ದ ಶೇಷಾದ್ರಿ ಅಯ್ಯರ್ ಅವರ ಹೆಸರಿನಲ್ಲಿ ನಿರ್ಮಾಣವಾದ ಬಡಾವಣೆ ಶೇಷಾದ್ರಿಪುರಂ. ಈ ಬಡಾವಣೆಯಲ್ಲಿ ಸರ್ಕಾರಿ ಕಛೇರಿಯಾಗಿದ್ದ ಕಟ್ಟಡ ಬಳಿಕ ಪೊಲೀಸ್ ಠಾಣೆಯಾಗಿತ್ತು. ದಶಕಗಳ ಇತಿಹಾಸ ಹೊಂದಿರುವ ಈ ಕಟ್ಟಡವನ್ನು ಈಗ ನೆಲಸಮಗೊಳಿಸಲಾಗುತ್ತಿದೆ.
ಸಿಎಂ ರಾಜೀನಾಮೆ: 1958, ಏಪ್ರಿಲ್ 9ರಂದು ಕಳ್ಳತನ ಪ್ರಕರಣದಲ್ಲಿ ಪೊಲೀಸರು ಮುನಿಯಮ್ಮ ಎಂಬ ಮಹಿಳೆಯನ್ನು ಬಂಧಿಸಿದ್ದರು. ಮಹಿಳೆ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪೊಲೀಸರ ವಶದಲ್ಲಿರುವಾಗಲೇ ಮೃತಪಟ್ಟಿದ್ದರು. ಕರ್ನಾಟಕದಲ್ಲಿ ದಾಖಲಾದ ಮೊದಲ ಲಾಕ್ ಅಪ್ ಡೆತ್ ಪ್ರಕರಣ ಇದು ಎಂದು ಈಗಲೂ ಹಲವು ಅಧಿಕಾರಿಗಳು ನೆನಪು ಮಾಡಿಕೊಳ್ಳುತ್ತಾರೆ.
ಆಗ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು ಎಸ್. ನಿಜಲಿಂಗಪ್ಪ. ಈ ಪ್ರಕರಣದ ಸಮಯದಲ್ಲಿ ವಿಧಾನಸಭೆ ಅಧಿವೇಶನ ನಡೆಯುತ್ತಿತ್ತು. ಮಹಿಳೆಯ ಲಾಕ್ ಅಪ್ ಡೆತ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಪ್ರಜಾ ಸೋಷಿಯಲಿಸ್ಟ್ ಪಕ್ಷದ ವಿರೋಧ ಪಕ್ಷದ ನಾಯಕ ಶಾಂತವೇರಿ ಗೋಪಾಲ ಗೌಡರು ಸರ್ಕಾರದ ವಿರುದ್ಧ ಆಕ್ರೋಶಗೊಂಡರು.
ಪ್ರತಿಪಕ್ಷಗಳ ಆಕ್ರೋಶದ ನಡುವೆ ಗೃಹ ಸಚಿವರಾಗಿದ್ದ ಪೂಣಚ್ಚ ತಣ್ಣಗಾದರು. ಮುಖ್ಯಮಂತ್ರಿಯಾಗಿದ್ದ ಎಸ್. ನಿಜಲಿಂಗಪ್ಪ ಪೊಲೀಸರಿಗೆ ಮುನಿಯಮ್ಮರನ್ನು ಸಾಯಿಸುವ ಉದ್ದೇಶವಿರಲಿಲ್ಲ ಎಂದು ಹೇಳಿಕೆ ನೀಡಿಬಿಟ್ಟರು. ಇದು ಸರ್ಕಾರ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ಒಪ್ಪಿಕೊಂಡ ಹಾಗೆ ಎಂದು ದೊಡ್ಡ ಗದ್ದಲಕ್ಕೆ ಕಾರಣವಾಯಿತು.
ಈ ಘಟನೆ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಯಿತು. ಇದು ನಡೆದದ್ದು 1958ರ ಏಪ್ರಿಲ್ನಲ್ಲಿ. ಮೇ 16, 1958ರಲ್ಲಿ ಹೈಕಮಾಂಡ್ ನಾಯಕರು ಬಂದರು. ಶಾಸಕರ ಅಭಿಪ್ರಾಯ ಸಂಗ್ರಹಣೆ ಮಾಡಿ ಮುಖ್ಯಮಂತ್ರಿಗಳ ರಾಜೀನಾಮೆಗೆ ಸೂಚನೆ ನೀಡಿದರು. ಎಸ್. ನಿಜಲಿಂಗಪ್ಪ ರಾಜೀನಾಮೆ ನೀಡಿ, ಬಿ. ಡಿ. ಜತ್ತಿ ಮುಖ್ಯಮಂತ್ರಿಯಾದರು.
ಶೇಷಾದ್ರಿಪುರಂ ಪೊಲೀಸ್ ಠಾಣೆ ಕಟ್ಟಡಕ್ಕೆ ಇನ್ನೊಂದು ಇತಿಹಾಸವಿದೆ. ಬೆಂಗಳೂರು ನಗರದ ಈ ಸ್ಟೇಷನ್ನಲ್ಲಿ ಮಾತ್ರ ಗಂಟೆಗೊಮ್ಮೆ ಬೆಲ್ ಬಾರಿಸಲಾಗುತ್ತಿತ್ತು. ವಾಚ್ ಇಲ್ಲದ ಸಮಯದಲ್ಲಿ ಗಸ್ತು ತಿರುಗುವ ಪೊಲೀಸರಿಗೆ ಸಹಾಯವಾಗಲು ಸಂಜೆ 6 ರಿಂದ ಬೆಳಗ್ಗೆ 6 ಗಂಟೆಯ ತನಕ ಸ್ಟೇಷನ್ನಲ್ಲಿ ಬೆಲ್ ಬಾರಿಸಲಾಗುತ್ತಿತ್ತು.
ಬೆಂಗಳೂರು ನಗರದ ಹಲವು ಹಳೆಯ ಪೊಲೀಸ್ ಠಾಣೆ ಕಟ್ಟಡಗಳನ್ನು ಕೆಡವಿ ಹೊಸ ಕಟ್ಟಡವನ್ನು ನಿರ್ಮಾಣ ಮಾಡಲಾಗುತ್ತಿದೆ. ಈಗ ಇತಿಹಾಸ ಹೊಂದಿರುವ ಶೇಷಾದ್ರಿಪುರಂ ಕಟ್ಟಡವನ್ನು ಕೆಡವಲಾಗುತ್ತಿದೆ.
-
ದಾವಣಗೆರೆ ಬೈಎಲೆಕ್ಷನ್ ಬೆನ್ನಲ್ಲೇ ಭಿನ್ನಮತ ಸ್ಫೋಟ: KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ -
Vijay: ಇದು ತಲೆಮಾರಿನ ಬದಲಾವಣೆಗಾಗಿ ನಡೆಯುತ್ತಿರುವ ಚುನಾವಣೆ: ಕಾರ್ಯಕರ್ತರಿಗೆ ದಳಪತಿ ವಿಜಯ್ ವಿಶೇಷ ಕರೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ












Click it and Unblock the Notifications