ಬೆಂಗಳೂರಿನ ಉದ್ಯಮಿಗೆ ಕೇರಳ ಮಾಜಿ ಸಿಎಂ ದಂಡ ಕಟ್ಬೇಕು?
ಬೆಂಗಳೂರು, ಅಕ್ಟೋಬರ್ 25: ವಂಚನೆ ಪ್ರಕರಣದಲ್ಲಿ ಸಿಲುಕಿರುವ ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರಿಗೆ ಬೆಂಗಳೂರಿನ ಸೆಷನ್ಸ್ ಕೋರ್ಟ್ ಭಾರಿ ದಂಡ ವಿಧಿಸಿದೆ. ಬೆಂಗಳೂರು ಮೂಲದ ಉದ್ಯಮಿ ಎಂಕೆ ಕುರುವಿಲ್ಲಾ ಅವರಿಗೆ 1.5 ಕೋಟಿ ರು ಪಾವತಿಸುವಂತೆ ಸೂಚಿಸಿದೆ.
ಬಹುಕೋಟಿ ಸೋಲಾರ್ ಪ್ಯಾನಲ್ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಉದ್ಯಮಿಗೆ ವಂಚಿಸಿದ ಆರೋಪವನ್ನು ಉಮ್ಮನ್ ಚಾಂಡಿ ಹಾಗೂ ಅವರ ಸಹಚರರು ಹೊತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಷನ್ಸ್ ಕೋರ್ಟಿನ ಜಡ್ಜ್ ಎನ್ ಆರ್ ಕೇಶವ ಅವರು ex-parte ನಂತೆ ಆದೇಶ ನೀಡಿದ್ದಾರೆ. ಉಮ್ಮನ್ ಚಾಂಡಿ ಅವರು ಈ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಬಹುದಾಗಿದೆ.['ಸೋಲಾರ್' ಸರಿತಾಗೆ ಗಿಣಿಪಾಠ ಹೇಳಿಕೊಟ್ಟ ಆಡಿಯೋ ಲೀಕ್]

ಏನಿದು ಪ್ರಕರಣ: ಸೋಲಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಮ್ಮನ್ ಚಾಂಡಿ ಅವರ ಸಹಚರರು ಕುರುವಿಲ್ಲಾ ಅವರನ್ನು ನವದೆಹಲಿಗೆ ಕರೆಸಿಕೊಂಡು ಲಂಚ ಸ್ವೀಕರಿಸಿದ್ದಾರೆ. ಲಂಚದ ಮೊತ್ತ 1 ಕೋಟಿ 35 ಸಾವಿರ ರುಗಳಾಗಿರುತ್ತದೆ. ಈ ಕುರಿತಂತೆ ಕೋರ್ಟಿಗೆ ಚಲನ್ ಕಾಪಿ ಹಾಗೂ ವಿವಿಧ ಬ್ಯಾಂಕುಗಳಿಗೆ ಹಣ ವರ್ಗಾವಣೆ ಮಾಡಿದ ದಾಖಲೆಗಳನ್ನು ನೀಡಿದ್ದಾರೆ.[ಸೋಲಾರ್ ಹಗರಣ: ಸರಿತಾ ಹಾಕಿದ 'ಬಾಂಬ್' ಗೆ ಪುಢಾರಿಗಳು ಶಾಕ್]
ಈ ಪ್ರಕರಣದಲ್ಲಿ ಚಾಂಡಿ ಅವರು ಐದನೇ ಆರೋಪಿಯಾಗಿದ್ದಾರೆ. ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬೆಲ್ಜಿತ್, SCOSSA ಶಿಕ್ಷಣ ಸಲಹೆಗಾರ ಸಂಸ್ಥೆ ಮಾಲೀಕ ಬಿನು ನಾಯರ್ ಮುಂತಾದವರು ಆರೋಪಿಗಳಾಗಿದ್ದಾರೆ. ಉಮ್ಮನ್ ಚಾಂಡಿ ಅವರ ಸಂಬಂಧಿ ಆಂಡ್ರೂಸ್ ಈ ಪ್ರಕರಣದ ಮುಖ್ಯ ಆರೋಪಿಯಾಗಿದ್ದಾನೆ. ಸೋಲಾರ್ ಪ್ರಕರಣದ ಆರೋಪಿ ಸರಿತಾ ನಾಯರ್ ಮೂಲಕ ಚಾಂಡಿ ಅವರ ಪರಿಚಯವಾಯಿತು. ಸೋಲಾರ್ ಪ್ಯಾನಲ್ ಫ್ರಾಂಚೈಸಿ ಕೊಡಿಸುವುದಾಗಿ ಸರಿತಾ ಭರವಸೆ ನೀಡಿದ್ದರು ಎಂದು ಕುರುವಿಲ್ಲಾ ಹೇಳಿದ್ದಾರೆ.['ನನಗೆ ಗಲ್ಲು ಶಿಕ್ಷೆ ಕೊಡಿ' ಎಂದ 'ಸೋಲಾರ್' ಅಪರಾಧಿ]
-
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ












Click it and Unblock the Notifications