ಬೆಂಗಳೂರಿನಲ್ಲಿ ದೇಶದ ಮೊದಲ 3ಡಿ ಪ್ರಿಂಟೆಡ್ ಅಂಚೆ ಕಚೇರಿ : ಶುಕ್ರವಾರ ಉದ್ಘಾಟನೆ
ದೇಶದ ಮೊದಲ 3ಡಿ-ಮುದ್ರಿತ ಅಂಚೆ ಕಚೇರಿ ಬೆಂಗಳೂರಿನಲ್ಲಿ ಸೇವೆಗೆ ಸಿದ್ಧವಾಗಿದೆ. ಶುಕ್ರವಾರ ಕೇಂದ್ರ ಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಅವರು ರಿಮೋಟ್ ಮೂಲಕ ಹಲಸೂರು ಬಜಾರ್ ನಲ್ಲಿರುವ ಅಂಚೇ ಕಚೇರಿಯನ್ನು ಉದ್ಘಾಟಿಸಲಿದ್ದಾರೆ. ಮಾರ್ಚ್ 21ರಂದು ಅಂಚೆ ಕಚೇರಿ ನಿರ್ಮಾಣ ಕೆಲಸ ಶುರುವಾಗಿತ್ತು. ಕೇವಲ 44 ದಿನಗಳಲ್ಲಿ ಈ ಅಂಚೆಕಚೇರಿಯನ್ನು ನಿರ್ಮಿಸಲಾಗಿದೆ.
ಉದ್ಘಾಟನೆಯಾದ ಬಳಿಕ ಅಶ್ವಿನ್ ವೈಷ್ಣವ್ ಬೆಂಗಳೂರಿಗೆ ಭೇಟಿ ನೀಡಲಿದ್ದು, ವಿಶಿಷ್ಠವಾಗಿ ರಚನೆಯಾಗಿರುವ ಅಂಚೆಕಚೇರಿಯನ್ನು ವೀಕ್ಷಿಸಲಿದ್ದಾರೆ, 'ಕೇಂಬ್ರಿಡ್ಜ್ ಲೇಔಟ್ ಅಂಚೆ ಕಚೇರಿ' ಎಂದು ಹೆಸರಿಸಲಾಗಿದೆ.

ಕಟ್ಟಡದ ರಚನೆಯು ಮೇ 3 ರೊಳಗೆ ಪೂರ್ಣಗೊಂಡಿದ್ದರೂ, ಒಳಚರಂಡಿ ಮತ್ತು ನೀರಿನ ಜಾಲವನ್ನು ನಿರ್ಮಿಸಲು ಎರಡು ತಿಂಗಳು ಸಮಯ ತೆಗೆದುಕೊಂಡಿತು. ಕಟ್ಟಡ ಉದ್ಘಾಟನೆಗೆ ಸಚಿವರ ಲಭ್ಯತೆಗೆ ಇನ್ನೂ ಒಂದು ತಿಂಗಳು ಕಾಯಲಾಗಿದೆ. ಹೊಸ ಅಂಚೆ ಕಚೇರಿ ಉದ್ಘಾಟನೆಯಾದ ಬಳಿಕ ಹಲಸೂರು ಬಜಾರ್ನಲ್ಲಿರುವ ಪ್ರಸ್ತುತ ಅಂಚೆ ಕಚೇರಿಯನ್ನು ಮುಚ್ಚಲಾಗುವುದು ಮತ್ತು ಸಿಬ್ಬಂದಿ ಮತ್ತು ಸಾಮಗ್ರಿಗಳನ್ನು ಇಲ್ಲಿಗೆ ಸ್ಥಳಾಂತರಿಸಲಾಗುವುದು ಎಂದು ಮೂಲಗಳು ತಿಳಿಸಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.
66 ಲಕ್ಷ ರೂಪಾಯಿ ವೆಚ್ಚ
"ಎಲ್ & ಟಿ ಈ ಕಟ್ಟಡವು ನಿರ್ಮಾಣ ಮಾಡಿದೆ. 1,100 ಚದರ ಅಡಿ ವಿಸ್ತೀರ್ಣದಲ್ಲಿ ಕಟ್ಟಡ ತಲೆ ಎತ್ತಿದೆ. 3ಡಿ ಕಾಂಕ್ರೀಟ್ ಮುದ್ರಣಕ್ಕಾಗಿ ತೆರಿಗೆ ಸೇರಿ ಸುಮಾರು 26 ಲಕ್ಷ ರೂಪಾಯಿ ವ್ಯಯಿಸಲಾಗಿದೆ. ಪವರ್, ಡ್ರೈನೇಜ್ ಸಂಪರ್ಕ ಮತ್ತು ನೀರಿನ ಸಂಪರ್ಕದಂತಹ ಇತರ ವೆಚ್ಚಗಳನ್ನು ಅಂಚೆ ಇಲಾಖೆಯ ಸಿವಿಲ್ ವಿಂಗ್ ಸುಮಾರು 40 ಲಕ್ಷ ರೂಪಾಯಿ ವೆಚ್ಚದಲ್ಲಿ ಮಾಡಿದೆ," ಎಂದು ಮೂಲಗಳು ತಿಳಿಸಿವೆ.
ವಿನ್ಯಾಸದ ಪ್ರಕಾರ ಕಟ್ಟಡವನ್ನು ಸೈಟ್ನಲ್ಲಿ ಮುದ್ರಿಸಲಾಗಿದೆ. "ಇದು ಬಹುಶಃ ಈ ಪ್ರಕ್ರಿಯೆಯಿಂದ ನಿರ್ಮಿಸಲಾದ ಮೊದಲ ಸಾರ್ವಜನಿಕ ಕಟ್ಟಡವಾಗಿದೆ" ಎಂದು ಪೋಸ್ಟ್ ಆಫೀಸ್ ಅಧಿಕಾರಿಗಳು ಹೇಳಿದ್ದಾರೆ.
ಇತರ 3ಡಿ-ಮುದ್ರಿತ ಕಟ್ಟಡಗಳನ್ನು ಬೇರೆಡೆ ಮುದ್ರಣ ಮಾಡಿ ನಂತರ ಸೈಟ್ಗಳಲ್ಲಿ ತಂದು ಜೋಡಿಸಲಾಗುತ್ತದೆ. ಆದರೆ ಇದನ್ನು ಸೈಟ್ನಲ್ಲೇ ಮುದ್ರಣ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ದೇಶದಲ್ಲಿ ಹಲವು ಪ್ರಥಮಗಳಿಗೆ ಸಾಕ್ಷಿಯಾಗಿರುವ ಬೆಂಗಳೂರು, ಈಗ 3-ಡಿ ಕಟ್ಟಡ ಅಂಚೆ ಕಚೇರಿ ಹೊಂದಿದ ನಗರಗಳಲ್ಲಿ ಮೊದಲನೆಯದಾಗಿದೆ. ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಕಟ್ಟಿದ ಕಟ್ಟಡ ಹೇಗಿರುತ್ತದೆ ಎನ್ನುವ ಕುತೂಹಲ ಇದ್ದರೆ ನೀವೂ ಒಮ್ಮೆ ಭೇಟಿ ನೀಡಬಹುದು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications