ಬೆಂಗಳೂರಿನಲ್ಲಿ ದೇಶದ ಮೊದಲ 3ಡಿ ಪ್ರಿಂಟೆಡ್ ಅಂಚೆ ಕಚೇರಿ : ಶುಕ್ರವಾರ ಉದ್ಘಾಟನೆ
ದೇಶದ ಮೊದಲ 3ಡಿ-ಮುದ್ರಿತ ಅಂಚೆ ಕಚೇರಿ ಬೆಂಗಳೂರಿನಲ್ಲಿ ಸೇವೆಗೆ ಸಿದ್ಧವಾಗಿದೆ. ಶುಕ್ರವಾರ ಕೇಂದ್ರ ಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಅವರು ರಿಮೋಟ್ ಮೂಲಕ ಹಲಸೂರು ಬಜಾರ್ ನಲ್ಲಿರುವ ಅಂಚೇ ಕಚೇರಿಯನ್ನು ಉದ್ಘಾಟಿಸಲಿದ್ದಾರೆ. ಮಾರ್ಚ್ 21ರಂದು ಅಂಚೆ ಕಚೇರಿ ನಿರ್ಮಾಣ ಕೆಲಸ ಶುರುವಾಗಿತ್ತು. ಕೇವಲ 44 ದಿನಗಳಲ್ಲಿ ಈ ಅಂಚೆಕಚೇರಿಯನ್ನು ನಿರ್ಮಿಸಲಾಗಿದೆ.
ಉದ್ಘಾಟನೆಯಾದ ಬಳಿಕ ಅಶ್ವಿನ್ ವೈಷ್ಣವ್ ಬೆಂಗಳೂರಿಗೆ ಭೇಟಿ ನೀಡಲಿದ್ದು, ವಿಶಿಷ್ಠವಾಗಿ ರಚನೆಯಾಗಿರುವ ಅಂಚೆಕಚೇರಿಯನ್ನು ವೀಕ್ಷಿಸಲಿದ್ದಾರೆ, 'ಕೇಂಬ್ರಿಡ್ಜ್ ಲೇಔಟ್ ಅಂಚೆ ಕಚೇರಿ' ಎಂದು ಹೆಸರಿಸಲಾಗಿದೆ.

ಕಟ್ಟಡದ ರಚನೆಯು ಮೇ 3 ರೊಳಗೆ ಪೂರ್ಣಗೊಂಡಿದ್ದರೂ, ಒಳಚರಂಡಿ ಮತ್ತು ನೀರಿನ ಜಾಲವನ್ನು ನಿರ್ಮಿಸಲು ಎರಡು ತಿಂಗಳು ಸಮಯ ತೆಗೆದುಕೊಂಡಿತು. ಕಟ್ಟಡ ಉದ್ಘಾಟನೆಗೆ ಸಚಿವರ ಲಭ್ಯತೆಗೆ ಇನ್ನೂ ಒಂದು ತಿಂಗಳು ಕಾಯಲಾಗಿದೆ. ಹೊಸ ಅಂಚೆ ಕಚೇರಿ ಉದ್ಘಾಟನೆಯಾದ ಬಳಿಕ ಹಲಸೂರು ಬಜಾರ್ನಲ್ಲಿರುವ ಪ್ರಸ್ತುತ ಅಂಚೆ ಕಚೇರಿಯನ್ನು ಮುಚ್ಚಲಾಗುವುದು ಮತ್ತು ಸಿಬ್ಬಂದಿ ಮತ್ತು ಸಾಮಗ್ರಿಗಳನ್ನು ಇಲ್ಲಿಗೆ ಸ್ಥಳಾಂತರಿಸಲಾಗುವುದು ಎಂದು ಮೂಲಗಳು ತಿಳಿಸಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.
66 ಲಕ್ಷ ರೂಪಾಯಿ ವೆಚ್ಚ
"ಎಲ್ & ಟಿ ಈ ಕಟ್ಟಡವು ನಿರ್ಮಾಣ ಮಾಡಿದೆ. 1,100 ಚದರ ಅಡಿ ವಿಸ್ತೀರ್ಣದಲ್ಲಿ ಕಟ್ಟಡ ತಲೆ ಎತ್ತಿದೆ. 3ಡಿ ಕಾಂಕ್ರೀಟ್ ಮುದ್ರಣಕ್ಕಾಗಿ ತೆರಿಗೆ ಸೇರಿ ಸುಮಾರು 26 ಲಕ್ಷ ರೂಪಾಯಿ ವ್ಯಯಿಸಲಾಗಿದೆ. ಪವರ್, ಡ್ರೈನೇಜ್ ಸಂಪರ್ಕ ಮತ್ತು ನೀರಿನ ಸಂಪರ್ಕದಂತಹ ಇತರ ವೆಚ್ಚಗಳನ್ನು ಅಂಚೆ ಇಲಾಖೆಯ ಸಿವಿಲ್ ವಿಂಗ್ ಸುಮಾರು 40 ಲಕ್ಷ ರೂಪಾಯಿ ವೆಚ್ಚದಲ್ಲಿ ಮಾಡಿದೆ," ಎಂದು ಮೂಲಗಳು ತಿಳಿಸಿವೆ.
ವಿನ್ಯಾಸದ ಪ್ರಕಾರ ಕಟ್ಟಡವನ್ನು ಸೈಟ್ನಲ್ಲಿ ಮುದ್ರಿಸಲಾಗಿದೆ. "ಇದು ಬಹುಶಃ ಈ ಪ್ರಕ್ರಿಯೆಯಿಂದ ನಿರ್ಮಿಸಲಾದ ಮೊದಲ ಸಾರ್ವಜನಿಕ ಕಟ್ಟಡವಾಗಿದೆ" ಎಂದು ಪೋಸ್ಟ್ ಆಫೀಸ್ ಅಧಿಕಾರಿಗಳು ಹೇಳಿದ್ದಾರೆ.
ಇತರ 3ಡಿ-ಮುದ್ರಿತ ಕಟ್ಟಡಗಳನ್ನು ಬೇರೆಡೆ ಮುದ್ರಣ ಮಾಡಿ ನಂತರ ಸೈಟ್ಗಳಲ್ಲಿ ತಂದು ಜೋಡಿಸಲಾಗುತ್ತದೆ. ಆದರೆ ಇದನ್ನು ಸೈಟ್ನಲ್ಲೇ ಮುದ್ರಣ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ದೇಶದಲ್ಲಿ ಹಲವು ಪ್ರಥಮಗಳಿಗೆ ಸಾಕ್ಷಿಯಾಗಿರುವ ಬೆಂಗಳೂರು, ಈಗ 3-ಡಿ ಕಟ್ಟಡ ಅಂಚೆ ಕಚೇರಿ ಹೊಂದಿದ ನಗರಗಳಲ್ಲಿ ಮೊದಲನೆಯದಾಗಿದೆ. ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಕಟ್ಟಿದ ಕಟ್ಟಡ ಹೇಗಿರುತ್ತದೆ ಎನ್ನುವ ಕುತೂಹಲ ಇದ್ದರೆ ನೀವೂ ಒಮ್ಮೆ ಭೇಟಿ ನೀಡಬಹುದು.
-
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications