ಬೆಂಗಳೂರಿಗೆ ಈ ಕಾರಣಕ್ಕೆ ವಲಸಿಗರ ಸಂಖ್ಯೆ ಹೆಚ್ಚಳ ಸಾಧ್ಯತೆ: ಕನ್ನಡಿಗರ ಆತಂಕ!
ಬೆಂಗಳೂರು-ಎರ್ನಾಕುಲಂ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಇದರ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಕನ್ನಡಿಗರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರು - ಉತ್ತರ ಕರ್ನಾಟಕದ ನಡುವೆ ರೈಲು ಸಂಪರ್ಕ ಕೊರತೆ ಇದೆ. ಅಲ್ಲದೇ ದಕ್ಷಿಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಬೇಡಿಕೆ ಇದೆ. ಆದರೆ ಇವರು ಮಾತ್ರ ಹೊರ ರಾಜ್ಯಗಳಿಗೆ ಅನುಕೂಲ ಮಾಡಿಕೊಡುವುದರಲ್ಲಿ ನಿರತರಾಗಿದ್ದಾರೆ ಎಂದು ಕನ್ನಡಿಗರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ಸಂಸದರಾದ ಪಿ.ಸಿ ಮೋಹನ್ ಹಾಗೂ ತೇಜಸ್ವಿ ಸೂರ್ಯ ಅವರ ಟ್ವೀಟ್ಗೆ ಕನ್ನಡಿಗರು ಕ್ಲಾಸ್ ತೆಗೆದುಕೊಂಡಿದ್ದಾರೆ. ಹಾಗಾದರೆ ಬೆಂಗಳೂರು-ಎರ್ನಾಕುಲಂ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಆದ್ಯತೆ ಸಿಗುತ್ತದೆ. ಆದರೆ, ಬಹಳ ಅಗತ್ಯವಿರುವ ಬೆಂಗಳೂರು - ಮಂಗಳೂರು ಮಾರ್ಗದ ಜನರಿಗೆ ಈ ಸೌಲಭ್ಯ ಇಲ್ಲ. ನಮ್ಮ ಕರ್ನಾಟಕದ ಸಂಸದರಿಂದ ಅದ್ಭುತ ಕೆಲಸ - ಅವರಿಗೆ ಏನೂ ತಿಳಿದಿಲ್ಲವೋ ಅಥವಾ ಮೂರ್ಖತನವೇ ಎಂದು ನೆಟ್ಟಿಗರೊಬ್ಬರು ತೇಜಸ್ವಿ ಸೂರ್ಯ ಅವರ ಟ್ವೀಟ್ಗೆ ರಿಯಾಕ್ಟ್ ಮಾಡಿದ್ದಾರೆ.

ಬಾಸ್, ಉತ್ತರ ಕರ್ನಾಟಕಕ್ಕೆ ಅದ್ಯಾತೆ ಕೊಡೋದು ಬಿಟ್ಟು. ಮಲೆಯಾಳಿಗಳ ತುಂಬ್ಸಕ್ಕೆ ಕರ್ನಾಟಕದಲ್ಲಿ ಇದು ಬೇಕಿತ್ತಾ ನಿಮಗೆ, ದಯವಿಟ್ಟು ಹೇಳಿ ಇದು ಹೇಗೆ ಬೆಂಗಳೂರಿಗೆ ಹಾಗೂ ಕನ್ನಡಿಗರಿಗೆ ಪ್ರಯೋಜನ ಆಗಲಿದೆ ಎಂದು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ. ಕೇರಳದವರು ನಿಮಗೆ (ಬಿಜೆಪಿಗೆ) ವೋಟ್ ಹಾಕುವುದಿಲ್ಲ. ಕರ್ನಾಟಕದವರು ನಿಮಗೆ ವೋಟ್ ಮಾಡಿದ್ದಾರೆ. ಅವರಿಗೆ ಮೊದಲು ಈ ಸೇವೆಗಳನ್ನು ವಿಸ್ತರಿಸಿ ಎಂದು ಕನ್ನಡಿಗರು ಆಗ್ರಹಿಸಿದ್ದಾರೆ.
ಕೇರಳದವರು ಇಲ್ಲಿ ಬಂದು ತಮಗೆ ವೋಟ್ ಹಾಕಲ್ಲ ಬಿಡಿ ಸೂರ್ಯ ಅವರೇ. ಬೀದರ್, ಬಳ್ಳಾರಿ, ಹೊಸಪೇಟೆ, ಗದಗ, ಬಾಗಲಕೋಟೆ, ವಿಜಯಪುರ, ಕೊಪ್ಪಳ ಜಿಲ್ಲೆಗಳಿಗೆ ವಂದೇಭಾರತ್ ಎಕ್ಸ್ಪ್ರೆಸ್ ಮೂಲಕ ಇನ್ನೂ ಸಂಪರ್ಕ ಕಲ್ಪಿಸಲಾಗಿಲ್ಲ. ಜಿಲ್ಲೆಗಳ ಪ್ರತಿನಿಧಿಗಳಿಗೆ ಧನ್ಯವಾದಗಳು ಎಂದು ಮತ್ತೊಬ್ಬ ನೆಟ್ಟಿಗರು ತಿವಿದಿದ್ದಾರೆ.
ಅಲ್ಲ ಗುರು ಇದು ಹೇಗೆ ಕರ್ನಾಟಕ ಜನರಿಗೆ ಉಪಯೋಗ. ಸುಮ್ನೆ ಎಲ್ಲದ್ರಲ್ಲೂ ಹಬ್ಬ. ಮನು ಎನ್ನುವವರು, ಇನ್ನೂ ಎಷ್ಟು ವಲಸಿಗರು ಬೆಂಗಳೂರಿಗೆ ಬರಬೇಕು.. ಕಲ್ಯಾಣ ಕರ್ನಾಟಕ, ಕರಾವಳಿ ಕರ್ನಾಟಕ ಭಾಗಗಳಿಗೆ ಸರಿಯಾದ ರೈಲುಗಳು ಇಲ್ಲ ಅದರ ಕಡೆ ಗಮನಕೊಡಿ ಎಂದಿದ್ದಾರೆ.
ಅಯ್ಯೋ ಎನ್ ಕರ್ಮ, ಕರ್ನಾಟಕದ ಪ್ರಜೆಗಳೇ ದಯವಿಟ್ಟು ಈ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಿಗೆ ವೋಟ್ ಹಾಕಬೇಡಿ. ಗೆದ್ದು ಇವರು ಮಾಡೊದು ಬೇರೆ ರಾಜ್ಯಗಳ ಅಭಿವೃದ್ಧಿ. ಏನೂ ಉಪಯೋಗ ಇಲ್ಲಾ ಕರ್ನಾಟಕಕ್ಕೆ. ಶೇಕಡ 80% ವಲಸೆ ಜನ ತುಂಬಿಸುವ ಕೆಲಸ ನಡಿಯುತ್ತಿದೆ ಬೆಂಗಳೂರಲ್ಲಿ ಎಂದು ಮತ್ತೊಬ್ಬ ನೆಟ್ಟಿಗರು ರಿಯಾಕ್ಟ್ ಮಾಡಿದ್ದಾರೆ.
ವಲಸಿಗರ ಸಂಖ್ಯೆ ಹೆಚ್ಚಾಗುವ ಆತಂಕ: ಇನ್ನು ಬೆಂಗಳೂರಿಗೆ ದಕ್ಷಿಣ ಭಾರತದ ಕೇರಳ ಸೇರಿದಂತೆ ವಿವಿಧ ರಾಜ್ಯಗಳ ನಗರಗಳಿಗೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆ ಕಲ್ಪಿಸುವುದರಿಂದ ಬೆಂಗಳೂರಿನಲ್ಲಿ ಮುಂದಿನ ದಿನಗಳಲ್ಲಿ ವಲಸೆ ಪ್ರಮಾಣ ಹೆಚ್ಚಳವಾಗಲಿದೆ. ಮುಂದಿನ ದಿನಗಳಲ್ಲಿ ವಲಸೆ ಸಂಖ್ಯೆ ಹೆಚ್ಚಾಗಲಿದೆ ಎಂದು ಕನ್ನಡಿಗರು ಆಕ್ರೋಶ ಮತ್ತು ಆತಂಕ ಹೊರ ಹಾಕಿದ್ದಾರೆ. ಬೆಂಗಳೂರಿಗೆ ವಲಸೆ ಬರುವವರನ್ನು ತಡೆಯಬೇಕು ಈ ನಿಟ್ಟಿನಲ್ಲಿ ನಿಯಮ ರೂಪಿಸಬೇಕು ಎಂದು ಆಗ್ರಹಿಸಿದ್ದಾರೆ.
-
Bengaluru Second Airport: 5 ತಿಂಗಳಲ್ಲಿ ಬೆಂಗಳೂರು 2ನೇ ವಿಮಾನ ನಿಲ್ದಾಣ ಸ್ಥಳ ಫೈನಲ್: 3 ತಾಣಗಳಿಗೆ ಕಾರ್ಯಸಾಧ್ಯತಾ ವರದಿ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications