Bengaluru rain: ಇಂದು ವಿವಿಧೆಡೆ ಮಳೆ, ಸೆ.21ರವರೆಗೆ ಸಾಧಾರಣ ಮಳೆ ಸಾಧ್ಯತೆ, ಹವಾಮಾನ ವರದಿ
ಬೆಂಗಳೂರು, ಸೆಪ್ಟಂಬರ್ 15: ಸಿಲಿಕಾನ್ ಸಿಟಿಯಲ್ಲಿ ಮುಂಗಾರು ಮಳೆ ಸಕ್ರಿಯಗೊಂಡಿದ್ದು, ಮಳೆ ಸಿಂಚನ ಮುಂದುವರಿದಿದೆ. ಇಂದಿನಿಂದ ಮುಂದಿನ 48 ಗಂಟೆ (ಶನಿವಾರ) ವರೆಗೆ ಗುಡುಗು ಮಿಂಚು ಸಹಿತ ವ್ಯಾಪಕ ಮಳೆ ಸುರಿಯಲಿದೆ. ನಂತರ ನಾಲ್ಕು ದಿನ ಮಳೆಯ ಅಬ್ಬರ ತುಸು ಇಳಿಕೆ ಆಗಲಿದೆ.
ಬುಧವಾರದಿಂದ ನಗರದ ಉತ್ತಮ ಮಳೆ ಆಗುತ್ತಿದೆ. ನೆನ್ನೆ ಗುರುವಾರ ಸಹ ಧಾರಾಕಾರ ಮಳೆ ಆಗಿದ್ದು, ಇಂದು ಮಧ್ಯಾಹ್ನದಿಂದಲೇ ಜೋರು ಮಳೆ ಆಗಿದೆ. ಈ ಪೈಕಿ ಮಹಾದೇವಪುರ ವಲಯ ವ್ಯಾಪ್ತಿಯ ಹೊರಮಾವು (2) ನಲ್ಲಿ 10.50 ಮಿಲಿ ಮೀಟರ್ ಸುರಿದಿದೆ. ಇನ್ನುಳಿದಂತೆ ತುಂತುರು ಮಳೆ ಆಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಮುಂದಿನ ಸೆಪ್ಟಂಬರ್ 21ರವರೆಗೆ ವಿವಿಧೆಡೆ ವ್ಯಾಪಕ ಮಳೆ ಸಾಧ್ಯತೆ ಇದ್ದು, ಭಾನುವಾರದಿಂದ ಮಳೆ ಅಬ್ಬರು ತುಸು ಕಡಿಮೆ ಇರಲಿದೆ ಎಂದು ಅಂದಾಜಿಸಲಾಗಿದೆ. ನಿತ್ಯವು ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಸ
ನಗರದ ವಿವಿಧ ಬಡಾವಣೆಗಳಲ್ಲಿ ಜೋರು ಮಳೆ ಸುರಿದರೆ, ಇನ್ನೂ ಹಲವೆಡೆ ಆಗಾಗ ಜಿಟಿ ಜಿಟಿ ಮಳೆ ಬೀಳಲಿದೆ. ಇಡೀ ದಿನ ಮೋಡ ಕವಿದ ಮಳೆ ಆಗಲಿದೆ. ಶುಷ್ಕ ವಾತಾವರಣ ಕಡಿಮೆ ಆಗಿದ್ದು, ತಂಪು ವಾತಾವರಣ ನಿರ್ಮಾಣವಾಗಿದೆ. ಇಂದು ಶುಕ್ರವಾರ ಇಂದು ಅಲ್ಲಲ್ಲಿ ಮಳೆ ಆಗಿದ್ದು, ತಡರಾತ್ರಿವರೆಗೂ ಕೆಲವೆಡೆ ಮಳೆ ಮುಂದುವರಿಯಲಿದೆ.
ಬೆಂಗಳೂರನಲ್ಲಿ ಮಳೆಗೆ ಭೂಮಿ ಕುಸಿತ
ನಗರದ ಕೆಲವೆಡೆ ಜೋರು ಮಳೆ ಆಗಿದೆ. ಇದೇ ವೇಳೆ ಕೆಆರ್ ಪುರ ರೈಲು ನಿಲ್ದಾಣದ ಮುಂಭಾಗದಲ್ಲಿ ಭೂಮಿ ಕುಸಿತ ಸಂಭವಿಸಿದೆ. ಇದರಿಂದ ಒಂದು ಲೈನ್ ಸಂಚಾರಕ್ಕೆ ಮಾತ್ರ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಯಿತು. ಇದರಿಂದಾಗಿ ಅಲ್ಲಲ್ಲಿ ಸಂಚಾರ ದಟ್ಟಣೆ ಕಡಿಮೆ ಆಯಿತು. ಹೀಗಾಗಿ ನಗರದ ಒಳಗೆ ಪ್ರವೇಶಿಸುವ ವಾಹನಗಳು ನಿಧಾನವಾಗಿ ಚಲಿಸಿದ ದೃಶ್ಯ ಕಂಡು ಬಂತು.

ಸೆಪ್ಟಂಬರ್ 21ರವರೆಗೆ ಮಳೆ ಮುಂದುವರಿಯಲಿದ್ದು, ತಾಪಮಾನ ಇಳಿಕೆ ಆಗಲಿದೆ. ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ರಾಜ್ಯದ ವಿವಿಧೆಡೆ ಜೋರು ಮಳೆ
ಕರ್ನಾಟಕದಲ್ಲಿ ಮುಂದಿನ ನಾಲ್ಕೈದು ದಿನ ಮಳೆ ವ್ಯಾಪಕವಾಗಿ ಸುರಿಯಲಿದೆ. ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಬಿರುಸಿನಿಂದ ಕೂಡಿರಲಿದೆ. ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆ ಭಾರೀ ಮಳೆ ಬರಲಿದ್ದು, ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ತುಮಕೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ ಸೇರಿದಂತೆ ವಿವಿಧೆಡೆ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
-
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್












Click it and Unblock the Notifications