ಬೆಂಗಳೂರಲ್ಲಿ ತಾಂಜಾನಿಯಾ ಯುವತಿಯ ಬೆತ್ತಲೆಗೊಳಿಸಿ ಹಲ್ಲೆ
ಬೆಂಗಳೂರು, ಫೆಬ್ರವರಿ, 03: ಬೆಂಗಳೂಲ್ಲಿ ಮಹಿಳಾ ದೌರ್ಜನ್ಯದ ಮತ್ತೊಂದು ಪ್ರಕರಣ ವರದಿಯಾಗಿದೆ. ಆಫ್ರಿಕಾದ ತಾಂಜೇನಿಯಾ ಮೂಲದ 21 ವರ್ಷದ ಯುವತಿಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.[ವಿಡಿಯೋ : ತಾಂಜಾನಿಯಾ ಮಹಿಳೆ ಮೇಲೆ ದಾಳಿ]
ಭಾನುವಾರ, ಜನವರಿ 31 ರಂದೇ ಘೋರ ಘಟನೆ ನಡೆದಿದೆ. ಆಚಾರ್ಯ ಕಾಲೇಜಿನ ಬಿಬಿಎ ವಿದ್ಯಾರ್ಥಿನಿ ಉದ್ರಿಕ್ತ ಜನರಿಂದ ಹಲ್ಲೆಗೆ ಒಳಗಾಗಿದ್ದಾಳೆ. ಹೆಸರಘಟ್ಟದಲ್ಲಿ ಯುವತಿ ಮೇಲೆ ಹಲ್ಲೆ ಮಾಡಲಾಗಿದೆ.[ವಿದ್ಯಾರ್ಥಿನಿ ವೇತನ ಬೇಕಾ? ಹಾಗಿದ್ರೆ ಕನ್ಯತ್ವ ಉಳಿಸಿಕೊಳ್ಳಿ!]

ಹಲ್ಲೆ ಮಾಡಿದ್ದು ಯಾಕೆ?
ಭಾನುವಾರ ಆಫ್ರಿಕಾದ ವಿದ್ಯಾರ್ಥಿಯೊಬ್ಬ ಕಾರು ಮಾಡಿದ ಅಪಘಾತದಲ್ಲಿ ಹೆಸರಘಟ್ಟದ 35 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಇದನ್ನು ತಿಳಿದ ತಾಂಜೇನಿಯಾದ ವಿದ್ಯಾರ್ಥಿನಿ ಅರ್ಧ ಗಂಟೆ ನಂತರ ಅಪಘಾತ ಸ್ಥಳಕ್ಕೆ ಧಾವಿಸಿದ್ದಳು. ಈ ವೇಳೆ ಸ್ಥಳದಲ್ಲಿ ಸೇರಿದ್ದ ಜನರ ಗುಂಪು ವಿದ್ಯಾರ್ಥಿನಿ ಮೇಲೆ ಹಲ್ಲೆ ಮಾಡಿತ್ತು. ಈ ವೇಳೆ ಸ್ಥಳದಲ್ಲಿಯೇ ಪೊಲೀಸರಿದ್ದರೂ ತಡೆಯುವ ಯತ್ನ ಮಾಡಲಿಲ್ಲ. ಯುವತಿ ಆಗಮಿಸಿದ್ದ ಕಾರಿಗೆ ಬೆಂಕಿ ಇಡಲಾಗಿದೆ.[ಮಹಿಳಾ ದೌರ್ಜನ್ಯ ವಿರುದ್ದ ದನಿಯಾದ ವಾಮಾ ಬಲ್ದೋಟ]
ಕಾರಿನಲ್ಲಿದ್ದ ಯುವತಿ ಸೇರಿದಂತೆ ಇಬ್ಬರು ವಿದ್ಯಾರ್ಥಿಗಳನ್ನು ಜನರ ಗುಂಪು ಹೊರಕ್ಕೆ ಎಳೆದು ನಿಂದಿಸಿದೆ. ನಂತರ ಹಲ್ಲೆ ಮಾಡಲು ಮುಂದಾಗಿದೆ. ಯುವತಿ ಬಳಿ ಟಿ ಶರ್ಟ್ ತೆಗೆಯುವಂತೆ ಒತ್ತಾಯ ಮಾಡಲಾಗಿದೆ. ಭಯಭೀತಗೊಂಡ ಯುವತಿ ಬಿಎಂಟಿಸಿ ಏರುವ ಯತ್ನ ಮಾಡಿದರೂ ಆಕೆಯನ್ನು ಹೊರಕ್ಕೆ ನೂಕಲಾಗಿದೆ. ಹರಿದ ಬಟ್ಟೆಯೊಂದಿಗೆ ಆಕೆ ನೆಲಕ್ಕೆ ಬಿದ್ದಿದ್ದಾಳೆ. ಇದಾದ ನಂತರ ತಾಂಜೇನಿಯಾದ ಯುವತಿ ಪೊಲೀಸರ ಬಳಿ ದೂರು ನೀಡಲು ತೆರಳಿದರೂ ಸ್ಪಂದನೆ ಸಿಕ್ಕಿಲ್ಲ.
-
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಸರ್ಕಾರಿ PU ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 9,383 ರೂ. ಲಕ್ಷ ಅನುದಾನ ಮಂಜೂರು -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು?











Click it and Unblock the Notifications