ಆಗಸ್ಟ್ ಅಂತ್ಯಕ್ಕೆ ಸಾರ್ವಜನಿಕರಿಗೆ ಮುಕ್ತವಾಗಲಿದೆ ಶಿವಾನಂದ ಫ್ಲೈಓವರ್
ಬೆಂಗಳೂರು, ಆಗಸ್ಟ್ 04: ಶಿವಾನಂದ ವೃತ್ತದ ಫ್ಲೈಓವರ್ ಆಗಸ್ಟ್ ಅಂತ್ಯದಲ್ಲಿ ಓಡಾಟಕ್ಕೆ ಮುಕ್ತವಾಗಲಿದೆ.
ಫ್ಲೈಓವರ್ ಶುರುವಾದ ಬಳಿಕ ಮೂರು ಸರ್ಕಾರ ಬದಲಾಯಿತು, ನಾಲ್ಕು ಮೇಯರ್ಗಳು ಬದಲಾವಣೆಯಾಯಿತು ಅಂತೂ ಇದೀಗ ಫ್ಲೈಓವರ್ ಆರಂಭಕ್ಕೆ ಮುಹೂರ್ತ ಸಿಕ್ಕಿದೆ.
493 ಮೀಟರ್ ಉದ್ದದ ಫ್ಲೈಓವರ್ ಕಾಮಗಾರಿ ಶೇ.82ರಷ್ಟು ಪೂರ್ಣಗೊಂಡಿದೆ. 16 ಪಿಲ್ಲರ್ಗಳಲ್ಲಿ 15 ಪಿಲ್ಲರ್ಗಳು ರೆಡಿ ಆಗಿವೆ. 16ನೇ ಪಿಲ್ಲರ್ ಸಮೀಪ ನೀರಿನ ಪೈಪ್ಲೈನ್ ಇದ್ದು ಅದನ್ನು ಬೇರೆಗೆ ಸ್ಥಳಾಂತರಿಸುವ ಕಾರ್ಯವಿರುವ ಕಾರಣ ಕಾಮಗಾರಿ ಸ್ವಲ್ಪ ನಿಧಾನವಾಗುತ್ತಿದೆ.
ಫ್ಲೈಓವರ್ನ ಎರಡು ಬದಿ ಇರುವ ರಸ್ತೆಯನ್ನು ನವೀಕರಿಸಬೇಕಿದೆ, ಸೋಮವಾರ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಫ್ಲೈಓವರ್ ಕಾಮಗಾರಿ ಪರಿಶೀಲನೆ ನಡೆಸಿದ್ದರು.
ನೀರು ಹಾಗೂ ಒಳಚರಂಡಿ ಪೈಪ್ಗಳಿದ್ದ ಕಾರಣ ಅವುಗಳನ್ನು ಸ್ಥಳಾಂತರಿಸಲು ನಾಲ್ಕು ತಿಂಗಳ ಸಮಯ ಹಿಡಿಯಿತು, ಬಳಿಕ ಫ್ಲೈಓವರ್ ಉದ್ದವನ್ನು ವಿಸ್ತರಿಸಲಾಯಿತು. ಹಾಗೆಯೇ ಈ ಯೋಜನೆಗೆ ಅನುಮತಿ ಪಡೆಯಲು ಸಾಕಷ್ಟು ಕಾಲಾವಕಾಶ ಹಿಡಿಯಿತು.
ಫ್ಲೈಓವರ್ ಮೊದಲು 326 ಮೀಟರ್ ಉದ್ದದ ಯೋಜನೆಯಾಗಿತ್ತು, ಬಳಿಕ ಉದ್ದವನ್ನು ವಿಸ್ತರಿಸಲಾಗಿತ್ತು, ಹಾಗೆಯೇ 19.8 ಕೋಟಿ ಯೋಜನೆಯು ಅಂತಿಮದಲ್ಲಿ 39.5 ಕೋಟಿ ರೂ. ಯೋಜನೆಯಾಗಿತ್ತು ಎಂದು ಗೌರವ್ ಗುಪ್ತ ಹೇಳಿದ್ದಾರೆ.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂಭಾಗದಲ್ಲಿ ಜಲಮಂಡಳಿಯಲ್ಲಿ 450 ಮಿಲಿ ಮೀಟರ್ ನೀರಿನ ಪೈಪ್ ಲೈನ್ ಬೇರೆಡೆ ಸ್ಥಳಾಂತರಿಸಲಾಗಿದೆ. ಅದರಡಿ 700 ಎಂಎಂ ನೀರಿನ ಪೈಪ್ ಲೈನ್ ಇದ್ದ ಪರಿಣಾಮ ಪಿಲ್ಲರ್ ಕಾಮಗಾರಿ ಮಾಡಲು ಸಾಧ್ಯವಾಗಿರಲಿಲ್ಲ. ಇದೀಗ ಪೈಪ್ ಲೈನ್ ಬದಲಿಸಿದ್ದು, ಪಿಲ್ಲರ್ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ.
ಮೇಲ್ಸೇತುವೆ ಎರಡು ಕಡೆ ರಸ್ತೆ ದುರಸ್ತಿಯಾಗಬೇಕಿದೆ. ನಂತರ ಬಂದ್ ಮಾಡಿರುವ ರಸ್ತೆಗಳನ್ನು ಹಂತ-ಹಂತವಾಗಿ ತೆರವು ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು.
ಈ ಭಾಗದಲ್ಲಿ ಸಂಚಾರ ದಟ್ಟಣೆಯಾಗದಂತೆ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಿಸುವಂತೆ ಮತ್ತು ಕಾಮಗಾರಿ ಮುಗಿದಿರುವ ಕಡೆ ಸರ್ವೀಸ್ ರಸ್ತೆಯನ್ನು ಸಾರ್ವಜನಿಕರ ಓಡಾಟಕ್ಕೆ ಅನುವು ಮಾಡಿಕೊಡಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಜನರ ಮತ್ತು ವಾಹನಗಳ ಸಂಚಾರಕ್ಕೆ ಅನುಕೂಲವಾಗುವಂತೆ ಕಾಮಗಾರಿ ನಡೆದ ಜಾಗದಲ್ಲಿ ಇರುವ ಉಪಕರಣಗಳು, ನಿರ್ಮಾಣ ವಸ್ತುಗಳನ್ನು ತೆರವುಗೊಳಿಸಲು ಕ್ರಮಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಮೊದಲು ಎಷ್ಟು ಮೀಟರ್ ಫ್ಲೈಓವರ್ಗೆ ಅನುಮತಿ ಸಿಕ್ಕಿತ್ತು?
ಈ ಮೊದಲು 326.25ಮೀಟರ್ ಉದ್ದದ ಮೇಲ್ಸೇತುವೆ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿತ್ತು, ಆದರೆ ಕೆಲ ಸ್ಥಳೀಯರು ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯವು ಸಂಚಾರ ದಟ್ಟಣೆ ಕಡಿಮೆ ಮಾಡಲು ಮೇಲ್ಸೇತುವೆ ಅಗತ್ಯವಿದೆ ಎಂದು ಹೇಳಿತ್ತು.

ಕಾಮಗಾರಿ ವಿಳಂಬವಾಗಿದ್ದೇಕೆ?
2017ರ ಜೂನ್ನಿಂದ ಆರಂಭವಾದ ಕಾಮಗಾರಿ ಈಗಾಗಲೇ 5 ವರ್ಷ ಪೂರ್ಣಗೊಂಡಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂಭಾಗದಲ್ಲಿ ಮೂರು ನೀರು ಹಾಗೂ ಎರಡು ಸ್ಯಾನಿಟರಿ ಕೊಳವೆ ಬದಲಾಯಿಸಬೇಕಿತ್ತು. ಆ ಬಗ್ಗೆ ಒಟ್ಟಾರೆ ಕಾಮಗಾರಿ ಪೂರ್ಣಗೊಳಿಸುವುದಕ್ಕೆ ಒಂಬತ್ತು ತಿಂಗಳು ಅಂದರೆ, 2020ರ ಮೇ ವೇಳೆಗೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಹೇಳಲಾಗಿತ್ತು, ಆದರೆ ಕೊರೊನಾ ಲಾಕ್ಡೌನ್ನಿಂದಾಗಿ ಕಾಮಗಾರಿ ಮತ್ತಷ್ಟು ವಿಳಂಬವಾಗಿತ್ತು.

3 ತಿಂಗಳ ಗಡುವು ನೀಡಲಾಗಿತ್ತು
ಶಿವಾನಂದ ವೃತ್ತದ ಮೇಲ್ಸೇತುವೆ ಕಾಮಗಾರಿಯನ್ನು 3 ತಿಂಗಳಲ್ಲಿ ಪೂರ್ಣಗೊಳಿಸಿ ಸಾರ್ವಜನಿಕ ಓಡಾಟಕ್ಕೆ ಅನುವು ಮಾಡಿಕೊಡಬೇಕು. ಜೊತೆಗೆ ಶಿವಾನಂದ ವೃತ್ತದ ಬಳಿಯ ರೈಲ್ವೆ ಹಳಿ ಬಳಿ ಸುಗಮ ವಾಹನ ಸಂಚಾರಕ್ಕೆ ಹೆಚ್ಚುವರಿ ಬಾಕ್ಸ್ ಅಳವಡಿಸಲು ರೈಲ್ವೆ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ಕ್ರಮಕೈಗೊಳ್ಳುವಂತೆ ಗೌರವ್ ಗುಪ್ತಾ ಫೆಬ್ರವರಿಯಲ್ಲಿ ಸೂಚನೆ ನೀಡಿದ್ದರು.
Recommended Video

ಫ್ಲೈಓವರ್ನಲ್ಲಿ 16 ಪಿಲ್ಲರ್ಗಳ ಅಳವಡಿಕೆ
ಶಿವಾನಂದ ವೃತ್ತದ ಬಳಿ 493 ಮೀಟರ್ ಉದ್ದದ ಮೇಲುಸೇತುವೆಯನ್ನು ಕೈಗೆತ್ತಿಕೊಂಡಿದ್ದು, ಅದಕ್ಕೆ 16 ಪಿಲ್ಲರ್ಗಳಿವೆ. ಅದರಲ್ಲಿ ಈಗಾಗಲೇ15 ಪಿಲ್ಲರ್ಗಳ ಕಾಮಗಾರಿ ಪೂರ್ಣಗೊಂಡಿದ್ದು, 1 ಪಿಲ್ಲರ್ ಕಾಮಗಾರಿ ಪ್ರಗತಿಯಲ್ಲಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂಭಾಗ ಜಲಮಂಡಳಿಯಿಂದ 450 ಎಂ.ಎಂನ ನೀರಿನ ಪೈಪ್ ಲೈನ್ನ್ನು ಈಗಾಗಲೇ ಬೇರೆಡೆ ಸ್ಥಳಾಂತರಿಸಿದ್ದು, ಅದರಡಿ 700 ಎಂ.ಎಂನ ನೀರಿನ ಪೈಪ್ ಲೈನ್ ಇರುವುದರಿಂದ ಒಂದು ಪಿಲ್ಲರ್ ಕಾಮಗಾರಿ ಬಾಕಿಯಿದೆ. ಈ ಪೈಕಿ 7 ದಿನಗಳ ಕಾಲ ಸಂಚಾರಿ ಪೊಲೀಸ್ ಇಲಾಖೆಯಿಂದ ಮಾರ್ಗ ಬದಲಾವಣೆಗೆ ಅನುಮತಿ ಪಡೆದು ತ್ವರಿತವಾಗಿ ನೀರಿನ ಪೈಪ್ ಲೈನ್ ಬೇರೆಡೆ ಸ್ಥಳಾಂತರಿಸಿ ಪಿಲ್ಲರ್ ಕಾಮಗಾರಿ ಪೂರ್ಣಗೊಳಿಸುವಂತೆ ಗೌರವ್ ಗುಪ್ತಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ












Click it and Unblock the Notifications