ಬೆಂಗಳೂರು ಆಗ್ನೇಯ ಪೊಲೀಸರ ಭರ್ಜರಿ ಬೇಟೆ
ಬೆಂಗಳೂರು, ಜುಲೈ 3: ಬೆಂಗಳೂರು ನಗರ ಆಗ್ನೇಯ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಸುಮಾರು ಒಂದು ಕೋಟಿ 68ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳನ್ನು ವಶ ಪಡೆಸಿಕೊಂಡಿದ್ದು, ಕಳ್ಳತನವನ್ನೇ ಉದ್ಯೋಗ ಮಾಡಿಕೊಂಡವರಿಗೆ ನಡುಕ ಹುಟ್ಟಿಸಿದ್ದಾರೆ.
ಈ ಸಂಬಂಧ ಹತ್ತು ಖತರ್ನಾಕ್ ಕಳ್ಳರನ್ನು ಬಂಧಿಸಿರುವ ಪೊಲೀಸರು, 800 ಗ್ರಾಂ ಚಿನ್ನ, ಎರಡೂವರೆ ಲಕ್ಷ ನಗದು, ಹದಿನೈದು ನಾಲ್ಕು ಚಕ್ರದ ಮತ್ತು 49 ದ್ವಿಚಕ್ರವನ್ನು ವಶ ಪಡಿಸಿಕೊಂಡಿರುತ್ತಾರೆ. 36 ದ್ವಿಚಕ್ರ ಮತ್ತು 13 ನಾಲ್ಕು ಚಕ್ರದ ವಾಹನದ ಮಾಲೀಕರನ್ನು ಪೊಲೀಸರು ಈಗಾಗಲೇ ಪತ್ತೆ ಹಚ್ಚಿದ್ದಾರೆ.
ಹತ್ತು ಆರೋಪಿಗಳನ್ನು ಬಂಧಿಸಿದ್ದರಿಂದ, ಬೊಮ್ಮನಹಳ್ಳಿ ಠಾಣೆಯ 13, ಮಡಿವಾಳ 14, ಆಡುಗೋಡಿ 13, ಪರಪ್ಪನ ಅಗ್ರಹಾರ 9, ಎಲೆಕ್ಟ್ರಾನಿಕ್ ಸಿಟಿ ಠಾಣೆಯ ಹತ್ತು ಪ್ರಕರಣವನ್ನು ಪತ್ತೆ ಹಚ್ಚಿದಂತಾಗಿದೆ.

ಬಂಧಿತ ಆರೋಪಿಗಳು ಬಹುತೇಕ ತಮಿಳುನಾಡು ಮತ್ತು ಕೇರಳ ಮೂಲದವರಾಗಿದ್ದಾರೆಂದು ಪೊಲೀಸ್ ಪತ್ರಿಕಾ ಪ್ರಕಟಣೆಯಲ್ಲಿ ಹೇಳಲಾಗಿದೆ. ಮೇಲಿನ ಐದು ಠಾಣೆಯಲ್ಲಿ ದೂರು ದಾಖಲಿಸಿದ್ದವರು, ಆಯಾಯ ಠಾಣೆಯನ್ನು ಸಂಪರ್ಕಿಸಬಹುದಾಗಿದೆ.
ಇದಲ್ಲದೇ, ಆಡುಗೋಡಿ ಠಾಣಾ ಪೊಲೀಸರು, ಹದಿನೆಂಟು ದ್ವಿಚಕ್ರ ವಾಹನವನ್ನು ಆರೋಪಿಗಳಿಂದ ವಶ ಪಡಿಸಿಕೊಂಡಿರುತ್ತಾರೆ. ಆರೋಪಿಗಳು, ರಾತ್ರಿ ವೇಳೆ ಕೋಲಾರದಿಂದ ಬೆಂಗಳೂರಿಗೆ ಬಂದು, ದುಬಾರಿ ಬೆಲೆಯ ದ್ವಿಚಕ್ರ ವಾಹನಗಳ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದರು.
ಬೆಂಗಳೂರು ಚಾಮರಾಜಪೇಟೆ, ಕೆಂಗೇರಿ, ರಾಮಮೂರ್ತಿ ನಗರ, ಹೊಸಕೋಟೆ, ಕೋಲಾರ, ಬಂಗಾರಪೇಟೆ ಸರಹದ್ದುಗಳಲ್ಲಿ ಆರೋಪಿಗಳು ಕಳ್ಳತನ ಮಾಡುತ್ತಿದ್ದರು.
ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿ ಇಶಾ ಪಂತ್ ಮಾರ್ಗದರ್ಶನದಲ್ಲಿ, ಮಡಿವಾಳ ಉಪವಿಭಾಗದ ಎಸಿಪಿ ಸೋಮೇಗೌಡ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?











Click it and Unblock the Notifications