ಮಕ್ಕಳ ದತ್ತು ಪಡೆಯುವಲ್ಲೂ ಬೆಂಗಳೂರು 'ಸಾಫ್ಟ್' ಮನಸು!
ಬೆಂಗಳೂರು, ನವೆಂಬರ್ 26: ಮಕ್ಕಳನ್ನು ದತ್ತು ಪಡೆಯುವಲ್ಲಿ ಕೂಡ ಬೆಂಗಳೂರು ಮುಂದಿದೆ, ರಾಜ್ಯದ ವಿವಿಧ ಜಿಲ್ಲೆಗಳಿಗೆ ಹೋಲಿಸಿದರೆ ಬೆಂಗಳೂರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳ ದತ್ತು ಸ್ವೀಕಾರ ಪ್ರಕ್ರಿಯೆ ನಡೆದಿದೆ.
2014ರಲ್ಲಿ ರಾಜ್ಯದಲ್ಲಿ ಕೇವಲ 77 ಮಕ್ಕಳು ದತ್ತು ಪಾಲಕರನ್ನು ಸೇರಿದ್ದರು. ಆದರೆ, ಕೇಂದರ ದತ್ತು ಸಂಪನ್ಮೂಲ ಪ್ರಾಧಿಕಾರ 2005ರಲ್ಲಿ ತಂದ ನೂತನ ದತ್ತು ಮಾರ್ಗಸೂಚಿ ರಾಜ್ಯದಲ್ಲಿ ಮಕ್ಕಳ ಭಾಗ್ಯದಿಂದ ವಂಚಿತರಾಗಿದ್ದ ದಂಪತಿಗಳಿಗೆ ವರದಾನವಾಗಿದೆ. 2018-19 ನೇ ಸಾಲಿನಲ್ಲಿ 282 ಮಕ್ಕಳು ಕೌಟುಂಬಿಕ ಪ್ರೀತಿ ಪಡೆಯಲು ಸಾಧ್ಯವಾಗಿದೆ.
ಬೆಂಗಳೂರಲ್ಲಿ 76 ಮಕ್ಕಳು ದತ್ತು ಪಾಲಕರ ಮಡಿಲು ಸೇರಿದ್ದಾರೆ, ಚಿಕ್ಕಮಗಳೂರು-38, ರಾಮನಗರ-28, ಹಾಸನ-16, ದಕ್ಷಿಣ ಕನ್ನಡ -16 ಮಂದಿಯನ್ನು ದತ್ತು ತೆಗೆದುಕೊಂಡಿದ್ದಾರೆ.

ಮಗುವನ್ನು ದತ್ತು ತೆಗೆದುಕೊಳ್ಳಲು ಅರ್ಹತೆ
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಒಟ್ಟು 29 ವಿಶೇಷ ದತ್ತು ಕೇಂದ್ರಗಳಿದ್ದು, 563 ಮಕ್ಕಳು ನೆಲೆ ಕಂಡುಕೊಂಡಿದ್ದಾರೆ. ಯಾವುದೇ ಮಕ್ಕಳನ್ನು ದತ್ತು ನೀಡುವಾಗ ಸೆಂಟ್ರಲ್ ಅಡಾಪ್ಟೇಷನ್ ರಿಸೋರ್ಸ್ ಅಥಾರಿಟಿಯ ನಿಯಮ ಪಾಲಿಸಬೇಕಾಗುತ್ತದೆ.

ಬಂಜೆತನ ಸಂಖ್ಯೆ ಹೆಚ್ಚಳ
ಹೆಣ್ಣುಮಕ್ಕಳಲ್ಲಿ ಬಂಜೆ ತನ ಹೆಚ್ಚಾಗಿದೆ, ಬದಲಾದ ಆಹಾರ ಪದ್ಧತಿ ಇನ್ನಿತರೆ ಕಾರ್ಯಗಳಿಂದಾಗಿ ಕೂಡ ಬಂಜೆತನದ ಸಮಸ್ಯೆ ಎದುರಾಗಿದೆ. ಮಕ್ಕಳನ್ನು ಮಾಡಿಕೊಳ್ಳುವುದರಲ್ಲಿ ಸಮಯ ಮುಂದೂಡಿಕೆ, ಆಧುನಿಕ ಜೀವನ ಶೈಲಿಯೂ ಒಂದು ಕಾರಣ, ವಿಚ್ಛೇದನ, ವಿವಾಹ ವಿಳಂಬ, ನಾನಾ ಅಪಘಾತದಲ್ಲಿ ಮಕ್ಕಳನ್ನು ಕಳೆದುಕೊಂಡವರು ಕೂಡ ದತ್ತು ಪಡೆಯಲು ಮುಂದೆ ಬಂದಿದ್ದಾರೆ.

ದತ್ತು ಸ್ವೀಕಾರಕ್ಕೆ ಏನೇನು ದಾಖಲೆಗಳು ಬೇಕು
ದತ್ತು ಸ್ವೀಕಾರಕ್ಕೆ ವೈದ್ಯರ ಅರ್ಹತಾ ದೃಢೀಕರಣ ಪತ್ರ, ಉದ್ಯೋಗ ಮತ್ತು ಆದಾಯ ದೃಢೀಕರಣ ಪತ್ರ, ಸಂಪತಿಗ ಜನ್ಮ ದಿನಾಂಕ ದೃಢೀಕರಣ ಪತ್ರ, ವಿವಾಹದ ಪುರಾವೆ, ಇತ್ತೀಚಿನ ಭಾವಚಿತ್ರ, ಆಸ್ತಿ ವಿವರಗಳನ್ನು ನೀಡಬೇಕು.

ಮಕ್ಕಳಿಗೆ ಏನೇನು ಅರ್ಹತೆ ಇರಬೇಕು
ಮಗುವಿನ ಪಾಲಕರು-ಪೋಷಕರು ಸ್ವ ಇಚ್ಛೆಯಿಂದ ಮಕ್ಕಳನ್ನು ನೀಡುತ್ತಿದ್ದೇವೆ ಎಂದು ಲಿಖಿತ ರೂಪದಲ್ಲಿ ಬರೆದು ಕೊಡಬೇಕು, ದತ್ತು ಕಾರ್ಯಕ್ರಮ ನಡೆಸಲು ಮನ್ನಣೆ ಪಡೆದ ಸಂಸ್ಥೆಯಲ್ಲಿ ದಾಖಲಾದ ಮಕ್ಕಳ ವಯಸ್ಸು 18ರ ಒಳಗಿರಬೇಕು. ವಾಲೆಂಟರಿ ಕೋ-ಆರ್ಡಿನೇಟಿಂಗ್ ಏಜೆನ್ಸಿಯಲ್ಲಿ ದತ್ತು ನೀಡುವ ಪಟ್ಟಿಯಲ್ಲಿ ದಾಖಲಾಗಿರುವ ಮಕ್ಕಳನ್ನು ದತ್ತು ತೆಗೆದುಕೊಳ್ಳಬಹುದಾಗಿದೆ.
-
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು












Click it and Unblock the Notifications