Cyber Fraud: ಆನ್ಲೈನ್ ವಂಚನೆ; ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ
ಸೈಬರ್ ವಂಚಕರ ಮೋಸಕ್ಕೆ ಅಮಾಯಕ ಮುಗ್ದಜೀವವೊಂದು ಬಲಿಯಾಗಿದೆ. ಬೆಂಗಳೂರಿನ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯೊಬ್ಬರು ಭಾನುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
20 ವರ್ಷದ ವಿದ್ಯಾರ್ಥಿನಿಯೊಬ್ಬಳು ಸೈಬರ್ ವಂಚನೆಯಲ್ಲಿ ಹಣ ಕಳೆದುಕೊಂಡಿದ್ದು, ಹಾಸ್ಟೆಲ್ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಯುವತಿಯನ್ನು ಕೋಲಾರ ಜಿಲ್ಲೆಯ ಕೋಲಾರ ಗೋಲ್ಡ್ ಫೀಲ್ಡ್ಸ್ (ಕೆಜಿಎಫ್) ಮೂಲದ ಪಾವನ ಎಂದು ಗುರುತಿಸಲಾಗಿದೆ ಮತ್ತು ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ವರ್ಷದ ಬಿಎಸ್ಸಿ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಮಧ್ಯರಾತ್ರಿಯ ನಂತರ ಪಾವನ ಸ್ನೇಹಿತೆ ಕೋಣೆಗೆ ಹಿಂತಿರುಗಿದಾಗ ಸಾವು ಬೆಳಕಿಗೆ ಬಂದಿದೆ.
ಪಾವನಾ ಬಸ್ ಕಂಡಕ್ಟರ್ನ ಮಗಳು, ಆಕೆ ಆತ್ಮಹತ್ಯೆಗೆ ಮುನ್ನ ಪತ್ರ ಬರೆದಿಟ್ಟಿದ್ದಾಳೆ. ಆಕೆಯ ಮೊಬೈಲ್ ಫೋನ್ನ ಲಾಕ್ ಅನ್ನು ತೆರೆಯಲು ಸಾಧ್ಯವಾಗದಿದ್ದರೂ, ಸೈಬರ್ ವಂಚನೆಯಲ್ಲಿ ಅವಳು ಸ್ವಲ್ಪ ಹಣವನ್ನು ಕಳೆದುಕೊಂಡಿದ್ದಾಳೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಹೇಳಿದ್ದಾರೆ.
ಪಾವನ ಎಷ್ಟು ಹಣ ಕಳೆದುಕೊಂಡಿದ್ದಾರೆ ಎನ್ನುವ ಬಗ್ಗೆ ಇನ್ನೂ ಸ್ಪಷ್ಟವಾಗಬೇಕಿದೆ. ಆನ್ಲೈನ್ ವಹಿವಾಟುಗಳನ್ನು ಪರಿಶೀಲನೆ ಮಾಡಲು ಆಕೆಯ ಫೋನ್ ಅನ್ನು ಅನ್ಲಾಕ್ ಮಾಡಲು ತಜ್ಞರ ಸಹಾಯ ಕೋರಲಾಗಿದೆ ಎಂದು ಹೇಳಿದರು.
ಸ್ನೇಹಿತರ ಬಳಿ 15,000 ರೂಪಾಯಿ ಸಾಲ ಮಾಡಿದ್ದು, 10 ಸಾವಿರ ರೂಪಾಯಿ ವಾಪಸ್ ಮಾಡಿದ್ದರು ಎಂದು ಪ್ರಾಥಮಿಕ ವಿಚಾರಣೆಯಲ್ಲಿ ತಿಳಿದುಬಂದಿದೆ. ಡೆತ್ ನೋಟ್ನಲ್ಲಿ ಆಕೆ ಹಣ ನೀಡಬೇಕಿರುವ ಸ್ನೇಹಿತರ ಹೆಸರನ್ನು ನಮೂದಿಸಿದ್ದು, ತನ್ನ ಪರವಾಗಿ ಹಣವನ್ನು ಹಿಂದಿರುಗಿಸುವಂತೆ ಪೋಷಕರಿಗೆ ತಿಳಿಸಿದ್ದಾಳೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಹೈಗ್ರೌಂಡ್ಸ್ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಆನ್ಲೈನ್ ವಂಚನೆ ಬಗ್ಗೆ ಇರಲಿ ಎಚ್ಚರಿಕೆ
ಆನ್ಲೈನ್ ವಂಚನೆ ಎನ್ನುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. ಪೊಲೀಸರಿಗೂ ಕೂಡ ಆನ್ಲೈನ್ ವಂಚನೆ ಪ್ರಕರಣಗಳು ತಲೆನೋವಾಗಿದೆ. ಎಲ್ಲೋ ಹೊರ ರಾಜ್ಯದಲ್ಲಿ ಕೂತು ಇಲ್ಲಿನ ಜನಗಳನ್ನು ಬೆದರಿಸಿಯೋ, ಆಮಿಷ ಒಡ್ಡಿಯೋ ವಂಚಿಸಲಾಗುತ್ತಿದೆ.
ಎಲ್ಲರ ಬಳಿ ಈಗ ಮೊಬೈಲ್ ಬ್ಯಾಂಕಿಂಗ್, ಆನ್ಲೈನ್ ಪೇಮೆಂಟ್ ಆಯ್ಕೆ ಇರುವುದು ವಂಚಕರಿಗೆ ವರದಾನವಾಗಿದೆ. ಇದೇ ಕಾರಣಕ್ಕೆ ಯಾವುದೇ ಅಪರಿಚಿತ ನಂಬರ್ ನಿಂದ ಆಮಿಷದ ಮೆಸೇಜ್ ಬಂದಾಗ ಪ್ರತಿಕ್ರಿಯೆ ನೀಡದಂತೆ, ಅಥವಾ ಅವರು ಕಳಿಸಿದ ಲಿಂಕ್ಗಳ ಮೇಲೆ ಕ್ಲಿಕ್ ಮಾಡದಂತೆ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.
Helplines: COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ಸ್ನೇಹಾ ಫೌಂಡೇಷನ್ ಸಹಾಯವಾಣಿ ಇಂತಿದೆ: 04424640050, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ 02225521111ಗೆ ಕರೆ ಮಾಡಬಹುದು.
-
Karnataka Weather: ಮಾರ್ಚ್ 12ರ ವರೆಗೆ ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುನ್ಸೂಚನೆ -
ಬೆಂಗಳೂರು, ವಿದ್ಯಾಕಾಶಿ ಧಾರವಾಡದಲ್ಲಿ "ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್" ಆರಂಭ: ಬಜೆಟ್ನಲ್ಲಿ ಘೋಷಣೆ -
Karnataka Highways: 1846 ಕಿಮೀ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ 5000 ಕೋಟಿ ರೂ ಘೋಷಣೆ -
ಕರ್ನಾಟಕದ 66 ಆರ್ಟಿಓಗಳಲ್ಲಿ ಡಿಜಿಟಲ್ ವ್ಯವಸ್ಥೆ: ವಾಹನ ತೋರಿಸಿದರಷ್ಟೇ ಫಿಟ್ನೆಸ್ ಪ್ರಮಾಣಪತ್ರ, ಏನಿದು? -
ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಇದು ನಿಜಕ್ಕೂ ಕಾರ್ಯಸಾಧುವೆ? ತಜ್ಞರು ಹೇಳುವುದೇನು? -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್












Click it and Unblock the Notifications