Cyber Fraud: ಆನ್ಲೈನ್ ವಂಚನೆ; ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ
ಸೈಬರ್ ವಂಚಕರ ಮೋಸಕ್ಕೆ ಅಮಾಯಕ ಮುಗ್ದಜೀವವೊಂದು ಬಲಿಯಾಗಿದೆ. ಬೆಂಗಳೂರಿನ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯೊಬ್ಬರು ಭಾನುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
20 ವರ್ಷದ ವಿದ್ಯಾರ್ಥಿನಿಯೊಬ್ಬಳು ಸೈಬರ್ ವಂಚನೆಯಲ್ಲಿ ಹಣ ಕಳೆದುಕೊಂಡಿದ್ದು, ಹಾಸ್ಟೆಲ್ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಯುವತಿಯನ್ನು ಕೋಲಾರ ಜಿಲ್ಲೆಯ ಕೋಲಾರ ಗೋಲ್ಡ್ ಫೀಲ್ಡ್ಸ್ (ಕೆಜಿಎಫ್) ಮೂಲದ ಪಾವನ ಎಂದು ಗುರುತಿಸಲಾಗಿದೆ ಮತ್ತು ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ವರ್ಷದ ಬಿಎಸ್ಸಿ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಮಧ್ಯರಾತ್ರಿಯ ನಂತರ ಪಾವನ ಸ್ನೇಹಿತೆ ಕೋಣೆಗೆ ಹಿಂತಿರುಗಿದಾಗ ಸಾವು ಬೆಳಕಿಗೆ ಬಂದಿದೆ.
ಪಾವನಾ ಬಸ್ ಕಂಡಕ್ಟರ್ನ ಮಗಳು, ಆಕೆ ಆತ್ಮಹತ್ಯೆಗೆ ಮುನ್ನ ಪತ್ರ ಬರೆದಿಟ್ಟಿದ್ದಾಳೆ. ಆಕೆಯ ಮೊಬೈಲ್ ಫೋನ್ನ ಲಾಕ್ ಅನ್ನು ತೆರೆಯಲು ಸಾಧ್ಯವಾಗದಿದ್ದರೂ, ಸೈಬರ್ ವಂಚನೆಯಲ್ಲಿ ಅವಳು ಸ್ವಲ್ಪ ಹಣವನ್ನು ಕಳೆದುಕೊಂಡಿದ್ದಾಳೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಹೇಳಿದ್ದಾರೆ.
ಪಾವನ ಎಷ್ಟು ಹಣ ಕಳೆದುಕೊಂಡಿದ್ದಾರೆ ಎನ್ನುವ ಬಗ್ಗೆ ಇನ್ನೂ ಸ್ಪಷ್ಟವಾಗಬೇಕಿದೆ. ಆನ್ಲೈನ್ ವಹಿವಾಟುಗಳನ್ನು ಪರಿಶೀಲನೆ ಮಾಡಲು ಆಕೆಯ ಫೋನ್ ಅನ್ನು ಅನ್ಲಾಕ್ ಮಾಡಲು ತಜ್ಞರ ಸಹಾಯ ಕೋರಲಾಗಿದೆ ಎಂದು ಹೇಳಿದರು.
ಸ್ನೇಹಿತರ ಬಳಿ 15,000 ರೂಪಾಯಿ ಸಾಲ ಮಾಡಿದ್ದು, 10 ಸಾವಿರ ರೂಪಾಯಿ ವಾಪಸ್ ಮಾಡಿದ್ದರು ಎಂದು ಪ್ರಾಥಮಿಕ ವಿಚಾರಣೆಯಲ್ಲಿ ತಿಳಿದುಬಂದಿದೆ. ಡೆತ್ ನೋಟ್ನಲ್ಲಿ ಆಕೆ ಹಣ ನೀಡಬೇಕಿರುವ ಸ್ನೇಹಿತರ ಹೆಸರನ್ನು ನಮೂದಿಸಿದ್ದು, ತನ್ನ ಪರವಾಗಿ ಹಣವನ್ನು ಹಿಂದಿರುಗಿಸುವಂತೆ ಪೋಷಕರಿಗೆ ತಿಳಿಸಿದ್ದಾಳೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಹೈಗ್ರೌಂಡ್ಸ್ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಆನ್ಲೈನ್ ವಂಚನೆ ಬಗ್ಗೆ ಇರಲಿ ಎಚ್ಚರಿಕೆ
ಆನ್ಲೈನ್ ವಂಚನೆ ಎನ್ನುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. ಪೊಲೀಸರಿಗೂ ಕೂಡ ಆನ್ಲೈನ್ ವಂಚನೆ ಪ್ರಕರಣಗಳು ತಲೆನೋವಾಗಿದೆ. ಎಲ್ಲೋ ಹೊರ ರಾಜ್ಯದಲ್ಲಿ ಕೂತು ಇಲ್ಲಿನ ಜನಗಳನ್ನು ಬೆದರಿಸಿಯೋ, ಆಮಿಷ ಒಡ್ಡಿಯೋ ವಂಚಿಸಲಾಗುತ್ತಿದೆ.
ಎಲ್ಲರ ಬಳಿ ಈಗ ಮೊಬೈಲ್ ಬ್ಯಾಂಕಿಂಗ್, ಆನ್ಲೈನ್ ಪೇಮೆಂಟ್ ಆಯ್ಕೆ ಇರುವುದು ವಂಚಕರಿಗೆ ವರದಾನವಾಗಿದೆ. ಇದೇ ಕಾರಣಕ್ಕೆ ಯಾವುದೇ ಅಪರಿಚಿತ ನಂಬರ್ ನಿಂದ ಆಮಿಷದ ಮೆಸೇಜ್ ಬಂದಾಗ ಪ್ರತಿಕ್ರಿಯೆ ನೀಡದಂತೆ, ಅಥವಾ ಅವರು ಕಳಿಸಿದ ಲಿಂಕ್ಗಳ ಮೇಲೆ ಕ್ಲಿಕ್ ಮಾಡದಂತೆ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.
Helplines: COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ಸ್ನೇಹಾ ಫೌಂಡೇಷನ್ ಸಹಾಯವಾಣಿ ಇಂತಿದೆ: 04424640050, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ 02225521111ಗೆ ಕರೆ ಮಾಡಬಹುದು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ












Click it and Unblock the Notifications