Bengaluru Sub Urban Rail: ನೇಮಕವಾಗದ ಕೆ-ರೈಡ್ ಅಧಿಕಾರಿ, ಯೋಜನೆ ವಿಳಂಬ ಆಗಲಿದೆಯೇ?
ಜನಸಂಖ್ಯೆ ಹೆಚ್ಚುತ್ತಿರುವ ಸಿಲಿಕಾನ್ ಸಿಟಿಯಲ್ಲಿ ನಮ್ಮ ಮೆಟ್ರೋ, ಬಿಎಂಟಿಸಿ ಜೊತೆಗೆ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಪ್ರಯಾಣಿಸಲು ಉಪನಗರ ರೈಲು ಯೋಜನೆಯು ಅನುಕೂಲವಾಗಿದೆ. ಆದರೆ ಹಲವು ಕಾರಣಗಳಿಂದ ಯೋಜನೆ ಅನುಷ್ಠಾನ ತಡವಾಗುತ್ತಿದೆ. ಇದಕ್ಕೆ ಕಾರಣ ಏನು, ಎಷ್ಟು ಹ
ಬೆಂಗಳೂರು, ಜನವರಿ 26: ಜನಸಂಖ್ಯೆ ಹೆಚ್ಚುತ್ತಿರುವ ಸಿಲಿಕಾನ್ ಸಿಟಿಯಲ್ಲಿ ನಮ್ಮ ಮೆಟ್ರೋ, ಬಿಎಂಟಿಸಿ ಜೊತೆಗೆ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಪ್ರಯಾಣಿಸಲು ಉಪನಗರ ರೈಲು ಯೋಜನೆಯು ಅನುಕೂಲವಾಗಿದೆ. ಆದರೆ ಹಲವು ಕಾರಣಗಳಿಂದ ಯೋಜನೆ ಅನುಷ್ಠಾನ ತಡವಾಗುತ್ತಿದೆ.
ಬೆಂಗಳೂರು ಉಪನಗರ ರೈಲು ಯೋಜನೆಯ ಅನುಷ್ಠಾನದ ಹೊಣೆಯನ್ನು ವಿಶೇಷ ಉದ್ದೇಶ ವಾಹನ (ಎಸ್ಪಿವಿ) ಕರ್ನಾಟಕ ರೈಲ್ವೆ ಮೂಲ ಸೌಕರ್ಯ ಅಭಿವೃದ್ಧಿ ನಿಗಮ (ಕೆ-ರೈಡ್) (SPV K-RIDE)ವು ಹೊತ್ತಿದೆ. ಇದೀಗ ನಿಗಮವೇ ತಟಸ್ಥವಾಗಿತ್ತು. ಕಳೆದು ಆರು ತಿಂಗಳಿನಿಂದ ಕಾಣೆಯಾಗಿದೆಯೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ.
ಮೂರು ವರ್ಷಗಳ ಕಾಲ K-RIDE ನ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದ ಅಮಿತ್ ಗಾರ್ಗ್ಗೆ ಅವರ ಅವಧಿ 2022ರ ಜುಲೈ 25ಕ್ಕೆ ಕೊನೆಗೊಂಡಿತ್ತು. ಅವರ ಹುದ್ದೆಯ ಅಧಿಕಾರ ವಿಸ್ತರಣೆಯನ್ನು ಮಾಡಲು ರಾಜ್ಯ ಸರ್ಕಾರ ಒಪ್ಪಿರಲಿಲ್ಲ, ನಿರಾಕರಿಸಿತ್ತು. ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ (IDD) ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ ಗೌರವ್ ಗುಪ್ತಾ ಅವರು ಕಳೆದ ವರ್ಷ 2022ರ ಆಗಸ್ಟ್ 10ರಿಂದ ವ್ಯವಸ್ಥಾಪಕ ಉಸ್ತುವಾರಿಗಳಾಗಿ ಅಧಿಕಾರ ವಹಿಸಿಕೊಂಡರು.

ಅಲ್ಲಿಂದ ಹೊಸ ವ್ಯವಸ್ಥಾಪಕ ಆಯ್ಕೆ ತನಕ ಗುಪ್ತಾ ಅವರೇ ಹುದ್ದೆಯಲ್ಲಿರುತ್ತಾರೆ ಎಂದು ಸರ್ಕಾರ ತಿಳಿಸಿತ್ತು. ಆದರೆ ಈ ವರೆಗೆ ವ್ಯವಸ್ಥಾಪಕ ನೇಮಕದ ಮನಸ್ಸು ರಾಜ್ಯ ಸರ್ಕಾರ ಮಾಡಿದಂತಿಲ್ಲ. ಹೀಗಾಗಿ ನಿಗಮ ಕಣ್ಮರೆ ಆಯಿತಾ? ಎಂಬ ಪ್ರಶ್ನೆ ಎದ್ದಿದೆ.
ಯೋಜನೆಯ ಪಾಲು ಹಂಚಿಕೆಯಾಗಿದೆ. ಇದರಲ್ಲಿ ರಾಜ್ಯದ ರೈಲ್ವೆ ಮೂಲ ಸೌಕರ್ಯ ಅಭಿವೃದ್ಧಿ ನಿಗಮ (ಕೆ-ರೈಡ್) ಮತ್ತು ಕರ್ನಾಟಕ ರಾಜ್ಯ ಸರ್ಕಾರದ ಒಟ್ಟು ಶೇಕಡಾ 51 ರಷ್ಟು ಹಾಗೂ ಕೇಂದ್ರ ರೈಲ್ವೆ ಸಚಿವಾಲಯವು ಶೇಕಡಾ 49 ಪಾಲನ್ನು ಹೊಂದಿವೆ.
ರಾಜ್ಯ ಸರ್ಕಾರದಲ್ಲಿ ಐಎಎಸ್ ಅಧಿಕಾರಿಗಳ ಒಂದು ವಿಭಾಗವು ಐಎಎಸ್ ಅಧಿಕಾರಿ ಒಬ್ಬರನ್ನು ಖಾಲಿ ಇರುವ ವ್ಯವಸ್ಥಾಪಕರ ಹುದ್ದೆಗೆ ನೇಮಕ ಮಾಡಲು ಆಗ್ರಹಿಸುತ್ತಲೇ ಇದ್ದಾರೆ. ರೈಲ್ವೇ ಸಚಿವಾಲಯವು ರೈಲ್ವೇ ಹಿನ್ನೆಲೆ ಅಥವಾ ತಾಂತ್ರಿಕ ಜ್ಞಾನವನ್ನು ಹೊಂದಿರುವ ತಂತ್ರಜ್ಞ ಇಲ್ಲವೇ ಭಾರತೀಯ ರೈಲ್ವೆ ಇಂಜಿನಿಯರ್ಗಳ (IRSE) ಉತ್ಸುಕವಾಗಿದೆ. ಆದರೆ ಸರ್ಕಾರದಿಂದ ಯೋಜನೆಗೆ ನಿರ್ಣಾಯಕವಾದ ವ್ಯವಸ್ಥಾಪಕ ಹುದ್ದೆ ನೇಮಕ ವಿಳಂಬವಾಗಿದೆ.

ಉಪನಗರ ರೈಲು ಯೋಜನೆ ಹಿನ್ನೆಲೆ ಏನು?
ಬೆಂಗಳೂರಿನಲ್ಲಿ 40 ವರ್ಷಗಳಿಂದ ಬಾಕಿ ಉಳಿದಿದ್ದ 148 ಕಿಮೀ ಉದ್ದದ ವಿವಿಧ ಹಂತಗಳ ಉಪನಗರ ರೈಲು ಯೋಜನೆಗೆ 2022ರಲ್ಲಿ ಬೆಂಗಳೂರಿಗೆ ಜೂನ್ ತಿಂಗಳಲ್ಲಿ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದ್ದರು.
ಈ ಮೂಲಕ ಉಪನಗರ ರೈಲು ಯೋಜನೆಯ ಡಿಪಿಆರ್ ಪ್ರಕಾರ ನಗರದಲ್ಲಿ 148 ಕಿ.ಮೀ. ಉದ್ದದ ರೈಲು ಸಂಪರ್ಕ ಜಾಲ ನಿರ್ಮಾಣ ಆರಂಭವಾಯಿತು. ಅದರಲ್ಲಿ 55.57 ಕಿ.ಮೀ. ಎಲಿವೇಟೆಡ್ ಮಾರ್ಗ ಮತ್ತು 92.6 ಕಿ.ಮೀ. ಉದ್ದ ನೆಲಮಟ್ಟದ ಮಾರ್ಗ ನಿರ್ಮಾಣವಾಗಲಿದೆ. ಇನ್ನೂ ಮೈಸೂರು ರಸ್ತೆಯ ಕೆಂಗೇರಿಯಿಂದ ವೈಟ್ಫೀಲ್ಡ್ವರೆಗೆ, ಬೆಂಗಳೂರು ನಗರ ನಿಲ್ದಾಣ- ರಾಜನುಕುಂಟೆ ಹಾಗೂ ನೆಲಮಂಗಲ- ಬೈಯ್ಯಪ್ಪನಹಳ್ಳಿ ಮತ್ತು ಬೊಮ್ಮಸಂದ್ರ- ದೇವನಹಳ್ಳಿ ಕಾರಿಡಾರ್ ನಿರ್ಮಾಣ ಕುರಿತು ಯೋಜನೆಯಲ್ಲಿ ಪ್ರಸ್ತಾಪವಾಗಿದೆ. ಈ ಯೋಜನೆಗಾಗಿ 1800ಕೋಟಿಗೂ ಅಧಿಕ ವೆಚ್ಚದ ಯೋಜನಾ ವರದಿ ಸಿದ್ಧವಾಗಿದೆ.
ರೈಲ್ವೆ ಪ್ರಯಾಣಿಕರಿಗೆ ಉಪಯುಕ್ತವಾಗುವ ಈ ಯೋಜನೆ ಬಹುವರ್ಷಗಳಿಂದ ಡಿಪಿಆರ್ ಇನ್ನಿತರ ಕಾರಣದಿಂದ ಹಾಗೇಯೆ ಉಳಿದಿತ್ತು. ನಂತರ ಪ್ರಧಾನಮಂತ್ರಿಗಳಿಂದ ಚಾಲನೆ ದೊರೆತು ಏಳು ತಿಂಗಳ ಕಳೆದರು ಯೋಜನೆ ಚುರುಕು ಪಡೆದಿಲ್ಲ ಎಂಬುದೇ ಸ್ಥಳಿಯರು ಅಸಮಧಾನವಾಗಿದ್ದು, ನಿಗದಿತ ಅವಧಿಗೆ ಹಂತ ಹಂತವಾಗಿ ಯೋಜನೆ ಪೂರ್ಣಗೊಳಿಸಲು ಆಗ್ರಹ ಕೇಳಿ ಬಂದಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications