Bengaluru Rail Project: ಉಪನಗರ ರೈಲು ಕಾರಿಡಾರ್-3 'ಪಾರಿಜಾತ'ಗೆ ಅನುಮೋದನೆ, ವೈಟ್ಫಿಲ್ಡ್-ಕೆಂಗೇರಿಗೆ ಸಂಪರ್ಕ
ಬೆಂಗಳೂರು: ಬೆಂಗಳೂರು ಉಪನಗರ ರೈಲ್ವೆ ಯೋಜನೆಯ ಎರಡು ಕಾರಿಡಾರ್ ಕಾಮಗಾರಿ ಪ್ರಗತಿಯಲ್ಲಿದೆ. ಇದೀಗ ಮೂರನೇ ಕಾರಿಡಾರ್ 'ಪಾರಿಜಾತ'ಗೆ ಜೋಡಣೆ ಅನುಮೋದನೆ ನೀಡಲಾಗಿದೆ. ಆದರೆ ಈ ಮಾರ್ಗವು ಕಂಟೋನ್ಮೆಂಟ್ ನಿಂದ ವೈಟ್ಫೀಲ್ಡ್ ವಿಭಾಗವನ್ನು ಹೇಗೆ ಸಂಪರ್ಕಿಸುತ್ತದೆ ಎಂಬುದರ ಸ್ಪಷ್ಟತೆ ಇಲ್ಲ. ಇತ್ತೀಚೆಗೆ ಕೆಂದ್ರ ಬಜೆಟ್ 2026ನಲ್ಲಿ ಈ ಬಿಎಸ್ಆರ್ಪಿಗೆ 500 ಕೋಟಿ ರೂಪಾಯಿ ಅನುದಾನ ಘೋಷಣೆ ಆಗಿದೆ.
'ಪಾರಿಜಾತ' ಮಾರ್ಗ ಎಂದೂ ಕರೆಯಲಾಗುವ ಈ ಮಾರ್ಗವು 35.52 ಕಿಲೋ ಮೀಟರ್ ಇದೆ. ಕೆಂಗೇರಿಯಿಂದ ಕೆಎಸ್ಆರ್ ಬೆಂಗಳೂರು, ಕಂಟೋನ್ಮೆಂಟ್ ಮೂಲಕ ವೈಟ್ಫೀಲ್ಡ್ ಸಂಪರ್ಕಿಸಲು ಯೋಜಿಸಲಾಗಿದೆ. ಈ ಕಾರಿಡಾರ್ ವಿವರವಾದ ಯೋಜನಾ ವರದಿಯಲ್ಲಿ (ಡಿಪಿಆರ್) 18.47 ಕಿಲೋ ಮೀಟರ್ ಕೆಂಗೇರಿ-ಕಂಟೋನ್ಮೆಂಟ್ ಮಾರ್ಗವನ್ನು ಮಾತ್ರ ಪರಿಶೀಲನೆ ಬಗ್ಗೆ ಪ್ರಸ್ತಾಪಿಸಲಾಗಿದೆ. ಡಿಪಿಆರ್ ಪ್ರಕಾರ 10.4 ಕಿ.ಮೀ.ನಲ್ಲಿ ಎತ್ತರಿಸಿದ ಮಾರ್ಗ, 8.07 ಕಿ.ಮೀ. (ಟನಲ್) ಗ್ರೇಡ್ನಲ್ಲಿರುತ್ತದೆ ಎಂದು ಹೇಳಲಾಗಿದೆ.

ಬಾಕಿ 17.05 ಕಿ.ಮೀ. ಕಂಟೋನ್ಮೆಂಟ್-ವೈಟ್ಫೀಲ್ಡ್ ವಿಭಾಗವನ್ನು ಭಾರತೀಯ ರೈಲ್ವೆಯ ನಡೆಯುತ್ತಿರುವ ಚತುಷ್ಪಥ (ನಾಲ್ಕು-ಪಥ) ಕೆಲಸಗಳಿಂದಾಗಿ ಹೊರಗಿಡಲಾಗಿದೆ. ಭೂಮಿ ಲಭ್ಯತೆಯು ಮೀಸಲಾದ ಉಪನಗರ ಹಳಿಗಳನ್ನು ನಿರ್ಮಿಸಲು ಕಷ್ಟವಾಗಿದೆ ಎಂದು ಡಿಪಿಆರ್ನಲ್ಲಿ ತಿಳಿಸಲಾಗಿದೆ. ಕಂಟೋನ್ಮೆಂಟ್ನಲ್ಲಿ ಉಪನಗರ ರೈಲು ಮಾರ್ಗಗಳು ವಿಲೀನಗೊಳ್ಳುತ್ತವೆ. ಗಮನಿಸಬೇಕಾದ ವಿಷಯವೆಂದರೆ ನೈಋತ್ಯ ರೈಲ್ವೆ (SWR) ಈ ಕಾರಿಡಾರ್ನಲ್ಲಿ ಕಂಟೋನ್ಮೆಂಟ್-ವೈಟ್ಫೀಲ್ಡ್ ವಿಭಾಗ ಕೈ ಬಿಟ್ಟಿರುವುದಾಗಿ ಡಿಪಿಆರ್ನಲ್ಲಿದೆ. ಇದೆಲ್ಲ ನೋಡಿದಾಗ ಯೋಜನೆ ಕುರಿತು ಇನ್ನಷ್ಟು ಸ್ಪಷ್ಟತೆ ದೊರೆಯಬೇಕಿದೆ.
ಬಿಎಸ್ಆರ್ಪಿ ರೈಲುಗಳಿಗೆ ಸಿಗ್ನಲಿಂಗ್ ವ್ಯವಸ್ಥೆ
ಬೆಂಗಳೂರು ಉಪನಗರ ರೈಲು ಯೋಜನೆ (ಬಿಎಸ್ಆರ್ಪಿ) ಅನ್ನು ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ಕಂಪನಿ ಕರ್ನಾಟಕ (K-RIDE) ಜಾರಿಗೆ ತರುತ್ತಿದೆ. ಭಾರತೀಯ ರೈಲ್ವೆ ಹಳಿಗಳನ್ನು ಹಂಚಿಕೊಳ್ಳಲು ಮತ್ತು ಪರಸ್ಪರ ಕಾರ್ಯಾಚರಣಾ ಸಮಸ್ಯೆಗಳನ್ನು ಪರಿಹರಿಸಲು ಸಿಗ್ನಲಿಂಗ್ ವ್ಯವಸ್ಥೆ ಬದಲಾಯಿಸುವ ಬಗ್ಗೆ ಕಂಪನಿ ಒಲವು ವ್ಯಕ್ತಪಡಿಸಿದೆ. ಏಕೆಂದರೆ ಭಾರತೀಯ ರೈಲುಗಳು ಸ್ವಯಂಚಾಲಿತ ಬ್ಲಾಕ್ ಸಿಗ್ನಲಿಂಗ್ ಬಳಸುತ್ತಿವೆ. ಬೆಂಗಳೂರು ಉಪನಗರ ರೈಲುಗಳು ಸಂವಹನ ಆಧಾರಿತ ರೈಲು ನಿಯಂತ್ರಣ (CBTC) ವ್ಯವಸ್ಥೆಯಡಿ ಕಾರ್ಯಾಚರಣೆ ಆಗುತ್ತಿವೆ.
ಎಂಡ್-ಟು-ಎಂಡ್ ರೈಲು ಸೇವೆ: ಕೆ-ರೈಡ್
ಕೆಂಗೇರಿ ಮತ್ತು ವೈಟ್ಫೀಲ್ಡ್ ಮಧ್ಯ ಎಂಡ್-ಟು-ಎಂಡ್ ರೈಲು ಸೇವೆಗಳ ಕಾರ್ಯಾಚರಣೆಗೆ ಪ್ಲಾನ್ ಮಾಡಿದ್ದೇವೆ. ಕಂಟೋನ್ಮೆಂಟ್ನಲ್ಲಿ ಉಪನಗರ ಸೇವೆ ಕೊನೆಗೊಳಿಸುವುದನ್ನು ಮತ್ತು ವೈಟ್ಫೀಲ್ಡ್ಗೆ ಮುಂದಿನ ಪ್ರಯಾಣಕ್ಕಾಗಿ ಮೆಮು ರೈಲು ಕಾರ್ಯಾಚರಣೆ ಬಗ್ಗೆ ಯೋಚಿಸಿದ್ದೇವೆ ಎಂದು ಕೆ-ರೈಡ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಕಂಟೋನ್ಮೆಂಟ್ ನಂತರದ ಹೊರಗಿನ ಮಾರ್ಗದಲ್ಲಿನ ಚತುಷ್ಪಥ ನಿರ್ಮಾಣಕ್ಕೆ ಭೂಮಿ ಲಭ್ಯವಿಲ್ಲ. ಆ ನಿಲ್ದಾಣವರೆಗಿನ ಚತುಷ್ಪಥ ಮಾರ್ಗ ನಿರ್ಮಾಣ ಯೋಜನೆಯು ಡಿಸೆಂಬರ್ 2026 ರೊಳಗೆ ಪೂರ್ಣಗೊಳ್ಳಲಿದೆ. ವೈಟ್ಫೀಲ್ಡ್ನಿಂದ ಮೆಮು ರೈಲು ಓಡಾಟದ ಆಯ್ಕೆ ಉತ್ತಮವಾಗಿದೆ. ಬಿಎಸ್ಆರ್ಪಿಯ ಎತ್ತರದ ನಿಲ್ದಾಣವು ಈ ಟರ್ಮಿನಲ್ನಿಂದ ಸ್ವಲ್ಪ ದೂರದಲ್ಲಿ ಪಾದಚಾರಿ ಮೇಲ್ಸೇತುವೆ ನಿರ್ಮಾಣಗೊಳ್ಳಲಿದೆ. ಮುಂದೆ ತಾಂತ್ರಿಕ ಮೌಲ್ಯಮಾಪನದ ನಂತರ ಕಂಟೋನ್ಮೆಂಟ್-ವೈಟ್ಫೀಲ್ಡ್ ಸಂಪರ್ಕದ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕೆ-ರೈಡ್ ವ್ಯವಸ್ಥಾಪಕ ನಿರ್ದೇಶಕ ಲಕ್ಷ್ಮಣ್ ಸಿಂಗ್ ಅವರು ಡಿಚ್ಗೆ ತಿಳಿಸಿದ್ದಾರೆ.
ಸದ್ಯ ಅನುಮೋದನೆ ಪಡೆದ "ಕೆಂಗೇರಿ-ಕಂಟೋನ್ಮೆಂಟ್' ಉಪನಗರ ಕಾರಿಡಾರ್ಗೆ ಯೋಜನೆ ಆರಂಭಕ್ಕೆ ಭೂಮಿ ಮೌಲ್ಯಮಾಪನ ನಡೆಸಲಾಗುತ್ತಿದೆ. ಶೀಘ್ರವೇ ಟೆಂಡರ್ ಆಹ್ವಾನಿಸಲಾಗುತ್ತದೆ. ಈ ಯೋಜನೆ ಪೂರ್ಣಗೊಳ್ಳಲು ಮಾರ್ಚ್ 2030ರ ಗುಡುವು ನೀಡಲಾಗಿದೆ.
---------
ಕ್ರಿಕೆಟ್ ಬಗ್ಗೆ ನಿಮಗೇನು ಬೇಕೋ ಅದೆಲ್ಲ 'ಮೈಖೇಲ್' ವೆಬ್ಸೈಟ್ನಲ್ಲಿದೆ
ಕ್ರಿಕೆಟ್ ಆಟವನ್ನು ಲೈವ್ ನೋಡುವುದಷ್ಟೇ ಅಲ್ಲ, ರಿಪೋರ್ಟ್ ಓದುವುದೂ ಸಹ ಅಭಿಮಾನಿಗಳ ಪಾಲಿಗೆ ಸುಖ. ಕನ್ನಡದಲ್ಲಿ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ 'ಮೈಖೇಲ್' ಜಾಲತಾಣದಲ್ಲಿ ಲಭ್ಯ. ಇಲ್ಲಿ ಲೈವ್ ಸ್ಕೋರ್, ಬ್ರೇಕಿಂಗ್ ನ್ಯೂಸ್, ಪಂದ್ಯಗಳ ವೇಳಾಪಟ್ಟಿ, ಮ್ಯಾಚ್ ರಿಪೋರ್ಟ್, ಆಟಗಾರರ ಹೇಳಿಕೆ, ವಿವಾದ, ಗಾಸಿಪ್, ಪ್ರೊಫೈಲ್, ಆಕರ್ಷಕ ಫೋಟೊಗಳು, ಇನ್ಫೋಗ್ರಾಫಿಕ್ಸ್ ಸೇರಿದಂತೆ ಕ್ರಿಕೆಟ್ ಅಭಿಮಾನಿಗಳು ಬಯಸುವ ಎಲ್ಲವೂ ಇದೆ. ಕ್ರಿಕೆಟ್ ಬಗ್ಗೇ ಏನೇ ಬೇಕಿದ್ದರೂ 'ಮೈಖೇಲ್' ವೆಬ್ಸೈಟ್ ನೋಡಿ. ನೆನಪಿರಲಿ: ಕನ್ನಡದಲ್ಲಿ ಕ್ರಿಕೆಟ್, 'ಮೈಖೇಲ್' ವೆಬ್ಸೈಟ್ ಬೆಸ್ಟ್.
ಕ್ರೀಡಾಲೋಕದ ತಾಜಾ ಮಾಹಿತಿಗಾಗಿ ಫೇಸ್ಬುಕ್ ಮತ್ತು ಟ್ವಿಟರ್ನಲ್ಲೂ ಮೈಖೇಲ್ ಫಾಲೊ ಮಾಡಿ.
-
Opinion - Kalyana Karnataka Train: ಕೇಂದ್ರ ಸಚಿವ ವಿ ಸೋಮಣ್ಣ ಅವರೇ ಕನ್ನಡಿಗರ ಸಂಕಷ್ಟ ಸ್ವಲ್ಪ ನೋಡಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ












Click it and Unblock the Notifications