Bengaluru suburban rail: ರೈಲ್ವೆ ಕಾಮಗಾರಿಯ ವೇಗ- ಯೋಜನೆ ಪೂರ್ಣದ ಅಪ್ಡೇಟ್ ಕೊಟ್ಟ ಸರ್ಕಾರ
ಬೆಂಗಳೂರು, ಫೆಬ್ರವರಿ 09: ಕರ್ನಾಟಕ ರಾಜ್ಯ ಸರ್ಕಾರ ಮತ್ತು K-RIDE ಸಹಯೋಗದಲ್ಲಿ ನಡೆಯುತ್ತಿರುವ ಬೆಂಗಳೂರು ಉಪನಗರ ರೈಲು ಯೋಜನೆಯ (Bengaluru sub urban rail) ಕಾಮಗಾರಿ ಮತ್ತಷ್ಟು ವೇಗ ಪಡೆಯಲಿದೆ. ಇದಕ್ಕೆ ಪೂರಕವಾಗಿ ಸಿಹಿ ಸುದ್ದಿಯೊಂದು ಲಭಿಸಿದೆ.
ಜಮರ್ನಿಯ ಲಕ್ಸಂಬರ್ಗ್ ನಗರದ ಕೆಎಫ್ ಡಬ್ಲ್ಯು ಡೆವಲಪ್ಮೆಂಟ್ ಬ್ಯಾಂಕ್ ರಾಜ್ಯ ಸರಕಾರದ ಕೆ-ರೈಡ್ ಸಂಸ್ಥೆಗೆ ₹4,561 ಕೋಟಿ (500 ಮಿಲಿಯನ್ ಯೂರೋ) ಸಾಲ ನೀಡಲು ಒಪ್ಪಿದೆ. ಈ ಕುರಿತು ಕರ್ನಾಟಕ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರ ಸಮ್ಮುಖದಲ್ಲಿ ಶುಕ್ರವಾರ ಬೆಳಗ್ಗೆ ಬೆಂಗಳೂರಿನಲ್ಲಿ ಉದ್ದೇಶಿತ ಒಡಂಬಡಿಕೆಗೆ ಅಧಿಕಾರಿಗಳು ಸಹಿ ಹಾಕಿದರು.

ಪ್ರಮುಖ ಒಪ್ಪಂದಕ್ಕೆ ಅಂಕಿತ
ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ಕಂಪನಿಯಾಗಿರುವ (K-RIDE) ಪರವಾಗಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿಯೂ ಆದ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಎನ್. ಮಂಜುಳಾ ಮತ್ತು ಕೆಎಫ್ ಡಬ್ಲ್ಯೂ ಪರವಾಗಿ ಅದರ ಭಾರತದ ನಿರ್ದೇಶಕ ವೂಲ್ಫ್ ಮೌತ್ ಅಂಕಿತ ಹಾಕಿದರು.
ಈ ವೇಳೆ ಮಾತನಾಡಿದ ಸಚಿವ ಎಂಬಿ ಪಾಟೀಲ್ ಅವರು, ಕೇಂದ್ರ ಸರ್ಕಾರದ ಆರ್ಥಿಕ ಇಲಾಖೆ ಮತ್ತು KFW ನಡುವೆ ಈ ಸಂಬಂಧ 2023ರ ಡಿ.15ರಂದು ಪ್ರಾಥಮಿಕ ಒಪ್ಪಂದವಾಗಿತ್ತು. ಈಗ ಕೆಎಫ್ ಡಬ್ಲ್ಯು ಮತ್ತು ಯೋಜನೆಯ ಅನುಷ್ಠಾನದ ಹೊಣೆ ಹೊತ್ತಿರುವ ಕೆ-ರೈಡ್ ನಡುವೆ ಪೂರಕ ಒಪ್ಪಂದ ಮಾಡಿಕೊಳ್ಳಲಾಗಿದೆ.

4 ಕಾರಿಡಾರ್ ನಿರ್ಮಾಣ 2027ಕ್ಕೆ ಪೂರ್ಣ
ಯೋಜನೆಯ ಎಲ್ಲಾ ನಾಲ್ಕೂ ಕಾರಿಡಾರ್ ಗಳ ಕಾಮಗಾರಿಗಳು 2027ರ ಡಿಸೆಂಬರ್ ವೇಳೆಗೆ ಪೂರ್ಣಗೊಳಿಸಲು ಇದು ಮಹತ್ವದ ಒಪ್ಪಂದ ಎಂದು ಅವರು ಮಾಹಿತಿ ನೀಡಿದರು.
ಶೇಕಡಾ 4ರ ಬಡ್ಡಿ ದರದಲ್ಲಿ 20 ವರ್ಷಗಳ ಅವಧಿಗೆ ಈ ಸಾಲವನ್ನು ಜರ್ಮನಿ ಬ್ಯಾಂಕ್ ನೀಡುತ್ತಿದೆ. ಕೆಎಫ್ ಡಬ್ಲ್ಯು ನೀಡುತ್ತಿರುವ ಹಣವನ್ನು ಕೆಂಗೇರಿ-ವೈಟಫೀಲ್ಡ್ ನಡುವಿನ ಕಾರಿಡಾರ್-3ರ ಅಡಿ ಬರುವ ಸ್ಟೇಷನ್ ವರ್ಕ್, ವಯಾಡಕ್ಟ್, ಹೀಳಲಿಗೆ-ರಾಜಾನುಕುಂಟೆ ನಡುವಿನ ಕಾರಿಡಾರ್-4ರ ವ್ಯಾಪ್ತಿಯಲ್ಲಿ ಬರುವ ದೇವನಹಳ್ಳಿಯಲ್ಲಿನ ಡಿಪೋ-1, ಸಿಗ್ನಲ್ ಮತ್ತು ಟೆಲಿಕಾಂ, ಪ್ಲಾಟ್ ಫಾರಂ ಸ್ಕ್ರೀನ್ ಡೋರ್, ಸ್ವಯಂಚಾಲಿತ ಪ್ರಯಾಣ ದರ ವಸೂಲಿ ವ್ಯವಸ್ಥೆ, ಸೌರ ಫಲಗ, ಭದ್ರತಾ ಸಾಧನಗಳು ಮತ್ತು ಎಂಎಐ (ಮ್ಯಾನ್ ಮಶೀನ್ ಇಂಟರ್ಫೇಸ್) ಕಾಮಗಾರಿಗಳಿಗೆ ಬಳಸಿಕೊಳ್ಳಲಾಗುವುದು ಎಂದು ಸಚಿವರು ವಿವರಿಸಿದರು.
ಕಾಲಮಿತಿಯಲ್ಲಿ ಯೋಜನೆ ಪೂರ್ಣಕ್ಕೆ ಕ್ರಮ
ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರಿಗೆ ಬ್ರ್ಯಾಂಡ್ ಮೌಲ್ಯವಿದೆ. ಅಲ್ಲದೇ ನಗರಗಳಲ್ಲಿ ಸುಗಮ ಸಂಚಾರ ಜಾಲವನ್ನು ಅಭಿವೃದ್ಧಿ ಪಡಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಇದಕ್ಕೆ ತಕ್ಕಂತೆ ಸಬರ್ಬನ್ ರೈಲು ಯೋಜನೆಯನ್ನು ಕಾಲಮಿತಿಯಲ್ಲಿ ಪೂರೈಸಲು ಹಲವು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಯೋಜನೆಯು ರಾಜ್ಯದ ರಾಜಧಾನಿಯ ಚಹರೆಯನ್ನೇ ಆಮೂಲಾಗ್ರವಾಗಿ ಬದಲಿಸಲಿದೆ ಎಂದರು.
ಬೆಂಗಳೂರಿನ ಜನರ ಜೀವನವನ್ನು ಸುಗಮಗೊಳಿಸುವುದು ಉಪನಗರ ರೈಲು ಯೋಜನೆಯ ಉದ್ದೇಶವಾಗಿದೆ. ಒಟ್ಟು 15,767 ಕೋಟಿ ರೂ. ವೆಚ್ಚದ ಈ ಯೋಜನೆಯು 58 ನಿಲ್ದಾಣಗಳು ಸ್ಥಾಪನೆ ಆಗಲಿವೆ. ಇದರಲ್ಲಿ ಒಟ್ಟು 4 ಕಾರಿಡಾರ್ ಗಳಲ್ಲಿ 148 ಕಿ.ಮೀ. ಉದ್ದ ಇರಲಿದೆ.
ಯೋಜನೆಗೆ ಸರ್ಕಾರದ ಪಾಲೆಷ್ಟು?
ಈ ಯೋಜನೆಗೆ ಕೇಂದ್ರ ಸರಕಾರದ ರೈಲ್ವೆ ಸಚಿವಾಲಯ ಮತ್ತು ರಾಜ್ಯ ಸರ್ಕಾರಗಳು ತಲಾ ಶೇಕಡ 20ರಷ್ಟು ಹೂಡಿಕೆ ಮಾಡಲಿವೆ. ಬಾಹ್ಯ ಸಾಲದ ರೂಪದಲ್ಲಿ ಶೇ.60ರಷ್ಟು ಸಂಪನ್ಮೂಲ ಕ್ರೋಢೀಕರಣ ಮಾಡಲಾಗುವುದು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಬೆಂಗಳೂರಿನಲ್ಲಿರುವ ಜರ್ಮನಿ ಕಾನ್ಸುಲ್ ಜನರಲ್ ಅಕಿಂ ಬರ್ಕಾರ್ಟ್, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಕೆಎಫ್ ಡಬ್ಲ್ಯು ಹಿರಿಯ ಪರಿಣತೆ ಸ್ವಾತಿ ಖನ್ನಾ ಮತ್ತು ಕಾಂಚಿ ಅರೋರ ಮತ್ತಿತರರು ಉಪಸ್ಥಿತರಿದ್ದರು.
-
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಹಿರಿಯ ನಾಗರಿಕರಿಗೆ ರೈಲ್ವೇ ನಿಯಮಗಳು 2026: ರಿಯಾಯಿತಿ ಇಲ್ಲದಿದ್ದರೂ ಸೌಲಭ್ಯಗಳು ಮುಂದುವರಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್











Click it and Unblock the Notifications