ಬೆಂಗಳೂರು ಉಪನಗರ ರೈಲು ಯೋಜನೆ: 2ನೇ ಹಂತದ ಕಾಮಗಾರಿಗೆ ಟೆಂಡರ್ ಅಂತಿಮ-ವಿ.ಸೋಮಣ್ಣ
ಬೆಂಗಳೂರು, ಸೆಪ್ಟಂಬರ್ 22: ಬೆಂಗಳೂರು ಉಪನಗರ ರೈಲು ಯೋಜನೆಯ ಎರಡನೇ ಹಂತಕ್ಕೆ ಕಾಮಗಾರಿಯ ರೂ.859 ಕೋಟಿ ಟೆಂಡರ್ ಅಂತಿಮಗೊಂಡಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ಈ ಕುರಿತು ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಬಹುನಿರೀಕ್ಷಿತ ಉಪನಗರ ರೈಲು ಯೋಜನೆ ನಾಲ್ಕು ಹಂತದಲ್ಲಿ ಸಿದ್ಧವಾಗುತ್ತಿದೆ. ಇತ್ತೀಚೆಗಷ್ಟೆ 25ಕಿ.ಮೀ. ದೂರದ ಉಪನಗರ ರೈಲು ಯೋಜನೆಯ ಎರಡನೇ ಹಂತದ ಶೀಘ್ರವೇ ಆರಂಭಿಸಲಾಗುವುದು ಎನ್ನಲಾಗಿತ್ತು. ಅದರಂತೆ ಇದೀಗ ಟೆಂಡರ್ ಪ್ರಕ್ರಿಯೆ ಅಂತಿಮಗೊಂಡಿದೆ ಎಂದರು.
ಬೈಯ್ಯಪ್ಪನಹಳ್ಳಿಯಿಂದ ಚಿಕ್ಕಬಾಣಾವರದವರೆಗಿನ ಈ 25 ಕಿಮೀ ಎರಡನೇ ಸ್ಟ್ರೆಚ್ ನಿರ್ಮಾಣಕ್ಕೆ ರೂ.859 ವೆಚ್ಚವನ್ನು ಅಂದಾಜಿಸಲಾಗಿದೆ. ಈ ಮಾರ್ಗದಲ್ಲಿ ಆರು ಎತ್ತರಿಸಿದ ಮತ್ತು ಎಂಟು ನೆಲದ ಮೇಲಿನ ನಿಲ್ದಾಣಗಳು ಬರುತ್ತವೆ. ಲಕ್ಷಾಂತರ ಜನರಿಗೆ ಈ ಯೋಜನೆಯಿಂದ ಅನುಕೂಲವಾಗಲಿದೆ. ಈ ಹಂತದ ಕಾಮಗಾರಿಯಲ್ಲಿ 27ತಿಂಗಳುಗಳಲ್ಲಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದು ಸಚಿವರು ವಿವರಿಸಿದರು.
ರಾಜ್ಯ ಸರ್ಕಾರ ಉಪನಗರ ರೈಲ್ವೆ ಯೋಜನೆಗಾಗಿ ಒಟ್ಟು 600ಕೋಟಿ ರೂ. ಬಿಡುಗಡೆ ಮಾಡಿದೆ. ಈ ಪೈಕಿ ಯೋಜನೆಯ ಪೂರ್ವಸಿದ್ಧತಾ ಕಾರ್ಯಗಳಿಗಾಗಿ ರಾಜ್ಯ ಸರ್ಕಾರ ರೂ. 120 ಕೋಟಿ ಖರ್ಚು ಮಾಡಿದೆ. ಮೊದಲ ಹಂತದ ಸಿವಿಲ್ ಕಾಮಗಾರಿ ಆರಂಭವಾಗಿದೆ. ಮೂರನೇ ಹಂತದ ಯೋಜನೆ ಕುರಿತು ಟೆಂಡರ್ ಕರೆಯುವ ಬಗ್ಗೆ ಕೇಂದ್ರ ಸರ್ಕಾರದ ಜತೆಗೆ ಚರ್ಚಿಸಲಾಗುವುದು ಎಂದು ವಿ.ಸೋಮಣ್ಣ ತಿಳಿಸಿದರು.

ಉಪನಗರ ರೈಲು ಯೋಜನೆಗೆ ಅನಂತ್ಕುಮಾರ್ ಹೆಸರು?
ಒಟ್ಟು 147ಕಿ.ಮೀ. ವ್ಯಾಪ್ತಿಯ ನಾಲ್ಕು ಹಂತದ ಉಪನಗರ ರೈಲು ಯೋಜನೆಯಲ್ಲಿ ಮೊದಲ ಹಂತ 41ಕಿ.ಮೀ. ಇದ್ದು, ಇದು ಬೆಂಗಳೂರಿನಿಂದ ದೇವನಹಳ್ಳಿಗೆ ಸಂಪರ್ಕ ಕಲ್ಪಿಸಲಿದೆ. ನಂತರ ಬೈಯಪ್ಪನಹಳ್ಳಿ-ಚಿಕ್ಕಬಾಣಾವರ, ಕೆಂಗೇರಿ-ವೈಟ್ಫಿಲ್ಡ್, ಹಿಲಲಿಗೆ-ರಾಜಾನುಕುಂಟೆ ಸಂಪರ್ಕ ಸಾಧಿಸುವ ಇದೊಂದು ದೊಡ್ಡ ಯೋಜನೆಯಾಗಿದೆ ಎಂದರು.

ಬೆಂಗಳೂರು ಉಪನಗರ ರೈಲು ಯೋಜನೆ ದಿ.ಅನಂತ್ಕುಮಾರ್ ಅವರ ಕನಸು. ಹೀಗಾಗಿ ಅವರ ಹೆಸರನ್ನು ಈ ಯೋಜನೆ ಇಡಬೇಕು ಎಂಬುದರ ಕುರಿತು ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು. ಈ ಬಗ್ಗೆ ಅವರು ಸಾಕಷ್ಟು ಬಾರಿ ನನ್ನೊಂದಿಗೆ ಮಾತನಾಡಿದ್ದು ಎಂದು ಅವರೊಂದಿಗಿನ ಚರ್ಚೆ ಸ್ಮರಿಸಿ ವಿ.ಸೋಮಣ್ಣ ತಿಳಿಸಿದರು.
-
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications