Bengaluru Suburban Rail: ಹೊಸ ಗಡುವು ನೀಡಿದ ಕೇಂದ್ರ, 2030ರವರೆಗೆ ಕಾಯಲೇಬೇಕು: ಇಲ್ಲಿದೆ ಲೇಟೆಸ್ಟ್ ಅಪ್ಡೇಟ್
ಬೆಂಗಳೂರು: ಬೆಂಗಳೂರಿನ ಟ್ರಾಫಿಕ್ ಕಿರಿಕಿರಿಯಿಂದ ಮುಕ್ತಿ ಪಡೆಯಲು ಕಾತರದಿಂದ ಕಾಯುತ್ತಿದ್ದ ಜನತೆಗೆ ಮತ್ತೆ ನಿರಾಸೆಯಾಗಿದೆ. ನಗರದ ಬಹುನಿರೀಕ್ಷಿತ 'ಬೆಂಗಳೂರು ಉಪನಗರ ರೈಲು ಯೋಜನೆ' (BSRP) ಪೂರ್ಣಗೊಳ್ಳುವುದು ಭಾರೀ ವಿಳಂಬವಾಗಲಿದ್ದು, ಈ ಯೋಜನೆಯಡಿ ರೈಲುಗಳ ಸಂಚಾರ ಆರಂಭವಾಗಲು 2030 ರವರೆಗೂ ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ. 2020ರಲ್ಲಿ ಈ ಯೋಜನೆ ಅನುಮೋದನೆಗೊಂಡಾಗ, ಚಾಲಕರಿಗೆ ಟ್ರಾಫಿಕ್ನಿಂದ ಮುಕ್ತಿ ನೀಡಿ, ಅಗ್ಗದ ಮತ್ತು ಪರಿಸರ ಸ್ನೇಹಿ ಪ್ರಯಾಣ ಒದಗಿಸುವ ಭರವಸೆ ನೀಡಲಾಗಿತ್ತು. ಆದರೆ, ಈಗಿನ ಪರಿಸ್ಥಿತಿ ನೋಡಿದರೆ ಆ ಕನಸು ನನಸಾಗಲು ಇನ್ನೂ ಐದು ವರ್ಷಗಳೇ ಬೇಕಾಗಬಹುದು.
ವಿಳಂಬಕ್ಕೆ ಕಾರಣವೇನು?
ಯೋಜನೆ ಆರಂಭಗೊಂಡು ವರ್ಷಗಳೇ ಕಳೆದರೂ, ನಿರೀಕ್ಷಿತ ವೇಗದಲ್ಲಿ ಕೆಲಸ ಸಾಗುತ್ತಿಲ್ಲ. ಪ್ರಮುಖವಾಗಿ ರೈಲ್ವೆ ಹಳಿ ನಿರ್ಮಾಣಕ್ಕೆ ಬೇಕಾದ ಭೂಸ್ವಾಧೀನ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ. ಜೊತೆಗೆ, ಎಸಿ ರೈಲು ಬೋಗಿಗಳ ಖರೀದಿ ಪ್ರಕ್ರಿಯೆಯೂ ತಲೆನೋವಾಗಿ ಪರಿಣಮಿಸಿದೆ. ಮೊದಲು ರೈಲುಗಳನ್ನು ಗುತ್ತಿಗೆ ಪಡೆಯಲು ಯೋಜಿಸಲಾಗಿತ್ತು, ಆದರೆ ಅದು ಸಾಧ್ಯವಾಗದ ಕಾರಣ ಹೊಸದಾಗಿ ರೈಲುಗಳನ್ನು ಖರೀದಿಸಬೇಕಿದೆ. ಇವೆಲ್ಲದರ ಪರಿಣಾಮವಾಗಿ, ರೈಲು ಮಾರ್ಗಗಳ ಪೂರ್ಣಗೊಳ್ಳುವಿಕೆ ದಿನಾಂಕಗಳು ಬದಲಾಗಿವೆ.ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ಈ ಕೆಳಗಿನಂತೆ ಯೋಜನೆಗಳು ಪೂರ್ಣಗೊಳ್ಳಲಿವೆ.

- 25 ಕಿಮೀ ಮಲ್ಲಿಗೆ ಮಾರ್ಗ (ಬೆನ್ನಿಗಾನಹಳ್ಳಿ-ಚಿಕ್ಕಬಾಣಾವರ): 2028ರ ಅಂತ್ಯದ ವೇಳೆಗೆ.
- 46 ಕಿಮೀ ಕನಕ ಮಾರ್ಗ (ಹೀಲಲಿಗೆ-ರಾಜನಕುಂಟೆ): ಜೂನ್ 2029ರ ವೇಳೆಗೆ.
- 41 ಕಿಮೀ ಸಂಪಿಗೆ ಮಾರ್ಗ (ಕೆಎಸ್ಆರ್ ಬೆಂಗಳೂರು ನಗರ-ಯಲಹಂಕ-ದೇವನಹಳ್ಳಿ): ಮಾರ್ಚ್ 2030 ರೊಳಗೆ.
- 35 ಕಿಮೀ ಪಾರಿಜಾತ ಮಾರ್ಗ (ಕೆಂಗೇರಿ-ವೈಟ್ಫೀಲ್ಡ್): ಈಗ ಮಾರ್ಚ್ 2030 ರೊಳಗೆ.
ಈ ವಿಳಂಬದಿಂದಾಗಿ ನಗರದ ಹೊರವಲಯದ ಬೆಳವಣಿಗೆಗೆ ಹೊಡೆತ ಬೀಳುವುದಲ್ಲದೆ, ಮಾಲಿನ್ಯ ಮತ್ತು ಪ್ರಯಾಣದ ವೆಚ್ಚವೂ ಹೆಚ್ಚಾಗಲಿದೆ. ಇದು ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕಿದಂತೆಯೇ ಸರಿ.
ಕೆ-ರೈಡ್ (K-RIDE) ಸ್ಪಷ್ಟನೆ
ಇಷ್ಟೆಲ್ಲಾ ಸಮಸ್ಯೆಗಳ ನಡುವೆಯೂ, ಯೋಜನೆಯ ಉಸ್ತುವಾರಿ ಹೊತ್ತಿರುವ 'ಕೆ-ರೈಡ್' (K-RIDE) ಸಂಸ್ಥೆ ಇತ್ತೀಚೆಗೆ ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿದೆ. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಲಕ್ಷ್ಮಣ್ ಸಿಂಗ್ ಮತ್ತು ನಿರ್ದೇಶಕ ರಾಜೇಶ್ ಕುಮಾರ್ ಸಿಂಗ್ ಅವರು ಸ್ಥಳೀಯರು ಮತ್ತು ಸಂಘ ಸಂಸ್ಥೆಗಳ ಜೊತೆ ಮುಕ್ತವಾಗಿ ಚರ್ಚಿಸಿದ್ದಾರೆ. "ನಾವು ಕೇವಲ ಕಟ್ಟಡ ಕಟ್ಟುತ್ತಿಲ್ಲ, ಜನರ ಅಭಿಪ್ರಾಯವನ್ನೂ ಕೇಳುತ್ತಿದ್ದೇವೆ," ಎಂದು ಅವರು ಹೇಳಿದ್ದಾರೆ. ಇದೇ ವೇಳೆ, ಯೋಜನೆಯ ಮಾಹಿತಿಯನ್ನು ಜನರಿಗೆ ತಲುಪಿಸಲು 'ಸಂಪರ್ಕ' ಎಂಬ ನ್ಯೂಸ್ಲೆಟರ್ ಅನ್ನು ಬಿಡುಗಡೆ ಮಾಡಲಾಯಿತು. ಜನರ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿ, ಯೋಜನೆ ಜಾರಿಯಲ್ಲಿ ಅಳವಡಿಸಿಕೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.
ತಜ್ಞರ ಪ್ರಕಾರ, ಎಷ್ಟೇ ತಡವಾದರೂ ಈ ಯೋಜನೆ ಬೆಂಗಳೂರಿಗೆ ಅತ್ಯಗತ್ಯ. ಉದ್ಯೋಗ ಮತ್ತು ವಸತಿಗಾಗಿ ನಗರದಾದ್ಯಂತ ಹರಡಿಕೊಂಡಿರುವ ಜನರಿಗೆ ಇದು ಜೀವನಾಡಿಯಾಗಬಲ್ಲದು. ಮುಂದಿನ ದಿನಗಳಲ್ಲಿ ರೈಲು ಸಂಚಾರಕ್ಕೆ ಅಗತ್ಯವಿರುವ ಯಂತ್ರೋಪಕರಣಗಳು, ಬೋಗಿ, ಎಂಜಿನ್ಗಳ ಖರೀದಿಯೂ ಸೇರಿದಂತೆ ಒಟ್ಟಾರೆಕಾಮಗಾರಿ ವೇಗ ಪಡೆದುಕೊಳ್ಳಬೇಕಿದೆ ಎಂಬುದೇ ಎಲ್ಲರ ಒತ್ತಾಯವಾಗಿದೆ.
-
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
ಕೃಷಿಕರಿಗೆ ವರದಾನವಾದ ಶೈಲಜಾ ವಿಠಲ್ ಆವಿಷ್ಕರಿಸಿದ 35 ಕೃಷಿ ಯಂತ್ರೋಪಕರಣ, ಸಣ್ಣ ರೈತರಿಗೆ ದೊಡ್ಡ ಲಾಭ












Click it and Unblock the Notifications