Bengaluru Suburban Rail: ಸಬ್ ಅರ್ಬನ್ ರೈಲು ಯೋಜನೆ, ಪ್ರಧಾನಿ ನರೇಂದ್ರ ಮೋದಿಗೆ ಪತ್ರ
ಬೆಂಗಳೂರು, ಫೆಬ್ರವರಿ 24: ಉದ್ಯಾನ ನಗರಿ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡಲು ಕರ್ನಾಟಕ ಸರ್ಕಾರ ಬೆಂಗಳೂರು ಉಪನಗರ ರೈಲು ಯೋಜನೆ (ಬಿಎಸ್ಆರ್ಪಿ) ಅನುಷ್ಠಾನಗೊಳಿಸಲಾಗುತ್ತಿದೆ. ಕರ್ನಾಟಕ ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ ನಿಯಮಿತ (ಕೆ-ರೈಡ್) ಮೂಲಕ ಯೋಜನೆ ಜಾರಿಯಾಗುತ್ತಿದ್ದು, 2026ರ ಡಿಸೆಂಬರ್ನಲ್ಲಿ ರೈಲುಗಳ ಸಂಚಾರ ಆರಂಭವಾಗುವ ನಿರೀಕ್ಷೆ ಇದೆ. 2022ರಲ್ಲಿ ಈ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಶಂಕು ಸ್ಥಾಪನೆ ಮಾಡಿದ್ದರು.
ಬೆಂಗಳೂರಿನ ಸಿಟಿಜನ್ಸ್ ಫಾರ್ ಸಿಟಿಜನ್ಸ್ ಸಂಸ್ಥೆ ಬೆಂಗಳೂರು ಉಪನಗರ ರೈಲು ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ಪತ್ರವನ್ನು ಬರೆದಿದೆ. ಈ ಯೋಜನೆ ಕುರಿತು ತುರ್ತಾಗಿ ಗಮನಹರಿಸಬೇಕು ಎಂದು ಮನವಿ ಮಾಡಿದೆ. 21 ಅಕ್ಟೋಬರ್ 2020ರಲ್ಲಿ ಈ ಯೋಜನೆಯನ್ನು 2026ರಲ್ಲಿ ಪೂರ್ಣಗೊಳಿಸುವುದಾಗಿ ಅನುಮತಿ ನೀಡಲಾಗಿತ್ತು ಎಂದು ತಿಳಿಸಿದೆ.

ಯೋಜನೆಗೆ ಶಂಕು ಸ್ಥಾಪನೆ: ಪ್ರಧಾನಿ ನರೇಂದ್ರ ಮೋದಿಗೆ ಬರೆದ ಪತ್ರದಲ್ಲಿ ಜೂನ್ 21, 2022ರಲ್ಲಿ ಯೋಜನೆಗೆ ಶಂಕುಸ್ಥಾಪನೆ ಮಾಡಿದಾಗ ಬೆಂಗಳೂರಿನ ಜನರು ಸಂತಸಗೊಂಡಿದ್ದರು. 2025ರ ಅಕ್ಟೋಬರ್ನಲ್ಲಿ ಯೋಜನೆ ಪೂರ್ಣಗೊಳ್ಳಲಿದೆ ಎಂದು ನಿರೀಕ್ಷಿಸಿದ್ದರು ಎಂದು ಪತ್ರದಲ್ಲಿ ವಿವರಣೆ ನೀಡಲಾಗಿದೆ.
ಸಬ್ ಅರ್ಬನ್ ರೈಲು ಯೋಜನೆಯ ಎರಡು ಕಾರಿಡಾರ್ನ ಕಾಮಗಾರಿ ಶೇ 12ರಷ್ಟು ಮಾತ್ರ ಪೂರ್ಣಗೊಂಡಿದೆ. ಕಾರಿಡಾರ್ 1 & 3ರ ಕಾಮಗಾರಿ ಇನ್ನೂ ಆರಂಭವಾಗಬೇಕಿದೆ. ಒಪ್ಪಂದದಂತೆ ಕಾರಿಡಾರ್-1 (ವಿಮಾನ ನಿಲ್ದಾಣ) 2023ರ ಅಕ್ಟೋಬರ್ನಲ್ಲಿ ಪೂರ್ಣಗೊಳ್ಳಬೇಕಿತ್ತು ಎಂದು ಪತ್ರದಲ್ಲಿ ವಿವರಿಸಲಾಗಿದೆ.
ಸುಮಾರು 2 ಕೋಟಿ ಜನರು ವಾಸ ಮಾಡುವ ಬೆಂಗಳೂರು ನಗರಕ್ಕೆ ಸಬ್ ಅರ್ಬನ್ ರೈಲು ಯೋಜನೆ ಪ್ರಮುಖವಾಗಿದೆ. ಯೋಜನೆಗೆ ಇರುವ ಅಡೆತಡೆಗಳನ್ನು ನಿವಾರಣೆ ಮಾಡಿ ಬೇಗ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಲು ತುರ್ತಾಗಿ ಗಮನಹರಿಸಬೇಕು ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.
ಅಲ್ಲದೇ ಈ ನಾಲ್ಕು ಕಾರಿಡಾರ್ಗಳನ್ನು ವಿಸ್ತರಣೆ ಮಾಡಲು ಕ್ರಮ ಕೈಗೊಳ್ಳಬೇಕು. ಯೋಜನೆಯನ್ನು ತುಮಕೂರು, ಕುಣಿಗಲ್, ಮಾಗಡಿ, ರಾಮನಗರ, ಆನೇಕಲ್, ಬಂಗಾರಪೇಟೆ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರಕ್ಕೆ ವಿಸ್ತರಣೆ ಮಾಡಬೇಕು. ಬೆಂಗಳೂರು ನಗರದಿಂದ ಸುತ್ತಮುತ್ತಲ ಪಟ್ಟಣಕ್ಕೆ ಸಂಚಾರ ನಡೆಸಲು ಇರುವ ದಟ್ಟಣೆಯನ್ನು ಕಡಿಮೆ ಮಾಡಬೇಕು ಎಂದು ಮನವಿ ಪತ್ರದಲ್ಲಿ ಮನವಿ ಸಲ್ಲಿಕೆ ಮಾಡಲಾಗಿದೆ.
ಸಚಿವ ವಿ. ಸೋಮಣ್ಣ ಸಭೆ: ಕೆಲವು ದಿನಗಳ ಹಿಂದೆ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಬೆಂಗಳೂರಿನಲ್ಲಿ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದರು. ಬಿಎಸ್ಆರ್ಪಿ ಯೋಜನೆ ಕುರಿತು ಮಾಹಿತಿ ಪಡೆದಿದ್ದರು. ಬಳಿಕ ಮಾತನಾಡಿದ್ದ ಅವರು, "ಬೆಂಗಳೂರು ಉಪನಗರ ರೈಲು ಯೋಜನೆಯ 2 ಮತ್ತು 4ನೇ ಕಾರಿಡಾರ್ ಅನ್ನು 2026ರ ಡಿಸೆಂಬರ್ನಲ್ಲಿ ಪೂರ್ಣಗೊಳಿಸಿ, ಲೋಕಾರ್ಪಣೆ ಮಾಡಲಿದ್ದೇವೆ" ಎಂದು ಘೋಷಣೆ ಮಾಡಿದ್ದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವೆಚ್ಚ ಹಂಚಿಕೆ ಮಾಡಿಕೊಂಡು ಬೆಂಗಳೂರು ಉಪನಗರ ರೈಲು ಯೋಜನೆಯನ್ನು ಕೈಗೊಂಡಿವೆ. 1983ರಲ್ಲಿ ಮೊದಲು ಪ್ರಸ್ತಾವಿತವಾಗಿದ್ದ ಯೋಜನೆ ಇದು. 2022ರ ಜೂನ್ 21ರಂದು ಪ್ರಧಾನಿ ನರೇಂದ್ರ ಮೋದಿ ಯೋಜನೆಗೆ ಚಾಲನೆ ನೀಡಿದ್ದರು. ಯೋಜನೆಗೆ ಅಗತ್ಯವಿರುವ ರೈಲು ಬೋಗಿ ಖರೀದಿಗೆ ಕರ್ನಾಟಕ ಸರ್ಕಾರ ಈಗಾಗಲೇ ಒಪ್ಪಿಗೆಯನ್ನು ನೀಡಿದೆ.
-
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹ; ರಾಜ್ಯದ ಎಲ್ಲ ಸಂಸದರಿಗೆ ಪುರುಷೋತ್ತಮ ಬಿಳಿಮಲೆ ಪತ್ರ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral












Click it and Unblock the Notifications