Bengaluru Suburban Rail Project: ಕರ್ನಾಟಕ ಸರ್ಕಾರಕ್ಕೆ ಅಶ್ವಿನಿ ವೈಷ್ಣವ್ ಸೂಚನೆ ಏನು?-ಮಾಹಿತಿ, ವಿವರ
ಬೆಂಗಳೂರು, ಮಾರ್ಚ್, 15: ಬೆಂಗಳೂರು ಉಪನಗರ ರೈಲು ಯೋಜನೆಯು ಎಲ್ಲಿಗೆ ಬಂದಿದೆ. ಹಾಗೂ ಈ ಬಗ್ಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಏನು ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬೆಂಗಳೂರು ಉಪನಗರ ರೈಲು ಯೋಜನೆ ಕಾಮಗಾರಿಯನ್ನು ವೇಗ ನೀಡಿ ಅತೀ ಬೇಗ ಮುಗಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಕರ್ನಾಟಕ ಸರ್ಕಾರಕ್ಕೆ ಸೂಚಿಸಿದ್ದಾರೆ.

ಉಪನಗರ ರೈಲು ಯೋಜನೆಗೆ ವೇಗ ನೀಡಲು ರಾಜ್ಯ ಸರ್ಕಾರ ಮತ್ತು ರೈಲ್ವೆ ಸಚಿವಾಲಯದ ಜಂಟಿ ಕಂಪನಿಯಾಗಿರುವ ಕೆ-ರೈಡ್ನಲ್ಲಿ ಅಧಿಕಾರಿಗಳು ತಜ್ಞರನ್ನು ನೇಮಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
"ರಾಜ್ಯ ಸರ್ಕಾರದ ನಿಯಂತ್ರಣದಲ್ಲಿರುವ KRIDE ಕಂಪನಿಯು ಬೆಂಗಳೂರು ಉಪನಗರ ರೈಲ್ವೆ ಯೋಜನೆಯ ಜವಾಬ್ದಾರಿಯನ್ನು ಹೊತ್ತೊಕೊಂಡಿದ್ದು, ಇದು ಹೆಚ್ಚು ತಾಂತ್ರಿಕ ಪರಿಣತಿಯನ್ನು ಹೊಂದಿರುವವರನ್ನು ನೇಮಿಸಿಕೊಂಡಿಲ್ಲ. ಅಂತಹ ತಜ್ಞರನ್ನು ನೇಮಿಸಿಕೊಳ್ಳಲು ಕರ್ನಾಟಕ ಸರ್ಕಾರಕ್ಕೆ ವಿನಂತಿಸಿಕೊಳ್ಳುತ್ತೇನೆ. ಇದರಿಂದ ಯೋಜನೆಯ ಕೆಲಸ ವೇಗ ಪಡೆಯುತ್ತದೆ ಎಂದು ವೈಷ್ಣವ್ ಹೇಳಿದ್ದಾರೆ," ಅಂತಾ ಪಿಟಿಐ ವರದಿ ಮಾಡಿದೆ.
"ಬೆಂಗಳೂರು ಉಪನಗರ ರೈಲ್ವೇ ಯೋಜನೆಯು ತುಂಬಾ ಬಹಳ ಪ್ರಮುಖವಾಗಿದೆ. ಆದರೆ ದುರದೃಷ್ಟವಶಾತ್ ಪ್ರಸ್ತುತ KRIDEಗೆ ಇರಬೇಕಾದ ಪರಿಣತಿ ತಜ್ಞರ ಕೊರತೆಯಿದೆ. ದೇಶದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬದಲಾವಣೆ ಮಾಡಿ. ಇ ಶ್ರೀಧರನ್ ಅವರಂತಹ ಜನರು ನಮಗೆ ಅಗತ್ಯವಿದೆ" ಎಂದು ಹೇಳಿದರು.
ಇನ್ನು ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಇತ್ತೀಚೆಗೆ ಯೋಜನೆ ಪೂರ್ಣಗೊಳಿಸುವ ದಿನಾಂಕವನ್ನು ಡಿಸೆಂಬರ್ 2025ರಿಂದ ಡಿಸೆಂಬರ್ 2027ಕ್ಕೆ ಮುಂದೂಡಿದೆ.
ಇನ್ನು ಈ ಯೋಜನೆ ಕುರಿತು ಮಾತನಾಡಿದ್ದ ಸಚಿವ ಎಂ.ಬಿ.ಪಾಟೀಲ್ ಅವರು, ಕಾಮಗಾರಿಯನ್ನು ವಿಳಂಬ ಮಾಡದಂತೆ ಕೆ-ರೈಡ್ಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದರು. ಈ ಯೋಜನೆಗೆ ಧನಸಹಾಯ ನೀಡಲು ಕರ್ನಾಟಕ ಸರ್ಕಾರವು ಜರ್ಮನಿಯ ಕೆಎಫ್ಡಬ್ಲ್ಯೂ ಡೆವಲಪ್ಮೆಂಟ್ ಬ್ಯಾಂಕ್ನೊಂದಿಗೆ ಎಂಒಯುಗೆ ಸಹಿ ಹಾಕಿದೆ. ಬ್ಯಾಂಕ್ 20 ವರ್ಷಗಳ ಕಾಲ ವಾರ್ಷಿಕ ಶೇಕಡ 4ರಷ್ಟು ಬಡ್ಡಿ ದರದಲ್ಲಿ 4,561 ಕೋಟಿ ರೂಪಾಯಿ ಸಾಲ ನೀಡಲಿದೆ ಎನ್ನುವ ಮಾಹಿತಿಯೂ ಲಭ್ಯವಾಗಿತ್ತು.
ಇದು ಜರ್ಮನಿಯ ಕೆಎಫ್ಡಬ್ಲ್ಯೂ ಡೆವಲಪ್ಮೆಂಟ್ ಬ್ಯಾಂಕ್ ಮತ್ತು ಕೆ-ರೈಡ್ ನಡುವಿನ ಪೂರಕ ಒಪ್ಪಂದ ಆಗಿದೆ. ನಂತರ ಡಿಸೆಂಬರ್ 15, 2023ರಂದು ಭಾರತ ಸರ್ಕಾರದ ಆರ್ಥಿಕ ವ್ಯವಹಾರಗಳ ಇಲಾಖೆ ಮತ್ತು KfW ನಡುವಿನ 4,561 ಕೋಟಿಯ ನೀಡಲು ಮೊದಲ ಒಪ್ಪಂದ ಆಗಿದೆ. ಸದ್ಯ ಚಿಕ್ಕಬಾಣಾವರದಿಂದ ಯಶವಂತಪುರದವರೆಗಿನ ಎರಡನೇ ಕಾರಿಡಾರ್ ಕಾಮಗಾರಿಗಳು ನಡೆಯುತ್ತಿವೆ. ಜೂನ್ 2025ರೊಳಗೆ ಪೂರ್ ಆಗುವ ನಿರೀಕ್ಷೆ ಇದೆ. ಯಶವಂತಪುರದಿಂದ ಬೆನ್ನಿಗಾನಿಹಳ್ಳಿ ಮಾರ್ಗವು 2026ರ ಅಂತ್ಯದ ವೇಳೆಗೆ ಕಾರ್ಯನಿರ್ವಹಿಸುವ ನಿರೀಕ್ಷೆ ಇದೆ ಎನ್ನಲಾಗಿದೆ.
ಕಾರಿಡಾರ್ 1 ಅನ್ನು ಎರಡು ಭಾಗಗಳಾಗಿ ವಿಂಗಡಣೆ ಮಾಡಲಾಗಿದೆ. ಯಲಹಂಕದಿಂದ ದೇವನಹಳ್ಳಿವರೆಗೆ ಮೊದಲ ಭಾಗ ಡಿಸೆಂಬರ್ 2026ರ ವೇಳೆಗೆ ಪೂರ್ಣವಾಗುತ್ತದೆ. ಬೆಂಗಳೂರು ನಗರದಿಂದ ಯಲಹಂಕ ಡಿಸೆಂಬರ್ 2027ರೊಳಗೆ ಪೂರ್ಣ ಆಗಲಿದೆ ಎಂದು ತಿಳಿದುಬಂದಿದೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು












Click it and Unblock the Notifications