ಬೆಂಗಳೂರು ಉಪನಗರ ರೈಲ್ವೆ ಯೋಜನೆ: ಎರಡನೇ ಹಂತ 146 ಕಿ.ಮೀ ವ್ಯಾಪ್ತಿಗೆ, ಈ ಭಾಗದ ಜನರಿಗೆ ಅನುಕೂಲ!
ಬೆಂಗಳೂರು ಉಪನಗರ ರೈಲ್ವೆ ಯೋಜನೆಯ (ಬಿಎಸ್ಆರ್ಪಿ)ಲ್ಲಿ ಮಹತ್ವದ ಬೆಳಗಣಿಗೆಯಾಗಿದೆ. ಇದೀಗ ಬೆಂಗಳೂರು ಉಪನಗರ ರೈಲ್ವೆ ಯೋಜನೆಯ ಎರಡನೇ ಹಂತದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು. ಈ ಯೋಜನೆಯ ಎರಡನೇ ಹಂತವನ್ನು 146 ಕಿ.ಮೀ ವ್ಯಾಪ್ತಿಗೆ ವಿಸ್ತರಿಸುತ್ತಿದೆ. ಇದು ಬೆಂಗಳೂರು ವೃತ್ತಾಕಾರದ ರೈಲು ಜಾಲದ ಯೋಜನೆ ಈಗಾಗಲೇ ಪ್ರಗತಿಯಲ್ಲಿದೆ. ಈ ಯೋಜನೆಯನ್ನು 146 ಕಿ.ಮೀ. ವ್ಯಾಪ್ತಿಗೆ ವಿಸ್ತರಿಸುವ ಪ್ರಸ್ತಾವಿತ ಯೋಜನೆಯನ್ನು ರೂಪಿಸಲಾಗಿದೆ. ಬೆಂಗಳೂರು ಉಪ ನಗರ ರೈಲು ಯೋಜನೆ ದಶಕಗಳ ಕನಸಾಗಿದೆ. ಬೆಂಗಳೂರಿಗೆ ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳಲ್ಲಿರುವ ಸಾವಿರಾರು ಜನ ಬೆಂಗಳೂರಿಗೆ ಕೆಲಸ ಸೇರಿದಂತೆ ವಿವಿಧ ಕಾರಣಗಳಿಗೆ ಬರುತ್ತಾರೆ. ಉಪ ನಗರ ರೈಲು ಯೋಜನೆ ಹಲವು ಕಾರಣಕ್ಕೆ ಮಹತ್ವವನ್ನು ಪಡೆದುಕೊಂಡಿದೆ.
ಇದೀಗ ಉದ್ದೇಶಿತ ಯೋಜನೆಯಲ್ಲಿ ದೇವನಹಳ್ಳಿಯಿಂದ ಚಿಕ್ಕಬಳ್ಳಾಪುರ (18 ಕಿ.ಮೀ), ಚಿಕ್ಕಬಾಣಾವರದಿಂದ ಕುಣಿಗಲ್ (50 ಕಿ.ಮೀ), ಚಿಕ್ಕಬಾಣಾವರದಿಂದ ದಾಬಸ್ ಪೇಟೆ (36 ಕಿ.ಮೀ), ಕೆಂಗೇರಿಯಿಂದ ಹೆಜ್ಜಾಲ (11 ಕಿ.ಮೀ), ಹೀಲಲಿಗೆಯಿಂದ ಆನೇಕಲ್ ರಸ್ತೆ (11 ಕಿ.ಮೀ) ಹಾಗೂ ರಾಜನುಕುಂಟೆಯಿಂದ ಒಡೇರಹಳ್ಳಿ (20 ಕಿ.ಮೀ) ವ್ಯಾಪ್ತಿಗೆ ಸೇರಿವೆ.

2024 ರ ಕೊನೆಯಲ್ಲಿ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ, ಮೂಲಸೌಕರ್ಯ ಸಚಿವ ಎಂ.ಬಿ. ಪಾಟೀಲ್ ಮತ್ತು ರೈಲ್ವೆ ಮತ್ತು ಕೆ-ರೈಡ್ನ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಉಪನಗರ ರೈಲು ವಿಸ್ತರಣೆಯನ್ನು ಸೀಮಿತಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು. ತರುವಾಯ, ಕೆ-ರೈಡ್, ಪ್ರಸ್ತಾವಿತ ವೃತ್ತಾಕಾರದ ರೈಲು ಜಾಲದೊಂದಿಗೆ ಉಪನಗರ ರೈಲು ವಿಸ್ತರಣೆಯನ್ನು ಸಂಯೋಜಿಸುವ ಕಾರ್ಯಸಾಧ್ಯತಾ ಅಧ್ಯಯನವನ್ನು ನಡೆಸಲು ಕೇಂದ್ರ ರೈಲ್ವೆ ಸಚಿವಾಲಯದಿಂದ ಅನುಮೋದನೆಯನ್ನು ಕೋರಿತು.
ಮಹತ್ವದ ಯೋಜನೆಗೆ ಕಡಿವಾಣ: ಉದ್ದೇಶಿತ ಯೋಜನೆಯನ್ನು 452 ಕಿ.ಮೀ ಉಪ ನಗರ ರೈಲು ವ್ಯಾಪ್ತಿಗೆ ವಿಸ್ತರಿಸಬೇಕು ಎನ್ನುವ ಪ್ರಸ್ತಾವನೆ ಇತ್ತು. ಆದರೆ, ಈ ಪ್ರಸ್ತಾವಿತ ಯೋಜನೆಯನ್ನು ನೈರುತ್ಯ ರೈಲ್ವೆ ಪ್ರಾರಂಭದಲ್ಲೇ ತಿರಸ್ಕರಿಸಿತ್ತು. ಮೊದಲು ಇದನ್ನು ಬೆಂಗಳೂರು ಹಾಗೂ ದೇವನಹಳ್ಳಿ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಮೈಸೂರು ಹಾಗೂ ಹೊಸೂರು ಸೇರಿದಂತೆ ವಿವಿಧ ಭಾಗಗಳೊಂದಿಗೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಕೆ-ರೈಡ್ ಹೆಚ್ಚು ವಿಸ್ತಾರವಾದ 452 ಕಿ.ಮೀ ಉಪನಗರ ರೈಲು ಜಾಲ ಯೋಜನೆಯ ಬಗ್ಗೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ, ಇದಕ್ಕೆ ಅನುಮೋದನೆ ಸಿಕ್ಕಿಲ್ಲ.
ಬೆಂಗಳೂರು ಸಂಚಾರ ದಟ್ಟಣೆ ಕಡಿವಾಣಕ್ಕೆ ಸಹಕಾರಿ: ಇನ್ನು ಈ ಯೋಜನೆಯಿಂದ ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಟ್ರಾಫಿಕ್ ಜಾಮ್ ಕಂಟ್ರೋಲ್ ಆಗಲಿದೆ ಎಂದು ನಿರೀಕ್ಷಿಸಲಾಗಿದೆ. ಬೆಂಗಳೂರಿಗೆ ಸುತ್ತಮುತ್ತಲಿನ ಜಿಲ್ಲೆಗಳಿಂದ ನಿತ್ಯವೂ ಸಾವಿರಾರು ಜನ ಬರುತ್ತಾರೆ. ಈ ರೀತಿ ಬೆಂಗಳೂರಿಗೆ ಬರುವವರು ರೈಲು ಸೇವೆಯನ್ನು ಬಳಸುವುದರಿಂದ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಇಳಿಕೆಯಾಗಲಿದೆ. ಇದು ಮಾತ್ರವಲ್ಲ ಈ ರೀತಿ ಬರುವ ಪ್ರಯಾಣಿಕರು ಆರಾಮಾಗಿ ರೈಲುಗಳ ಮೂಲಕ ಬೆಂಗಳೂರಿಗೆ ಬರುವುದಕ್ಕೆ ಅನುಕೂಲವಾಗಲಿದೆ.
ಸಂಚಾರ ಸಮಸ್ಯೆ ಇರುವುದರಿಂದ ಸುತ್ತಮುತ್ತಲಿನ ಜನ ಬೆಂಗಳೂರಿನಲ್ಲಿ ತಾತ್ಕಾಲಿಕವಾಗಿ ನೆಲೆಸಿರುವುದು ಸಹ ಇದೆ. ಇದೀಗ ಉದ್ದೇಶಿತ ಯೋಜನೆ ಅಭಿವೃದ್ಧಿ ಆಗುವುದರಿಂದ ಸುತ್ತಮುತ್ತಲಿನ ಹಳ್ಳಿಗಳಿಂದಲೇ ಅವರು ನಿತ್ಯ ಬೆಂಗಳೂರಿಗೆ ಬರುವುದಕ್ಕೂ ಅನುಕೂಲವಾಗಲಿದೆ ಎಂದು ಹೇಳಲಾಗುತ್ತಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications