ಬೆಂಗಳೂರು ಶಿಕ್ಷಕರ-ಪದವೀಧರರ ಕ್ಷೇತ್ರ ಚುನಾವಣೆ-2024, ಪ್ರಕ್ರಿಯೆ ಆರಂಭ
ಬೆಂಗಳೂರು, ಅಕ್ಟೋಬರ್ 27: ಬೆಂಗಳೂರು ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರ ಚುನಾವಣೆಗೆ ಸಂಬಂದಿಸಿದ ಕಾರ್ಯಚಟುವಟಿಕೆಗಳ ಕುರಿತು ವಿಶೇಷ ಆಯುಕ್ತರು(ಚುನಾವಣೆ) ಆರ್. ರಾಮಚಂದ್ರನ್ ರವರ ನೇತೃತ್ವದಲ್ಲಿ ವಿವಿಧ ರಾಜಕೀಯ ಪಕ್ಷದ ಪ್ರತಿನಿಧಿಗಳ ಜೊತೆ ಸಭೆ ನಡೆಯಿತು.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾ ಚುನಾವಣಾಧಿಕಾರಿಗಳು-ಬೆಂಗಳೂರು ರವರ ವ್ಯಾಪ್ತಿಯಲ್ಲಿ ಪದವೀಧರರ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ನೂತನವಾಗಿ(de-novo) ಮತದಾರ ಪಟ್ಟಿಯನ್ನು ಸಿದ್ದಪಡಿಸಲಾಗುವುದು.

ಭಾರತ ಚುನಾವಣಾ ಆಯೋಗದ ಉಲ್ಲೇಖಿತ ಪತ್ರದಲ್ಲಿನ ನಿರ್ದೇಶನದಂತೆ ಕರ್ನಾಟಕ ರಾಜ್ಯ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಇದೇ 2023 ನವೆಂಬರ್ 01 ಅನ್ವಯವಾಗುವಂತೆ ನೂತನವಾಗಿ(de-novo) ಮತದಾರ ಪಟ್ಟಿ ಸಿದ್ಧಪಡಿಸಲು ನಿರ್ದೇಶಿಸಲಾಗಿದೆ ಎಂದು ರಾಮಚಂದ್ರನ್ ತಿಳಿಸಿದರು.
ನವೆಂಬರ್ 23ರಂದು ಕರಡು ಮತದಾರರ ಪಟ್ಟಿ
ನವೆಂಬರ್ 6 ರಂದು ಮತದಾರ ಪಟ್ಟಿ ಕುರಿತ ಅರ್ಜಿ ನಮೂನೆ-18 ಅಥವಾ ನಮೂನೆ-19ನ್ನು ಸ್ವೀಕರಿಸಲು ಕೊನೆಯ ದಿನಾಂಕ ಆಗಿರಲಿದೆ. ನವೆಂಬರ್ 20 ರಂದು ಹಸ್ತಪ್ರತಿಗಳು ತಯಾರಿಕೆ ಮತ್ತು ಕರಡು ಮತದಾರರ ಪಟ್ಟಿ ಮುದ್ರಿಸಬೇಕು. ನವೆಂಬರ್ 23 ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು.
ನವೆಂಬರ್ 23ರಿಂದ ಡಿಸೆಂಬರ 09ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಡಿಸೆಂಬರ್ 25 ರಂದು ಮತದಾರರ ಪಟ್ಟಿ ಕುರಿತ ಹಕ್ಕು ಮತ್ತು ಆಕ್ಷೇಪಣೆ ವಿಲೇವಾರಿ ಮಾಡಲಾಗುವುದು. ಡಿಸೆಂಬರ್ 30ರಂದು ಅಂತಿಮ ಮತದಾರರ ಪಟ್ಟಿ ಬಿಡುಗಡೆಮಾಡಲಗುವುದು ಎಂದು ತಿಳಿಸಿದರು.

ಶಿಕ್ಷಕರ-ಪದವೀದರರ ಕ್ಷೇತ್ರ ಚುನಾವಣೆ-ಸಭೆ
ಮುಂಬರುವ ಕರ್ನಾಟಕ ರಾಜ್ಯ ವಿಧಾನ ಪರಿಷತ್ತಿನ (ಬೆಂಗಳೂರು ಶಿಕ್ಷಕರ ಮತ್ತು ಪದವೀದರರ ಕ್ಷೇತ್ರ) ಚುನಾವಣೆ-2024ರ ಸಂಬಂಧ ಸಹಾಯಕ ಮತದಾರರಪಟ್ಟಿ ನೊಂದಣಾಧಿಕಾರಿಗಳು ಹಾಗೂ ದಕಷಿಣ ವಿಭಾಗದ ಅಪರ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ವಲಯ ಜಂಟಿ ಆಯುಕ್ತರು ಮತ್ತು ನೋಡಲ್ ಅಧಿಕಾರಿಗಳು(ದಕ್ಷಿಣ) ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಪದವೀದರರ ಕ್ಷೇತ್ರಕ್ಕೆ ಸಂಬಂಧಿಸಿದ ನಮೂನೆ 18ರ ಅರ್ಜಿಗಳನ್ನು ಸ್ವೀಕರಿಸಲು ಕಾರ್ಮಿಕ ಇಲಾಖೆಯ ಅಧಿಕಾರಿಗಳೊಂದಿಗೆ ವಿಧಾನಸಭಾವಾರು ಹಾಜರಿದ್ದ ಸಹಾಯಕ ಮತದಾರರಪಟ್ಟಿ ನೊಂದಣಾಧಿಕಾರಿಗಳು ರವರ ಸಮನ್ವಯದೊಂದಿಗೆ ತಮ್ಮ ವ್ಯಾಪ್ತಿಗೆ ಒಳಪಡುವ ಪದವೀದರರ ಮತದಾರರ ನೋಂದಣಿ ಕುರಿತು ಜಾಗೃತಿ ಮೂಡಿಸಿ ನಮೂನೆ-18ರ ಅರ್ಜಿಗಳನ್ನು ಸ್ಥಳೀಯ ನಿವಾಸಿ ಪದವೀದರರಿಗೆ ನೀಡಿ ಭರ್ತಿ ಮಾಡಿದ ಅರ್ಜಿಗಳನ್ನು ವಿಧಾನಸಭಾವಾರು ಸಹಾಯಕ ಮತದಾರರಪಟ್ಟಿ ನೊಂದಣಾಧಿಕಾರಿಗಳು ರವರ ಕಛೇರಿಗೆ ನಿಗಧಿತ ಅವಧಿಯೊಳಗೆ (ನವೆಂಬರ್ 6) ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.
ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿ
ಕ್ಷೇತ್ರ ಶಿಕ್ಷಣಾಧಿಕಾರಿಗಳು S-1, S-2 & S-3 ಇವರುಗಳು ವಿಧಾನಸಭಾವಾರು ಹಾಜರಿದ್ದ ಸಹಾಯಕ ಮತದಾರರಪಟ್ಟಿ ನೊಂದಣಾಧಿಕಾರಿಗಳು ರವರ ಸಮನ್ವಯದೊಂದಿಗೆ ತಮ್ಮ ವ್ಯಾಪ್ತಿಗೆ ಒಳಪಡುವ ಪದವೀದರರ ಮತದಾರರ ನೊಂದಣಿ ಕುರಿತು ಜಾಗೃತಿ ಮೂಡಿಸಲಾಗುವುದು. ಈ ಸಂಬಂಧ ನಮೂನೆ 18 ಮತ್ತು ನಮೂನೆ 19ರ ಅರ್ಜಿಗಳನ್ನು ತಮ್ಮ ವ್ಯಾಪ್ತಿಗೆ ಒಳಪಡುವ ಶಿಕ್ಷಣ ಸಂಸ್ಥೆಗಳಿಗೆ ನೀಡಿ ಭರ್ತಿ ಮಾಡಿದ ಅರ್ಜಿಗಳನ್ನು ಆಯಾ ವಿಧಾನಸಭಾ ಸಹಾಯಕ ಮತದಾರರಪಟ್ಟಿ ನೊಂದಣಾಧಿಕಾರಿಗಳು ರವರ ಕಛೇರಿಗೆ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.
ಸಭೆಯಲ್ಲಿ ಪಶ್ಚಿಮ ವಲಯದ ಜಂಟಿ ಆಯುಕ್ತರಾದ ಯೋಗೇಶ್.ಟಿ, 7 ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ವಿದ್ಯಾಸಂಸ್ಥೆಗಳು ಹಾಗೂ ಬಿ.ಬಿ.ಎಂ.ಪಿ ದಕ್ಷಿಣ ವ್ಯಾಪ್ತಿಯ ಎಲ್ಲಾ ಸಹಾಯಕ ಮತದಾರರ ನೊಂದಣಾಧಿಕಾರಿಗಳು ಹಾಜರಿದ್ದರು.
-
SSLC ಪರೀಕ್ಷೆ 2026: ಪರೀಕ್ಷಾ ಹಾಲ್ಗೆ ಹೋಗುವ ಮುನ್ನ ನಿಮ್ಮ ಕೈಯಲ್ಲಿ ಈ ವಸ್ತುಗಳಿವೆಯಾ? ಒಮ್ಮೆ ಚೆಕ್ ಮಾಡಿಕೊಳ್ಳಿ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
CBSE ಉತ್ತರಪತ್ರಿಕೆ ಮೌಲ್ಯಮಾಪನ: ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಳ್ಳದಂತೆ ಶಿಕ್ಷಕರಿಗೆ ಸಿಬಿಎಸ್ಇ ಎಚ್ಚರಿಕೆ -
CBSE 12ನೇ ತರಗತಿಯ ಹಿಂದಿ ಪರೀಕ್ಷೆ: ಪ್ರಶ್ನೆಪತ್ರಿಕೆ ಸುಲಭ, ನಿಗದಿತ ಸಮಯದಲ್ಲೇ ಪರೀಕ್ಷೆ ಬರೆದು ನಿರಾಳರಾದ ವಿದ್ಯಾರ್ಥಿಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026: ಕೊನೆಯ ಕ್ಷಣದಲ್ಲಿ ಒತ್ತಡವಿಲ್ಲದೆ ರಿವಿಷನ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
ಇನ್ಮುಂದೆ ಗ್ರಾಮೀಣ ವಿದ್ಯಾರ್ಥಿಗಳಿಗೆ ಸರ್ಕಾರದಿಂದಲೇ ಸಿಗಲಿದೆ ಉಚಿತ 'NEET' ತರಬೇತಿ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ












Click it and Unblock the Notifications