BTS 2022: 9 ಒಪ್ಪಂದಕ್ಕೆ ಸಾಕ್ಷಿಯಾಗಲಿರುವ 'ಬಿಟಿಎಸ್- 22' ಸಮಾವೇಶಕ್ಕೆ ಪ್ರಧಾನಿ ಮೋದಿ ಚಾಲನೆ
ಬೆಂಗಳೂರು, ನವೆಂಬರ್ 15: ವಿಶ್ವದಾದ್ಯಂತ ತಂತ್ರಜ್ಞಾನದ ಬೆಳವಣಿಗೆ ಕುರಿತು ಕಾಲ ಕಾಲಕ್ಕೆ ಸಾದರಪಡಿಸುವ 'ಬೆಂಗಳೂರು ತಂತ್ರಜ್ಞಾನ ಶೃಂಗದ ರಜತೋತ್ಸವ' ಸಮಾವೇಶ (ಬಿಟಿಎಸ್- 22) ನವೆಂಬರ್ 16ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಆನ್ಲೈನ್ ಮೂಲಕ ಬಿಟಿಎಸ್ಗೆ ಚಾಲನೆ ನೀಡಲಿದ್ದಾರೆ ಎಂದು ಐಟಿ ಬಿಟಿ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ್ ತಿಳಿಸಿದರು.
ಏಷ್ಯಾ ಖಂಡದಲ್ಲೇ ಮಹತ್ವದ ತಂತ್ರಜ್ಞಾನ ಸಮಾವೇಶವೊಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯುತ್ತಿದೆ. ಈ ಸಂಬಂಧ ಮಂಗಳವಾರ ಅಶ್ವಥ್ ನಾರಾಯಣ್ ಸಿದ್ಧತೆ ಪರಿಶೀಲಿಸಿದೆ. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಒಟ್ಟು 3 ದಿನಗಳ ಕಾಲ ಭೌತಿಕ ಸ್ವರೂಪದಲ್ಲಿ ನಡೆಯಲಿರುವ ಸಮಾವೇಶವು ಕನಿಷ್ಠ 9 ಒಡಂಬಡಿಕೆಗಳಿಗೆ (ಒಪ್ಪಂದ) ಹಾಗೂ 20ಕ್ಕೂ ಹೆಚ್ಚು ಉತ್ಪನ್ನಗಳ ಬಿಡುಗಡೆಗೆ ಸಾಕ್ಷಿಯಾಗಲಿದೆ. ಇದೇ ವೇಳೆ ಬೆಳ್ಳಿಹಬ್ಬದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಮರಣಿಕೆ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿಸಿದರು.
ಸಮಾವೇಶದಲ್ಲಿ 575 ಹೆಚ್ಚು ಪ್ರದರ್ಶಕರು ಭಾಗವಹಿಸಲಿದ್ದಾರೆ. ದೇಶದ 16 ವಿವಿಧ ರಾಜ್ಯಗಳ ಸ್ಟಾರ್ಟ್ಅಪ್ಗಳು ಪಾಲ್ಗೊಳ್ಳುತ್ತಿವೆ. 350ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಪರಿಣತರು ತಂತ್ರಜ್ಞಾನಗಳ ಕುರಿತು ಬೆಳಕು ಚೆಲ್ಲಲಿದ್ದಾರೆ. 5,000ಕ್ಕೂ ಹೆಚ್ಚು ಉದ್ಯಮಿಗಳು ಆಗಮಿಸಲಿದ್ದಾರೆ.

ಬಿಟಿಎಸ್ 22ನಲ್ಲಿ ಏನಿರಲಿದೆ?
ಸಮಾವೇಶದಲ್ಲಿ ಐಓಟಿ, ಡೀಪ್ ಟೆಕ್, ಬಯೋಟೆಕ್, ಸ್ಟಾರ್ಟ್ಅಪ್, ಜಿಐಎ-1 ಹಾಗೂ ಜಿಐಎ-2 ಎಂಬ ಐದು ವಿಭಾಗಗಳಡಿ ಅಂದಾಜು 75 ಗೋಷ್ಠಿಗಳು ನಡೆಯಲಿವೆ. ಕೃತಕ ಬುದ್ಧಿಮತ್ತೆ, ಬಿಗ್ ಡೇಟಾ, ಸೆಮಿಕಂಡಕ್ಟರ್, ಮಷೀನ್ ಲರ್ನಿಂಗ್, 5ಜಿ, ರೋಬೋಟಿಕ್ಸ್, ಫಿನ್ ಟೆಕ್, ಜೀನ್ ಎಡಿಟಿಂಗ್, ಮೆಡಿ ಟೆಕ್, ಸ್ಪೇಸ್ ಟೆಕ್, ಜೈವಿಕ ಇಂಧನ ಸುಸ್ಥಿರತೆ, ಇ- ಸಂಚಾರ ಹೀಗೆ ವಿವಿಧ ಪ್ರವರ್ಧಮಾನಕ್ಕೆ ಬರುತ್ತಿರುವ ತಾಂತ್ರಿಕ ಬೆಳವಣಿಗೆಗಳ ಬಗ್ಗೆ ಕಾರ್ಯಕ್ರಮ ಜರುಗಲಿವೆ.
ಜಿಐಎ ವಿಭಾಗದಲ್ಲಿ ಜಪಾನ್, ಫಿನ್ಲೆಂಡ್, ನೆದರ್ಲ್ಯಾಂಡ್, ಡೆನ್ಮಾರ್ಕ್, ಸ್ವೀಡನ್, ಸ್ವಿಜರ್ಲ್ಯಾಂಡ್, ಜರ್ಮನಿ, ಆಸ್ಟ್ರೇಲಿಯಾ, ಅಮೇರಿಕಾ, ಲಿತುವೇನಿಯ, ಕೆನಡಾ ಸೇರಿ 15ಕ್ಕೂ ಹೆಚ್ಚು ದೇಶಗಳ ತಾಂತ್ರಿಕತೆ ವಿಶಿಷ್ಟಗಳು ಅನಾವರಣವಾಗಲಿದೆ. ಭಾರತ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಪ್ರೊ ಅಜಯ್ ಕೆ. ಸೂದ್ ಅವರು ಮೊದಲ ದಿನ ಸಂವಾದಗೋಷ್ಠಿ ನಡೆಸಲಿದ್ದಾರೆ ಎಂದು ಹೇಳಿದರು.
ಮಧ್ಯಾಹ್ನ 2ರಿಂದ ಸಂಜೆ 6 ಗಂಟೆವರೆಗೆ ಸಮಾವೇಶಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆ. ಜೊತೆಗೆ www bengalurutech.com ವೈಬ್ಸೈಟ್ ಮೂಲಕವು ವೀಕ್ಷಿಸಬಹುದಾಗಿದೆ. ಈ ವೇಳೆ ಐಟಿ ಬಿಟಿ ಇಲಾಖೆಯ ನಿರ್ದೇಶಕಿ ಮೀನಾ ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.
-
Karnataka Tax: ಕರ್ನಾಟಕದಿಂದ ಮತ್ತೆ ನಮ್ಮ ತೆರಿಗೆ - ನಮ್ಮ ಹಕ್ಕು ಅಭಿಯಾನದ ಸುಳಿವು ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ











Click it and Unblock the Notifications