BTS 2022: 9 ಒಪ್ಪಂದಕ್ಕೆ ಸಾಕ್ಷಿಯಾಗಲಿರುವ 'ಬಿಟಿಎಸ್- 22' ಸಮಾವೇಶಕ್ಕೆ ಪ್ರಧಾನಿ ಮೋದಿ ಚಾಲನೆ
ಬೆಂಗಳೂರು, ನವೆಂಬರ್ 15: ವಿಶ್ವದಾದ್ಯಂತ ತಂತ್ರಜ್ಞಾನದ ಬೆಳವಣಿಗೆ ಕುರಿತು ಕಾಲ ಕಾಲಕ್ಕೆ ಸಾದರಪಡಿಸುವ 'ಬೆಂಗಳೂರು ತಂತ್ರಜ್ಞಾನ ಶೃಂಗದ ರಜತೋತ್ಸವ' ಸಮಾವೇಶ (ಬಿಟಿಎಸ್- 22) ನವೆಂಬರ್ 16ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಆನ್ಲೈನ್ ಮೂಲಕ ಬಿಟಿಎಸ್ಗೆ ಚಾಲನೆ ನೀಡಲಿದ್ದಾರೆ ಎಂದು ಐಟಿ ಬಿಟಿ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ್ ತಿಳಿಸಿದರು.
ಏಷ್ಯಾ ಖಂಡದಲ್ಲೇ ಮಹತ್ವದ ತಂತ್ರಜ್ಞಾನ ಸಮಾವೇಶವೊಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯುತ್ತಿದೆ. ಈ ಸಂಬಂಧ ಮಂಗಳವಾರ ಅಶ್ವಥ್ ನಾರಾಯಣ್ ಸಿದ್ಧತೆ ಪರಿಶೀಲಿಸಿದೆ. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಒಟ್ಟು 3 ದಿನಗಳ ಕಾಲ ಭೌತಿಕ ಸ್ವರೂಪದಲ್ಲಿ ನಡೆಯಲಿರುವ ಸಮಾವೇಶವು ಕನಿಷ್ಠ 9 ಒಡಂಬಡಿಕೆಗಳಿಗೆ (ಒಪ್ಪಂದ) ಹಾಗೂ 20ಕ್ಕೂ ಹೆಚ್ಚು ಉತ್ಪನ್ನಗಳ ಬಿಡುಗಡೆಗೆ ಸಾಕ್ಷಿಯಾಗಲಿದೆ. ಇದೇ ವೇಳೆ ಬೆಳ್ಳಿಹಬ್ಬದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಮರಣಿಕೆ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿಸಿದರು.
ಸಮಾವೇಶದಲ್ಲಿ 575 ಹೆಚ್ಚು ಪ್ರದರ್ಶಕರು ಭಾಗವಹಿಸಲಿದ್ದಾರೆ. ದೇಶದ 16 ವಿವಿಧ ರಾಜ್ಯಗಳ ಸ್ಟಾರ್ಟ್ಅಪ್ಗಳು ಪಾಲ್ಗೊಳ್ಳುತ್ತಿವೆ. 350ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಪರಿಣತರು ತಂತ್ರಜ್ಞಾನಗಳ ಕುರಿತು ಬೆಳಕು ಚೆಲ್ಲಲಿದ್ದಾರೆ. 5,000ಕ್ಕೂ ಹೆಚ್ಚು ಉದ್ಯಮಿಗಳು ಆಗಮಿಸಲಿದ್ದಾರೆ.

ಬಿಟಿಎಸ್ 22ನಲ್ಲಿ ಏನಿರಲಿದೆ?
ಸಮಾವೇಶದಲ್ಲಿ ಐಓಟಿ, ಡೀಪ್ ಟೆಕ್, ಬಯೋಟೆಕ್, ಸ್ಟಾರ್ಟ್ಅಪ್, ಜಿಐಎ-1 ಹಾಗೂ ಜಿಐಎ-2 ಎಂಬ ಐದು ವಿಭಾಗಗಳಡಿ ಅಂದಾಜು 75 ಗೋಷ್ಠಿಗಳು ನಡೆಯಲಿವೆ. ಕೃತಕ ಬುದ್ಧಿಮತ್ತೆ, ಬಿಗ್ ಡೇಟಾ, ಸೆಮಿಕಂಡಕ್ಟರ್, ಮಷೀನ್ ಲರ್ನಿಂಗ್, 5ಜಿ, ರೋಬೋಟಿಕ್ಸ್, ಫಿನ್ ಟೆಕ್, ಜೀನ್ ಎಡಿಟಿಂಗ್, ಮೆಡಿ ಟೆಕ್, ಸ್ಪೇಸ್ ಟೆಕ್, ಜೈವಿಕ ಇಂಧನ ಸುಸ್ಥಿರತೆ, ಇ- ಸಂಚಾರ ಹೀಗೆ ವಿವಿಧ ಪ್ರವರ್ಧಮಾನಕ್ಕೆ ಬರುತ್ತಿರುವ ತಾಂತ್ರಿಕ ಬೆಳವಣಿಗೆಗಳ ಬಗ್ಗೆ ಕಾರ್ಯಕ್ರಮ ಜರುಗಲಿವೆ.
ಜಿಐಎ ವಿಭಾಗದಲ್ಲಿ ಜಪಾನ್, ಫಿನ್ಲೆಂಡ್, ನೆದರ್ಲ್ಯಾಂಡ್, ಡೆನ್ಮಾರ್ಕ್, ಸ್ವೀಡನ್, ಸ್ವಿಜರ್ಲ್ಯಾಂಡ್, ಜರ್ಮನಿ, ಆಸ್ಟ್ರೇಲಿಯಾ, ಅಮೇರಿಕಾ, ಲಿತುವೇನಿಯ, ಕೆನಡಾ ಸೇರಿ 15ಕ್ಕೂ ಹೆಚ್ಚು ದೇಶಗಳ ತಾಂತ್ರಿಕತೆ ವಿಶಿಷ್ಟಗಳು ಅನಾವರಣವಾಗಲಿದೆ. ಭಾರತ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಪ್ರೊ ಅಜಯ್ ಕೆ. ಸೂದ್ ಅವರು ಮೊದಲ ದಿನ ಸಂವಾದಗೋಷ್ಠಿ ನಡೆಸಲಿದ್ದಾರೆ ಎಂದು ಹೇಳಿದರು.
ಮಧ್ಯಾಹ್ನ 2ರಿಂದ ಸಂಜೆ 6 ಗಂಟೆವರೆಗೆ ಸಮಾವೇಶಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆ. ಜೊತೆಗೆ www bengalurutech.com ವೈಬ್ಸೈಟ್ ಮೂಲಕವು ವೀಕ್ಷಿಸಬಹುದಾಗಿದೆ. ಈ ವೇಳೆ ಐಟಿ ಬಿಟಿ ಇಲಾಖೆಯ ನಿರ್ದೇಶಕಿ ಮೀನಾ ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.
-
PM Kisan 22ನೇ ಕಂತಿನ ಹಣ ಬಿಡುಗಡೆಗೆ ದಿನಾಂಕ ಫಿಕ್ಸ್, ಇಲ್ಲಿದೆ ಸಂಪೂರ್ಣ ಮಾಹಿತಿ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ












Click it and Unblock the Notifications