ಬೆಂಗಳೂರಲ್ಲಿ ಮೊದಲ ತಲಾಖ್ ಕೇಸ್, ಟೆಕ್ಕಿ ಪತಿ ವಿರುದ್ಧ ಎಫ್ಐಆರ್
ಬೆಂಗಳೂರು, ಸೆಪ್ಟೆಂಬರ್ 18: ದಿಢೀರ್ ತ್ರಿವಳಿ ತಲಾಖ್ ನಿಷೇಧವಾದ ಬಳಿಕ ಬೆಂಗಳೂರಲ್ಲಿ ಮೊದಲ ತಲಾಖ್ ಪ್ರಕರಣ ದಾಖಲಾಗಿದೆ.
ಗುರುಪ್ಪನಪಾಳ್ಯ ನಿವಾಸಿ ಸಾಫ್ಟ್ವೇರ್ ಎಂಜಿನಿಯರ್ ಸಮೀರುಲ್ಲಾ ರೆಹಮತ್(38) ತನ್ನ ಪತ್ನಿಗೆ ತಲಾಖ್ ನೀಡಿದ್ದು, ಈ ಸಂಬಂಧ ಪತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪತ್ನಿ ಸುದ್ದಗುಂಟೆ ಪಾಳ್ಯ ಪೊಲೀಸರಿಗೆ ದೂರು ಕೊಟ್ಟಿದ್ದಾರೆ.
ಸಮೀರುಲ್ಲಾ ವಿಪ್ರೋ ಸಂಸ್ಥೆಯ ಉದ್ಯೋಗಿಯಾಗಿದ್ದು,ಪತ್ನಿ ದುಬೈನಲ್ಲಿ ಎಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿದ್ದಾರೆ. 2010ರಲ್ಲಿ ಆಕೆಯ ಪಾಲಕರಿಂದ 7.5 ಲಕ್ಷ ರೂ ಬೆಲೆಯ ಐ10 ಕಾರು, 10 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವರದಕ್ಷಿಣೆಯಾಗಿ ಪಡೆದು ಮದುವೆಯಾಗಿದ್ದ.

ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ವರ್ಷದ ಹಿಂದೆ ವರದಕ್ಷಿಣೆ ವಿಚಾರಣೆ ಪತ್ನಿ ಜೊತೆ ಗಲಾಟೆಯಾಗಿತ್ತು. ಆಕೆಯ ಪಾಲಕರು , ಸಂಬಂಧಿಕರು ಮತ್ತು ಸಮುದಾಯದ ಹಿರಿಯರು ಸೇರಿ ಬುದ್ಧಿಮಾತು ಹೇಳಿದ್ದರು. ಜೊತೆಗೆ 7 ಲಕ್ಷ ಕೊಟ್ಟು ಸರಿಪಡಿಸಿದ್ದರು.
ಪತ್ನಿಗೆ ಬಿಟಿಎಂ ಲೇಔಟ್ನಲ್ಲಿ ಪ್ರತ್ಯೇಕ ಮನೆ ಮಾಡಿಕೊಟ್ಟಿದ್ದ, ಆಕೆಯ ಮನೆಗೆ ಹೋಗುವುದನ್ನು ಬಿಟ್ಟಿದ್ದ, ಒಂದು ದಿನ ಏಕಾಏಕಿ ಬಂದು ಮೂರು ಬಾರಿ ತಲಾಖ್ ಎಂದು ಹೇಳಿ ಹೋಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ದಿಢೀರ್ ತ್ರಿವಳಿ ತಲಾಖ್ ನಿಷೇಧದ ಬಳಿಕ ಬೆಂಗಳೂರಲ್ಲಿ ಮೊದಲ ಹಾಗೂ ರಾಜ್ಯದಲ್ಲಿ ಎರಡನೇ ತಲಾಖ್ ಪ್ರಕರಣವಾಗಿದೆ.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain












Click it and Unblock the Notifications