ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಲ್ಲಿ ಮೊದಲ ತಲಾಖ್ ಕೇಸ್, ಟೆಕ್ಕಿ ಪತಿ ವಿರುದ್ಧ ಎಫ್‌ಐಆರ್

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 18: ದಿಢೀರ್ ತ್ರಿವಳಿ ತಲಾಖ್ ನಿಷೇಧವಾದ ಬಳಿಕ ಬೆಂಗಳೂರಲ್ಲಿ ಮೊದಲ ತಲಾಖ್ ಪ್ರಕರಣ ದಾಖಲಾಗಿದೆ.

ಗುರುಪ್ಪನಪಾಳ್ಯ ನಿವಾಸಿ ಸಾಫ್ಟ್‌ವೇರ್ ಎಂಜಿನಿಯರ್ ಸಮೀರುಲ್ಲಾ ರೆಹಮತ್(38) ತನ್ನ ಪತ್ನಿಗೆ ತಲಾಖ್ ನೀಡಿದ್ದು, ಈ ಸಂಬಂಧ ಪತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪತ್ನಿ ಸುದ್ದಗುಂಟೆ ಪಾಳ್ಯ ಪೊಲೀಸರಿಗೆ ದೂರು ಕೊಟ್ಟಿದ್ದಾರೆ.

ತ್ರಿವಳಿ ತಲಾಕ್ ಕಾಯ್ದೆ ಜಾರಿ: ವಾಟ್ಸಾಪ್‌ನಲ್ಲಿ ತಲಾಕ್ ನೀಡಿದವನ ಮೇಲೆ ಕೇಸ್ತ್ರಿವಳಿ ತಲಾಕ್ ಕಾಯ್ದೆ ಜಾರಿ: ವಾಟ್ಸಾಪ್‌ನಲ್ಲಿ ತಲಾಕ್ ನೀಡಿದವನ ಮೇಲೆ ಕೇಸ್

ಸಮೀರುಲ್ಲಾ ವಿಪ್ರೋ ಸಂಸ್ಥೆಯ ಉದ್ಯೋಗಿಯಾಗಿದ್ದು,ಪತ್ನಿ ದುಬೈನಲ್ಲಿ ಎಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿದ್ದಾರೆ. 2010ರಲ್ಲಿ ಆಕೆಯ ಪಾಲಕರಿಂದ 7.5 ಲಕ್ಷ ರೂ ಬೆಲೆಯ ಐ10 ಕಾರು, 10 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವರದಕ್ಷಿಣೆಯಾಗಿ ಪಡೆದು ಮದುವೆಯಾಗಿದ್ದ.

Bengaluru Techie Gave Triple Talaq To Wife

ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ವರ್ಷದ ಹಿಂದೆ ವರದಕ್ಷಿಣೆ ವಿಚಾರಣೆ ಪತ್ನಿ ಜೊತೆ ಗಲಾಟೆಯಾಗಿತ್ತು. ಆಕೆಯ ಪಾಲಕರು , ಸಂಬಂಧಿಕರು ಮತ್ತು ಸಮುದಾಯದ ಹಿರಿಯರು ಸೇರಿ ಬುದ್ಧಿಮಾತು ಹೇಳಿದ್ದರು. ಜೊತೆಗೆ 7 ಲಕ್ಷ ಕೊಟ್ಟು ಸರಿಪಡಿಸಿದ್ದರು.

ಇಂದು ಸಂಸತ್ತಿನಲ್ಲಿ ತ್ರಿವಳಿ ತಲಾಖ್ ವಿಧೇಯಕ ಮಂಡನೆಇಂದು ಸಂಸತ್ತಿನಲ್ಲಿ ತ್ರಿವಳಿ ತಲಾಖ್ ವಿಧೇಯಕ ಮಂಡನೆ

ಪತ್ನಿಗೆ ಬಿಟಿಎಂ ಲೇಔಟ್‌ನಲ್ಲಿ ಪ್ರತ್ಯೇಕ ಮನೆ ಮಾಡಿಕೊಟ್ಟಿದ್ದ, ಆಕೆಯ ಮನೆಗೆ ಹೋಗುವುದನ್ನು ಬಿಟ್ಟಿದ್ದ, ಒಂದು ದಿನ ಏಕಾಏಕಿ ಬಂದು ಮೂರು ಬಾರಿ ತಲಾಖ್ ಎಂದು ಹೇಳಿ ಹೋಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ದಿಢೀರ್ ತ್ರಿವಳಿ ತಲಾಖ್ ನಿಷೇಧದ ಬಳಿಕ ಬೆಂಗಳೂರಲ್ಲಿ ಮೊದಲ ಹಾಗೂ ರಾಜ್ಯದಲ್ಲಿ ಎರಡನೇ ತಲಾಖ್ ಪ್ರಕರಣವಾಗಿದೆ.

English summary
The first talaq case was registered in Bengaluru after the fast-track triple talaq was banned.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X