ನವೆಂಬರ್ ಕೊನೆಯ ವಾರದಲ್ಲಿ 6 ಬೋಗಿಗಳ ಮೂರನೇ ರೈಲು ಸಂಚಾರ
ಬೆಂಗಳೂರು, ನವೆಂಬರ್ 17: ನವೆಂಬರ್ ಅಂತ್ಯದಲ್ಲಿ ಆರು ಬೋಗಿಗಳ ಮೂರನೇ ರೈಲು ಸಂಚರಿಸಲಿದೆ, ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ನಗರದಲ್ಲಿ ನಮ್ಮ ಮೆಟ್ರೋ ಆರಂಭಿಸಲಾಯಿತು.
ಈಗ ಮೆಟ್ರೋದಲ್ಲಿ ಜನ ಸಂದಣಿ ಕಡಿಮೆ ಮಾಡುವ ನಿಟ್ಟಿನಲ್ಲಿ ಆರು ಬೋಗಿಗಳ ಮೆಟ್ರೋವನ್ನು ಆರಂಭಿಸಲಾಗಿದೆ. ಈಗಾಗೇ ಎರಡು ಬೋಗಿಗಳು ತನ್ನ ಕಾರ್ಯ ಆರಂಭಿಸಿದ್ದು ಈ ತಿಂಗಳ ಅಂತ್ಯದಲ್ಲಿ ಇನ್ನೊಂದು ಆರು ಬೋಗಿಗಳ ಮೆಟ್ರೋ ಸಂಚಾರ ಆರಂಭಿಸಲಿದೆ.
1421 ಕೋಟಿ ರೂ ವೆಚ್ಚದಲ್ಲಿ ಭಾರತ್ ಅರ್ತ್ ಮೂವರ್ಸ್ ಲಿಮಿಟೆಡ್ ನಿಂದ 150 ಬೋಗಿಗಳನ್ನು ಹಸ್ತಾಂತರವಾಗಿ, ಕಾರ್ಯಾಚರಿಸುತ್ತಿದ್ದ ಮೂರು ಬೋಗಿಗಳ ಎರಡು ರೈಲಿಗೆ ಜೋಡಿಸಲಾಗಿದೆ. ಈ ಎರಡೂ ರೈಲುಗಳುರೈಲುಗಳು ಬೈಯಪ್ಪನಹಳ್ಳಿ-ಮೈಸೂರು ರಸ್ತೆಯ ನೇರಳೆ ಮಾರ್ಗದಲ್ಲಿ ಸಂಚಾರ ನಡೆಸುತ್ತಿದೆ.

ರೈಲು ಒಂದೆಡೆಯಿಂದ ಮತ್ತೊಂದೆಡೆ ಸಂಚರಿಸಲು 40 ನಿಮಿಷ ಬೇಕು
ಒಂದು ರೈಲು ಮತ್ತೊಂದೆಡೆಗೆ ಸಂಚರಿಸಲು 40 ನಿಮಿಷ ಬೇಕಾಗುತ್ತದೆ. ಇದರಿಂದ ಸ್ವಲ್ಪ ಮಟ್ಟಿಗೆ ದಟ್ಟಣೆ ಕಡಿಮೆ ಮಾಡಲು ಸಾಧ್ಯವಾಗಿದೆ.

ಪ್ರತಿ ತಿಂಗಳು ಆರು ಬೋಗಿಗಳ ಒಂದು ರೈಲು
ಪ್ರತಿ ತಿಂಗಳು ಆರು ಬೋಗಿಗಳ ಒಂದು ಅಥವಾ ಎರಡು ರೈಲುಗಳನ್ನು ಸಂಚಾರಕ್ಕೆ ಮುಕ್ತಗೊಳಿಸುವ ಪ್ರಯತ್ನ ನಡೆಯುತ್ತಿದೆ. ಕಳೆ ತಿಂಗಳು ಆರು ಬೋಗಿಗಳ ಎರಡನೇ ರೈಲು ಸಂಚಾರ ಆರಂಭಿಸಿತ್ತು.

ನೇರಳೆ ಮಾರ್ಗದಲ್ಲಿ ನಿತ್ಯ 1.87 ಲಕ್ಷ ಜನ ಸಂಚಾರ
ವೈಟ್ಫೀಲ್ಡ್ ಸಂಪರ್ಕ ಕಲ್ಪಿಸುವ ನೇರಳೆ ಮಾರ್ಗದಲ್ಲಿ ನಿತ್ಯ ಸರಾಸರಿ 1.87 ಲಕ್ಷ ಮಂದಿ ಸಂಚರಿಸುತ್ತಾರೆ ಹಾಗೂ ನಾಗಸಂದ್ರ-ಯಲಚೇನಹಳ್ಳಿ ಹಸಿರು ಮಾರ್ಗದಲ್ಲಿ 1.60 ಲಕ್ಷ ಜನರು ಪ್ರಯಾಣಿಸುತ್ತಾರೆ. ನೇರಳೆ ಮಾರ್ಗದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಿಸರುವುದರಿಂದ ಅಲ್ಲಿಗೆ ಆರು ಬೋಗಿಗಳ ಮೂರನೇ ರೈಲನ್ನು ನೀಡಲಾಗುತ್ತಿದೆ.

ಮಹಿಳೆಯರಿಗೂ ಅನುಕೂಲ
ಆರು ಬೋಗಿಗಳ ರೈಲಿನಲ್ಲಿ ಮೊದಲ ಬೋಗಿಯನ್ನು ಮಹಿಳೆಯರಿಗೆ ಮೀಡಲಿಡಲಾಗಿದೆ. ಮೊದಲ ಬೋಗಿಯು ಹಳೆ ರೈಲಿನ ಭಾಗವಾಗಿರುವುದರಿಂದ ಇದರಲ್ಲಿ 325 ಮಂದಿ ಒಂದೇ ಬಾರಿಗೆ ಪ್ರಯಾಣಿಸಬಹುದಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications