ಹಲಸೂರು ಕೆರೆ ಮಾಲಿನ್ಯಕ್ಕೆ ಬಲಿಯಾದ ಸಾವಿರಾರು ಮೀನುಗಳು
ಬೆಂಗಳೂರು, ಮಾರ್ಚ್ 07: ಗಾರ್ಡನ್ ಸಿಟಿ ಬೆಂಗಳೂರಿನ ಮಾಲಿನ್ಯ ಮಿತಿ ಮೀರುತ್ತಿದೆ ಎಂಬುದಕ್ಕೆ ಸೋಮವಾರ ಬೆಳಗ್ಗೆ ದುರಂತ ಉದಾಹರಣೆ ಕಾಣಸಿಕ್ಕಿದೆ. ಹಲಸೂರಿನ ಕೆರೆಯ ದಂಡೆಯಲ್ಲಿ ಸಾವಿರಾರು ಮೀನುಗಳು ಸತ್ತು ಬಿದ್ದಿವೆ.
ಮೀನುಗಳ ಸಾವಿಗೆ ಇನ್ನೂ ಸರಿಯಾದ ಕಾರಣ ತಿಳಿದು ಬಂದಿಲ್ಲ. ಸ್ಥಳೀಯ ನಿವಾಸಿಗಳು, ಪರಿಸರವಾದಿಗಳ ಪ್ರಕಾರ, ಕೆರೆಗೆ ವಿಷಯುಕ್ತ, ಮಾಲಿನ್ಯಯುಕ್ತ ಪದಾರ್ಥಗಳು ಸೇರ್ಪಡೆಯಾಗುತ್ತಿವೆ. [ಬೆಂಗಳೂರು ಕೆರೆಗಳ ಸ್ಥಿತಿ ನೋಡಿ]

ಪ್ರವಾಸಿಗರ ನೆಚ್ಚಿನ ಬೋಟಿಂಗ್, ವಿಹಾರ ತಾಣವಾಗಿದ್ದ ಹಲಸೂರಿನ ಕೆರೆ ಈಗ ಮಾಲಿನ್ಯಮಯವಾಗಿ ತನ್ನ ಅಂದ ಕಳೆದುಕೊಳ್ಳುತ್ತಿದೆ.
Bengaluru: Thousands of dead fish washed ashore on Ulsoor Lake due to rising water pollution levels pic.twitter.com/XEjNLFIP9k
— ANI (@ANI_news) March 7, 2016
ಬೆಂಗಳೂರಿನ ಜಲಮಂಡಳಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇರ ಹೊನೆ ಹೊರಬೇಕಾಗಿದೆ ಎಂದು ಸ್ಥಳೀಯ ನಿವಾಸಿ ಪುರುಷೋತ್ತಮ್ ಅವರು ಹೇಳಿದ್ದಾರೆ.
ಬೆಳ್ಳಂದೂರು ಕೆರೆ ದುರ್ನಾತ: ಬೆಳ್ಳಂದೂರು, ಯಮಲೂರು ಕೆರೆಯ ನೊರೆ ಹಾಗೂ ದುರ್ನಾತ ಹೊರಹೊಮ್ಮಿ ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ ಎಂಬ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿದ್ದು ನೆನಪಿರಬಹುದು. ಡಿಟರ್ಜೆಂಟ್ ಯುಕ್ತ ನೀರು ಕೆರೆಗೆ ಸೇರುತ್ತಿರುವುದು ನೊರೆಗೆ ಕಾರಣ ಎಂದು ತಿಳಿದು ಬಂದಿತ್ತು. ಕೊಳಚೆ ನೀರು ನೇರವಾಗಿ ಕೆರೆಗೆ ಸೇರುತ್ತಿತ್ತು. ಇದರ ತಡೆಗೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲದಿರುವುದು ನೊರೆ ಹಾಗೂ ಸುತ್ತಮುತ್ತಲಿನ ಪರಿಸರ ಹಾನಿಗೆ ಕಾರಣವಾಗಿತ್ತು.
ಈಗ ಹಲಸೂರಿನಲ್ಲೂ ಇದೇ ರೀತಿ ಸಮಸ್ಯೆ ಕಾಡುತ್ತಿದೆ. ಕಳೆದ ಎರಡು ವರ್ಷಗಳಿಂದ ಚರಂಡಿಯಿಂದ ಕಲುಷಿತ ನೀರು ನೇರವಾಗಿ ಕೆರೆಗೆ ಸೇರುತ್ತಿದೆ. ಹೀಗಾಗಿ ಆಮ್ಲಜನಕ ಕೊರತೆಯಿಂದ ಮೀನುಗಳು ಸಾವನ್ನಪ್ಪಿವೆ ಎಂದು ಪರಿಸರವಾದಿಗಳು ಹೇಳಿದ್ದಾರೆ.
-
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral












Click it and Unblock the Notifications