ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು-ತಿರುಪತಿ ಪ್ಯಾಕೇಜ್ ಮತ್ತೆ ಆರಂಭ; ದರಪಟ್ಟಿ

|
Google Oneindia Kannada News

ಬೆಂಗಳೂರು, ಜುಲೈ 13; ಕೋವಿಡ್ ಪ್ರಕರಣಗಳು ಕಡಿಮೆಯಾಗಿ ಲಾಕ್‌ಡೌನ್ ಪೂರ್ಣಗೊಂಡಿದೆ. ಜನಜೀವನ ಸಹಜ ಸ್ಥಿತಿಗೆ ಬಂದಿದೆ. ದೇವಾಲಯಗಳು ಸಹ ಬಾಗಿಲು ತೆರೆದಿದ್ದು, ಭಕ್ತರು ದರ್ಶನ ಪಡೆಯಲು ತೆರಳುತ್ತಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬೆಂಗಳೂರು- ತಿರುಪತಿ ಪ್ಯಾಕೇಜ್ ಘೋಷಣೆ ಮಾಡಿದೆ. ಬೆಂಗಳೂರು ಕೇಂದ್ರಿಯ ವಿಭಾಗದಿಂದ ಜನರು ಅನುಕೂಲಕ್ಕಾಗಿ ಈ ಪ್ಯಾಕೇಜ್ ಪ್ರಕಟಿಸಲಾಗಿದೆ.

ಜಮ್ಮುವಿನಲ್ಲಿ ದೇವಸ್ಥಾನ ನಿರ್ಮಾಣಕ್ಕೆ ತಿರುಪತಿ ದೇವಸ್ಥಾನ ಮಂಡಳಿಗೆ ಭೂಮಿಜಮ್ಮುವಿನಲ್ಲಿ ದೇವಸ್ಥಾನ ನಿರ್ಮಾಣಕ್ಕೆ ತಿರುಪತಿ ದೇವಸ್ಥಾನ ಮಂಡಳಿಗೆ ಭೂಮಿ

ಬೆಂಗಳೂರು ನಗರದ ಶಾಂತಿನಗರ, ಸ್ಯಾಟಲೈಟ್ ಬಸ್ ನಿಲ್ದಾಣದಿಂದ ತಿರುಪತಿ ಪ್ಯಾಕೇಜ್ ಬಸ್‌ಗಳು ಸಂಚಾರ ನಡೆಸಿವೆ. ಆಸಕ್ತರು ಮುಂಗಡವಾಗಿ ಟಿಕೆಟ್ ಬುಕ್ ಮಾಡಿಕೊಂಡು ಬಸ್‌ಗಳಲ್ಲಿ ಸಂಚಾರವನ್ನು ನಡೆಸಬಹುದಾಗಿದೆ.

ಕರ್ನಾಟಕದಿಂದ ಕೇರಳಕ್ಕೆ ಸರ್ಕಾರಿ ಬಸ್ ಸಂಚಾರ ಕರ್ನಾಟಕದಿಂದ ಕೇರಳಕ್ಕೆ ಸರ್ಕಾರಿ ಬಸ್ ಸಂಚಾರ

ಐರಾವತಿ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸೆಲ್) ಬಸ್‌ಗಳನ್ನು ತಿರುಪತಿ ಪ್ಯಾಕೇಜ್‌ಗೆ ಬಳಕೆ ಮಾಡಿಕೊಳ್ಳಲಾಗುತ್ತಿದೆ. 16/7/2021ರಿಂದ ಈ ಬಸ್‌ಗಳು ಸಂಚಾರ ನಡೆಸಲಿವೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

ತಿರುಪತಿ ದೇವಸ್ಥಾನಕ್ಕೆ 3.16 ಕೋಟಿ ರೂ ದೇಣಿಗೆ ನೀಡಿದ ಎಐಎಡಿಎಂಕೆ ಶಾಸಕತಿರುಪತಿ ದೇವಸ್ಥಾನಕ್ಕೆ 3.16 ಕೋಟಿ ರೂ ದೇಣಿಗೆ ನೀಡಿದ ಎಐಎಡಿಎಂಕೆ ಶಾಸಕ

ಈ ಬಸ್‌ಗಳಲ್ಲಿ ಸಂಚಾರ ನಡೆಸಲು ಜನರು ಭಾನುವಾರದಿಂದ ಗುರುವಾರದ ತನಕ ಒಂದು ಮಾದರಿ ದರ ನೀಡಬೇಕು. ಶುಕ್ರವಾರ ಮತ್ತು ಶನಿವಾರ ಹೊರಡುವ ಬಸ್‌ಗಳಿಗೆ ಪ್ರತ್ಯೇಕ ದರವನ್ನು ನಿಗದಿ ಮಾಡಲಾಗಿದೆ.

ಯಾವ ಮಾರ್ಗದಲ್ಲಿ ಬಸ್‌ಗಳ ಸಂಚಾರ

ಯಾವ ಮಾರ್ಗದಲ್ಲಿ ಬಸ್‌ಗಳ ಸಂಚಾರ

ಶಾಂತಿನಗರದಿಂದ ಹೊರಡುವ ಬೆಂಗಳೂರು-ತಿರುಪತಿ ಪ್ಯಾಕೇಜ್ ಬಸ್ ಶಾಂತಿನಗರ, ಜಯನಗರ 4ನೇ ಬ್ಲಾಕ್, ನಾಗಸಂದ್ರ, ಎನ್. ಆರ್. ಕಾಲೋನಿ, ಕೆಂಪೇಗೌಡ ಬಸ್ ನಿಲ್ದಾಣ, ದೊಮ್ಮಲೂರು, ಮಾರತ್‌ಹಳ್ಳಿ, ಐ. ಟಿ. ಐ. ಗೇಟ್, ಕೆ. ಆರ್. ಪುರಂ, ಹೊಸಕೋಟೆ ಮಾರ್ಗವಾಗಿ ಸಂಚಾರ ನಡೆಸಲಿವೆ.

ಸ್ಯಾಟಲೈಟ್ ಬಸ್ ನಿಲ್ದಾಣದ ಮಾರ್ಗ

ಸ್ಯಾಟಲೈಟ್ ಬಸ್ ನಿಲ್ದಾಣದ ಮಾರ್ಗ

ಮೈಸೂರು ರಸ್ತೆಯ ಸ್ಯಾಟಲೈನ್ ಬಸ್ ನಿಲ್ದಾಣದಿಂದ ಹೊರಡುವ ಬಸ್‌ಗಳು ವಿಜಯನಗರ ಟಿಟಿಎಂಸಿ, ನವರಂಗ್, ಮಲ್ಲೇಶ್ವರ ಸರ್ಕಲ್, ಕೆಂಪೇಗೌಡ ಬಸ್ ನಿಲ್ದಾಣ, ಐ. ಟಿ. ಐ. ಗೇಟ್, ಕೆ. ಆರ್. ಪುರಂ, ಹೊಸಕೋಟೆ ಮಾರ್ಗವಾಗಿ ಸಂಚಾರ ನಡೆಸಲಿವೆ.

ಬೆಂಗಳೂರು-ತಿರುಪತಿ ಪ್ಯಾಕೇಜ್

ಬೆಂಗಳೂರು-ತಿರುಪತಿ ಪ್ಯಾಕೇಜ್

ಬೆಂಗಳೂರು-ತಿರುಪತಿ ಪ್ಯಾಕೇಜ್‌ನಲ್ಲಿ ಎರಡು ಮಾದರಿ ದರಗಳಿವೆ. ಭಾನುವಾರದಿಂದ ಗುರುವಾರದ ತನಕ ಒಂದು ಮಾದರಿ ದರವಿದೆ. ಶುಕ್ರವಾರ ಮತ್ತು ಶನಿವಾರ ಹೊರಡುವ ಬಸ್‌ಗಳಿಗೆ ಪ್ರತ್ಯೇಕ ದರವಿದೆ.

ವಯಸ್ಕರು ಭಾನುವಾರದಿಂದ ಗುರುವಾರದ ತನಕ 2,200 ರೂ. + ಜಿಎಸ್‌ಟಿ, ಶುಕ್ರವಾರ ಮತ್ತು ಶನಿವಾರ 2,600 ರೂ. + ಜಿಎಸ್‌ಟಿ ದರವನ್ನು ಪಾವತಿಸಬೇಕು. ಮಕ್ಕಳಿಗೆ (6 ರಿಂದ 12 ವರ್ಷ) ಭಾನುವಾರದಿಂದ ಗುರುವಾ 1800 ರೂ. + ಜಿಎಸ್‌ಟಿ ಮತ್ತು ಶುಕ್ರವಾರ ಮತ್ತು ಶನಿವಾರ 2000 ರೂ. + ಜಿಎಸ್‌ಟಿ ದರವನ್ನು ಪಾವತಿಸಬೇಕು.

Recommended Video

BUS ನಿಂದ ಕೆಳಗೆ ನಿಂತಿದ್ದ BMTC ಕಂಡಕ್ಟರ್ ಗೆ ಡಿಕ್ಕಿ ಹೊಡೆದ ಬೈಕ್ ಸವಾರ | Oneindia Kannada

ಯಾವ ನಿಲ್ದಾಣದಿಂದ ಎಷ್ಟು ದರವಿದೆ?

ಬೆಂಗಳೂರು-ತಿರುಪತಿ ಪ್ಯಾಕೇಜ್‌ನಲ್ಲಿ ಒಂದು ನಿಲ್ದಾಣದಿಂದ ಒದೊಂದು ದರವಿದೆ. ಈ ದರದ ಕುರಿತು ಟ್ವೀಟ್‌ನಲ್ಲಿ ಮಾಹಿತಿ ನೀಡಲಾಗಿದೆ.

English summary
After the unlock Karnataka State Road Transport Corporation has restarted its Bengaluru-Tirupati package. From July 16 people can travel with this package.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X