ಬೆಂಗಳೂರಿಗೆ 665 ಆಂಬ್ಯುಲೆನ್ಸ್: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು, ಆಗಸ್ಟ್ 9: ಬೆಂಗಳೂರು ನಗರದಲ್ಲಿ ಕೊರೊನಾ ರೋಗಿಗಳು ಮತ್ತು ಇತರೆ ರೋಗಿಗಳನ್ನು ಆಸ್ಪತ್ರೆ, ಕೋವಿಡ್ ಆರೈಕೆ ಕೇಂದ್ರಗಳಿಗೆ ಕರೆದೊಯ್ಯಲು 665 ಆಂಬುಲೆನ್ಸ್ ಗಳನ್ನು ನಿಯೋಜಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
Recommended Video
"ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸೂಚನೆಯಂತೆ, ನಗರದಲ್ಲಿ 665 ಆಂಬ್ಯುಲೆನ್ಸ್ ಗಳನ್ನು ನಿಯೋಜಿಸಲಾಗಿದೆ. ಕೊರೊನಾ ಸೋಂಕಿಗೊಳಗಾದ ಮತ್ತು ಇತರೆ ರೋಗಿಗಳನ್ನು ಆಸ್ಪತ್ರೆ ಹಾಗೂ ಕೋವಿಡ್ ಕೇಂದ್ರಕ್ಕೆ ಕೊಂಡೊಯ್ಯಲು ಕ್ರಮ ಕೈಗೊಳ್ಳಲಾಗಿದೆ" ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಬಿಬಿಎಂಪಿಯ ಪೂರ್ವ ವಲಯದಲ್ಲಿ 127, ಪಶ್ಚಿಮ ವಲಯದಲ್ಲಿ 141, ದಕ್ಷಿಣದಲ್ಲಿ 110, ರಾಜರಾಜೇಶ್ವರಿ ನಗರದಲ್ಲಿ 40, ಬೊಮ್ಮನಹಳ್ಳಿಯಲ್ಲಿ 43, ಮಹದೇವಪುರದಲ್ಲಿ 52, ದಾಸರಹಳ್ಳಿಯಲ್ಲಿ 24, ಯಲಹಂಕದಲ್ಲಿ 33 ಆಂಬ್ಯುಲೆನ್ಸ್ ಗಳ ವ್ಯವಸ್ಥೆ ಮಾಡಲಾಗಿದೆ. ಪೊಲೀಸ್ ಇಲಾಖೆಯಿಂದ 11 ಹಾಗೂ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ 84 ಆಂಬ್ಯುಲೆನ್ಸ್ ಗಳನ್ನು ನಿಯೋಜನೆ ಮಾಡಲಾಗಿದೆ ಎಂದಿದ್ದಾರೆ.

ಮೃತದೇಹ ಹಸ್ತಾಂತರಕ್ಕೆ ಕ್ರಮ:
ಕುಮಾರಸ್ವಾಮಿ ಲೇಔಟ್ ನ ಸಾಗರ್ ಆಸ್ಪತ್ರೆಗೆ ದಾಖಲಾಗಿ ಮೃತಪಟ್ಟಿದ್ದ ರೋಗಿಯ ಮೃತದೇಹ ಹಸ್ತಾಂತರಕ್ಕೆ ಸಚಿವ ಡಾ.ಕೆ.ಸುಧಾಕರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಎರಡು ದಿನಗಳಿಂದ ಮೃತದೇಹವನ್ನು ಇಟ್ಟುಕೊಂಡಿದ್ದ ಆಸ್ಪತ್ರೆಯ ಸಿಬ್ಬಂದಿ, 9 ಲಕ್ಷ ರೂ. ಶುಲ್ಕ ಪಾವತಿಸಿದ ಬಳಿಕವೇ ಮೃತದೇಹ ಹಸ್ತಾಂತರಿಸುವುದಾಗಿ ಕುಟುಂಬ ಸದಸ್ಯರಿಗೆ ಹೇಳಿದ್ದರು.
''ಹಣ ಪಾವತಿಸಿದ ನಂತರ ಮೃತದೇಹ ಕೊಡುತ್ತೇವೆ ಎಂದು ಹೇಳಿ ಕುಟುಂಬದವರನ್ನು ಹಿಂಸೆ ಮಾಡಿರುವುದು ಖಂಡನೀಯ. ಕೊರೊನಾ ಸಂಕಷ್ಟದ ಕಾಲದಲ್ಲಿ ಹಣ ಗಳಿಸುವುದು ಖಾಸಗಿ ಆಸ್ಪತ್ರೆಗಳಿಗೆ ಮಾನದಂಡವಾಗಬಾರದು. ಆಸ್ಪತ್ರೆ ಮುಖ್ಯಸ್ಥರೊಂದಿಗೆ ಮಾತನಾಡಿ, ಕುಟುಂಬಕ್ಕೆ ನ್ಯಾಯ ಕೊಡಿಸುತ್ತೇನೆ'' ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications