Get Updates
Get notified of breaking news, exclusive insights, and must-see stories!

ಹೆಜ್ಜಾಲ: ಶೀಘ್ರ ತಲೆಯೆತ್ತಲಿದೆ ರೈಲ್ವೆ ವಿಪತ್ತು ನಿರ್ವಹಣಾ ಕೇಂದ್ರ

ಬೆಂಗಳೂರಿನ ಹೊರವಲಯದಲ್ಲಿ ತಲೆ ಎತ್ತಲಿರುವ ರೈಲ್ವೆ ವಿಪತ್ತು ನಿರ್ವಹಣಾ ಕೇಂದ್ರ. ಹೆಜ್ಜಾಲದ ಬಳಿ ಸುಮಾರು 3.32 ಚದುರ ಕಿ.ಮೀ. ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಕೇಂದ್ರ. ಮುಂದಿನ ವರ್ಷ ಡಿಸೆಂಬರ್ ನಲ್ಲಿ ಕಾರ್ಯರಂಭ ಮಾಡುವ ಸಾಧ್ಯತೆ.

ಬೆಂಗಳೂರು, ಆಗಸ್ಟ್ 14: ಬೆಂಗಳೂರಿನ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ರೈಲ್ವೆ ವಿಪತ್ತು ನಿರ್ವಹಣಾ ತರಬೇತಿ ಕೇಂದ್ರವು ಮುಂದಿನ ವರ್ಷ ಡಿಸೆಂಬರ್ ನಲ್ಲಿ ಕಾರ್ಯಾರಂಭ ಮಾಡಲಿದೆ.

ಎಲ್ಲಿದೆ ಈ ಕೇಂದ್ರ?
ಬೆಂಗಳೂರಿನ ಹೊರವಲಯದಲ್ಲಿರುವ ಹೆಜ್ಜಾಲದಲ್ಲಿ, ಸುಮಾರು 3.33 ಚದುರ ಕಿ.ಮೀ. ವ್ಯಾಪ್ತಿಯ ಪ್ರದೇಶದಲ್ಲಿಈ ಕೇಂದ್ರವು ನಿರ್ಮಾಣವಾಗುತ್ತಿದ್ದು, ಸುಮಾರು 44.42 ಕೋಟಿ ರು.ಗಳಲ್ಲಿ ಈ ಯೋಜನೆ ಅನುಷ್ಠಾನಕ್ಕೆ ಬರುತ್ತಿದೆ.

BENGALURU TO GET INDIA’S FIRST DISASTER VILLAGE

ತರಬೇತಿ ಹೇಗೆ?
ರೈಲು ದುರಂಗಳಾದ ಸಂದರ್ಭಗಲ್ಲಿ ಸ್ಥಳಕ್ಕೆ ದೌಡಾಯಿಸುವ ರೈಲ್ವೇ ಸುರಕ್ಷಾ ದಳದ ಸಿಬ್ಬಂದಿಗೆ ಪ್ರಯಾಣಿಕರನ್ನು ರಕ್ಷಿಸಲು ಸೂಕ್ತ ರೀತಿಯಲ್ಲಿ ತರಬೇತಿ ನೀಡುವ ವಿಶೇಷ ಕೇಂದ್ರ ಇದಾಗಿದ್ದು, ಇದರಲ್ಲಿ ನೈಜರೀತಿಯಲ್ಲೇ ಸಂದರ್ಭಗಳಲ್ಲಿ ಸೃಷ್ಟಿಸಿ ಅಂಥ ಸಂದರ್ಭಗಳಲ್ಲಿ ಪ್ರಯಾಣಿಕರನ್ನು ಕಾಪಾಡುವ ಕುರಿತಂತೆ ಸಿಬ್ಬಂದಿಗೆ ತರಬೇತಿ ನೀಡುವ ವ್ಯವಸ್ಥೆಯನ್ನು ಮಾಡಲಾಗುತ್ತಿದೆ.

ವಿಪತ್ತು ನಿರ್ವಹಣಾ ಪಡೆಗಳಿಗೆ ವಿಶೇಷ ತರಬೇತಿ ನೀಡುವ ಮಾದರಿಯಲ್ಲೇ ರೈಲ್ವೇ ವಿಪತ್ತು ನಿರ್ವಹಣಾ ಸಿಬ್ಬಂದಿಗೂ ತರಬೇತಿ ನೀಡಲಾಗುತ್ತದೆಂದು ಮೂಲಗಳು ತಿಳಿಸಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+