ಬೆಂಗಳೂರಲ್ಲಿ ದಿಢೀರ್ ಭೀಕರ ಟ್ರಾಫಿಕ್ ಜಾಮ್, ಕಿಲೋ ಮೀಟರ್ ಉದ್ದ ನಿಂತಿರುವ ವಾಹನಗಳು... Hosur Road
ನಮ್ಮ ಬೆಂಗಳೂರು ಇಡೀ ಜಗತ್ತಿನಲ್ಲಿ ಹೆಸರು ಮಾಡಿದ್ದರೂ, ಬೆಂಗಳೂರಿಗೆ ಟ್ರಾಫಿಕ್ ಸಮಸ್ಯೆಯೇ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸರ್ಕಾರ ಕೂಡ ಫ್ಲೈಓವರ್, ಅಂಡರ್ಪಾಸ್ ಸೇರಿ ಹಲವು ಯೋಜನೆ ತಂದು ಟ್ರಾಫಿಕ್ ನಿಯಂತ್ರಣಕ್ಕೆ ಪ್ರಯತ್ನಿಸುತ್ತಿದ್ದರೂ ಪರಿಸ್ಥಿತಿ ಹಿಡಿತಕ್ಕೆ ಸಿಗುತ್ತಿಲ್ಲ. ಅದ್ರಲ್ಲೂ ಹೆದ್ದಾರಿಗಳಲ್ಲಿ ಏನಾದರೂ ಎಡವಟ್ಟು ಆಗಿಹೋದರೆ ಮುಗಿದೇ ಹೋಯ್ತು ಕಥೆ ಅಂತಾ ಹೇಳಬಹುದು. ಇದೇ ರೀತಿಯಾಗಿ ಈಗ ದಿಢೀರ್ ಬೆಂಗಳೂರು ಟು ಹೊಸೂರು ಹೆದ್ದಾರಿ ಭೀಕರ ಟ್ರಾಫಿಕ್ ಸಮಸ್ಯೆಗೆ ಸಿಲುಕಿ ನಲುಗಿ ಹೋಗಿದೆ.
ಬೆಂಗಳೂರು ನಗರವನ್ನ ತಮಿಳುನಾಡಿಗೆ ಸಂಪರ್ಕಿಸುವ, ಹೊರವಲಯ ಅತ್ತಿಬೆಲೆ ಸಮೀಪ ಭೀಕರ ಘಟನೆ ಸಂಭವಿಸಿತ್ತು. ಬೆಂಗಳೂರು-ಹೊಸೂರು ನಡುವೆ ಪ್ರಮುಖ ರಾಷ್ಟ್ರೀಯ ಹೆದ್ದಾರಿಗೆ ಕಂಟಕ ತಂದಿದ್ದ ಕಾಮಗಾರಿ, ಸ್ಥಳೀಯರನ್ನ ದೊಡ್ಡ ಸಂಕಷ್ಟಕ್ಕೆ ನೂಕಿದೆ. ಅಂಡರ್ಪಾಸ್ ನಿರ್ಮಾಣ ಕಾಮಗಾರಿ ವೇಳೆ ಹೆದ್ದಾರಿಯ ಒಂದು ಬದಿಯಲ್ಲಿ ಭಾರಿ ದೊಡ್ಡ ಕುಸಿತ ಉಂಟಾಗಿ, ದೊಡ್ಡದಾಗಿ ಹಳ್ಳ ನಿರ್ಮಾಣ ಆಗಿದೆ. ಈ ಕಾರಣಕ್ಕೆ ಬೆಂಗಳೂರು-ಹೊಸೂರು ಹೆದ್ದಾರಿಯಲ್ಲಿ ಕಿಲೋ ಮೀಟರ್ ಉದ್ದಕ್ಕೆ ಟ್ರಾಫಿಕ್ ಜಾಮ್ ಆಗಿದೆ. ನಿನ್ನೆ ಕಾಮಗಾರಿ ನಡೆಯುವ ಸಮಯದಲ್ಲಿ ಕುಸಿತ ಆಗಿತ್ತು ಎಂದು ಹೇಳಲಾಗಿದ್ದು, ಇಂದು ಬೆಳಗ್ಗೆಯಿಂದಲೇ ವಿಪರೀತ ಟ್ರಾಫಿಕ್ ಜಾಮ್ ಎದುರಾಗಿತ್ತು.

ಸ್ಕೂಲ್ ಬಸ್, ಆಂಬುಲೆನ್ಸ್ ಪರದಾಟ
ಹೆದ್ದಾರಿಯಲ್ಲಿ ಭೀಕರ ಟ್ರಾಫಿಕ್ ಜಾಮ್ ಉಂಟಾದ ಪರಿಣಾಮ ಸ್ಕೂಲ್ ಬಸ್ ಮತ್ತು ಆಂಬುಲೆನ್ಸ್ ಓಡಾಟಕ್ಕೂ ಸಮಸ್ಯೆ ಎದುರಾಗಿತ್ತು. ಅದರಲ್ಲೂ ಶಾಲೆಗೆ ಹೋಗಬೇಕಿದ್ದ ಮಕ್ಕಳು ಟ್ರಾಫಿಕ್ ಜಾಮ್ ಕಾರಣಕ್ಕೆ ಹೆದ್ದಾರಿಯಲ್ಲೇ ಪರದಾಡುವಂತೆ ಆಗಿತ್ತು. ಇನ್ನು ಆಂಬುಲೆನ್ಸ್ ಪರಿಸ್ಥಿತಿ ಕೂಡ ಇದೇ ರೀತಿ ಆಗಿದ್ದು, ಆಸ್ಪತ್ರೆಗೆ ಹೋಗಲು ರೋಗಿಗಳು ನರಳಾಡುತ್ತಿದ್ದಾರೆ. ಗುತ್ತಿಗೆದಾರರ ಅವೈಜ್ಞಾನಿಕ ಕಾಮಗಾರಿ ಈ ಸಮಸ್ಯೆಗೆ ಕಾರಣ ಎಂದು ಸ್ಥಳೀಯರು ಆರೋಪ ಮಾಡುತ್ತಿದ್ದಾರೆ. ಕೂಡಲೇ ಈ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಲ್ಪಿಸಿ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಕಾರ್ಮಿಕರಿಗೂ ಸೂಕ್ತ ರಕ್ಷಣೆ ಇಲ್ಲ?
ಮತ್ತೊಂದು ಕಡೆ ಹೆದ್ದಾರಿಯಲ್ಲಿ ಕಾಮಗಾರಿ ನಡೆಸುತ್ತಿರುವ ಕಾರ್ಮಿಕರಿಗೆ ಸೂಕ್ತವಾದ ರಕ್ಷಣೆ ಇಲ್ಲದೆ ಕೆಲಸ ಮಾಡಿಸಲಾಗುತ್ತಿದೆ ಎಂಬ ಆರೋಪ ಮಾಡಲಾಗಿದೆ. ಈ ಸಂಬಂಧ ಇದೀಗ ಫೋಟೋ ಹಾಗೂ ವಿಡಿಯೋ ವೈರಲ್ ಆಗುತ್ತಿವೆ. ಹಲವು ತಿಂಗಳಿಂದ ಈ ಕಾಮಗಾರಿ ಹಿನ್ನೆಲೆ ಸಾಲು ಸಾಲು ಸಮಸ್ಯೆಗಳು ಎದುರಾಗುತ್ತಿದ್ದು, ಕೂಡಲೇ ಅದನ್ನೆಲ್ಲಾ ಬಗೆಹರಿಸಲು ಅಧಿಕಾರಿ ವರ್ಗ ಮುಂದಾಗಬೇಕು ಎಂದು ಆಗ್ರಹಿಸಲಾಗಿದೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications