Bengaluru-Nandi hills electric train start: ಇಂದಿನಿಂದ ನಂದಿ ಬೆಟ್ಟಕ್ಕೆ ಎಲೆಕ್ಟ್ರಿಕ್ ರೈಲು ಸಂಚಾರ ಆರಂಭ, ವೇಳಾಪಟ್ಟಿ
ಬೆಂಗಳೂರು, ಡಿಸೆಂಬರ್ 11: ಬೆಂಗಳೂರಿನ ಸುತ್ತಮುತ್ತಲಿನ ಪ್ರವಾಸಿ ಸ್ಥಳಗಳ ಪೈಕಿ ಪ್ರಮುಖವಾಗಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟಕ್ಕೆ (Nandi Hills) ಇಂದಿನಿಂದ (ಡಿ.11) ಎಲೆಕ್ಟ್ರಿಕ್ ರೈಲು ಸಂಚಾರ ಆರಂಭವಾಗಿದೆ. ಇದು ಬೆಂಗಳೂರಿನಿಂದ ನಂದಿ ಹಿಲ್ಸ್ಗೆ ಮತ್ತು ಈ ಭಾಗದತ್ತ ಸಂಚರಿಸುವ ಪ್ರಯಾಣಿಕರ ಖುಷಿಯನ್ನು ಹೆಚ್ಚಿಸಿದೆ ಎಂದು ಮನಿ ಕಂಟ್ರೋಲ್ ವರದಿ ಮಾಡಿದೆ.
ಬೆಂಗಳೂರು ದಕ್ಷಿಣ ಪಶ್ಚಿಮ ರೈಲ್ವೆ (SWR) ಇಂದು ಡಿಸೆಂಬರ್ 11 ರಿಂದ ದೇವನಹಳ್ಳಿಯಿಂದ ಚಿಕ್ಕಬಳ್ಳಾಪುರಕ್ಕೆ ವಿಮಾನ ನಿಲ್ದಾಣದ ಮಾರ್ಗದಲ್ಲಿ ಮೇನ್ಲೈನ್ ಎಲೆಕ್ಟ್ರಿಕ್ ಮಲ್ಟಿಪಲ್ ಯುನಿಟ್ (ಮೆಮು) ರೈಲುಗಳ ವಿಸ್ತರಣೆ ಮಾಡುವುದಾಗಿ ಘೋಷಿಸಿತ್ತು. ಅದರಂತೆ ಇಂದಿನಿಂದ ಪ್ರತಿ ದಿನ ಮೆಮು ರೈಲು ಸಂಚಾರ ಆರಂಭವಾಗಿದೆ.

ರಾಜಧಾನಿಯಿಂದ ಕೇವಲ 60 ಕಿಲೋ ಮೀಟರ್ ದೂರದಲ್ಲಿರುವ ಪ್ರಸಿದ್ಧ ವಾರಾಂತ್ಯದ ತಾಣವಾದ ನಂದಿ ಹಿಲ್ಸ್ಗೆ ಸೋಮವಾರ ಇಂದು ಮೊದಲ ಎಲೆಕ್ಟ್ರಿಕ್ ರೈಲು ತನ್ನ ಸಂಚಾರ ಆರಂಭಿಸಿತು. ಕಳೆದ ವರ್ಷ 2022ರ ಮಾರ್ಚ್ ನಲ್ಲಿ ಯಲಹಂಕ ಮತ್ತು ಚಿಕ್ಕಬಳ್ಳಾಪುರ ಮಧ್ಯೆ ವಿದ್ಯುದ್ದೀಕರಣ ಮುಕ್ತಾಯಗೊಳಿಸಲಾಗಿತ್ತು. ಕೆಲವು ಕಾರಣಗಳಿಂದ ಬೆಂಗಳೂರು-ನಂದಿ ಹಿಲ್ ರೈಲು ಸಂಚಾರ ವಿಳಂಬವಾಯಿತು.
ಎಲ್ಲಿಂದ ಯಾವ ರೈಲು ಸಂಚರಿಸಲಿವೆ: ಗಾಡಿ ಸಂಖ್ಯೆ ಮಾಹಿತಿ
ಮೂಲಗಳ ಪ್ರಕಾರ ಯಶವಂತಪುರ-ಚಿಕ್ಕಬಳ್ಳಾಪುರ-ಯಶವಂತಪುರ (ಸಂಕ್ಯೆ-06593/06594) ರೈಲು ಸಂಚರಿಸುತ್ತದೆ. ಅದೇ ರೀತಿ ಬೆಂಗಳೂರು ಕಂಟೋನ್ಮೆಂಟ್ ನಿಂದ ಚಿಕ್ಕಬಳ್ಳಾಪುರ ಮರಳಿ ಕಂಟೋನ್ಮೆಂಟ್ ರೈಲು ನಿಲ್ದಾಣಕ್ಕೆ ರೈಲು (06531/06532 ) ಓಡಾಡಲಿದೆ. ಚಿಕ್ಕಬಳ್ಳಾಪುರ-ಬೆಂಗಳೂರು ಕಂಟೋನ್ಮೆಂಟ್-ಚಿಕ್ಕಬಳ್ಳಾಪುರ ರೈಲೊಂದು (ಸಂಖ್ಯೆ 06535/06538) ಸೇವೆ ನೀಡಲಿದೆ.

16549/16550 ಸಂಖ್ಯೆಯ ರೈಲು ಕೆಎಸ್ಆರ್ ಬೆಂಗಳೂರು-ಕೋಲಾರ-ಕೆಎಸ್ಆರ್ ಬೆಂಗಳೂರಿಗೆ ಹಾಗೂ 06387/06388 ಸಂಖ್ಯೆಯ ರೈಲು ಕೆಎಸ್ಆರ್ ಬೆಂಗಳೂರು-ಕೋಲಾರ-ಕಂಟೋನ್ಮೆಂಟ್ ಡೀಸೆಲ್ ಮಲ್ಟಿಪಲ್ ಯುನಿಟ್ (ಡೆಮು) ರೈಲುಗಳು ಸೇವೆ ಪ್ರಸ್ತುತ ನಂದಿ ನಿಲ್ದಾಣದಲ್ಲಿ ನಿಲ್ಲುತ್ತವೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆಂದು ವರದಿ ಆಗಿದೆ.
ರೈಲು ಸಮಯ ಕಡಿತಕ್ಕೆ ಆಗ್ರಹ
ನಂದಿ ಬೆಟ್ಟದ ತಳದಲ್ಲಿರುವ ಭೋಗನಂದೀಶ್ವರ ದೇವಾಲಯವು ನಂದಿ ನಿಲ್ದಾಣದಿಂದ ಸುಮಾರು 1.4 ಕಿಮೀ ದೂರದಲ್ಲಿ ಇದೆ. ಪ್ರವಾಸಿಗರು ನಂದಿ ಬೆಟ್ಟದ ತುದಿಯನ್ನು ತಲುಪಲು ಹೆಚ್ಚುವರಿಯಾಗಿ 15 ರಿಂದ 18 ಕಿಲೋ ಮೀಟರ್ ಪ್ರಯಾಣಿಸಬೇಕಿದೆ. ನೈಋತ್ಯ ರೈಲ್ವೆಯು ಪ್ರಯಾಣದ ಸಮಯ ಕಡಿತಗೊಳಿಸಲು ಆದ್ಯತೆ ನೀಡಬೇಕು ಎಂದು ಪ್ರಯಾಣಿಕರೊಬ್ಬರು ತಿಳಿಸಿದರು.
ಎಲೆಕ್ಟ್ರಕಿಕ್ ರೈಲು ನಿಲುಗಡೆ ಇಲ್ಲದ ನಿಲ್ದಾಣಗಳು ಇವು
ಬೆಂಗಳೂರಿನಿಂದ ಹೊರಡುವ ವಿದ್ಯುತ್ ಚಾಲಿತ ರೈಲಿಗೆ ಬೆಟ್ಟಹಲಸೂರು, ದೊಡ್ಡಜಾಲ, ಚನ್ನಸಂದ್ರದಂತಹ ನಿಲ್ದಾಣಗಳಲ್ಲಿ ನಿಲುಗಡೆ ಇಲ್ಲ. ಹೀಗಾಗಿ ಈ ನಿಲ್ದಾಣಗಳಲ್ಲಿ ರೈಲು ನಿಲ್ಲಬೇಕು ಎಂಬ ಆಗ್ರಹ ಕೇಳಿ ಬಂದಿದೆ. ಆದರೆ ರೈಲ್ವೆ ಅಧಿಕಾರಿಗಳು ಸೂಕ್ತ ಕಾರಣ ಸಹಿತಿ ಈ ಭಾಗದಲ್ಲಿ ನಿಲುಗಡೆಯನ್ನು ನಿಷೇಧಿಸಿದೆ ಎಂದು ತಿಳಿದು ಬಂದಿದೆ.
ಬೆಂಗಳೂರು ಸೌಥ್ ವೆಸ್ಟರ್ನ್ ರೈಲ್ವೆಯು ಈ ಹಿಂದೆ ನಗರದಿಂದ ದೇವನಹಳ್ಳಿ ಮೂಲಕ ಚಿಕ್ಕಬಳ್ಳಾಪುರವನ್ನು ಸಂಪರ್ಕಿಸುವ 108-ವರ್ಷ-ಹಳೆಯ ಹೆರಿಟೇಜ್ ರೈಲು ಮಾರ್ಗದಲ್ಲಿ ಒಂದು ದಿನದ ಪ್ರವಾಸ ಪ್ಯಾಕೇಜ್ ಅನ್ನು ಘೋಷಿಸಿತ್ತು. ಇದರಲ್ಲಿ ಪಾರಂಪರಿಕ ನಿಲ್ದಾಣದ ನವೀಕರಣ, ದೇವನಹಳ್ಳಿ ಕೋಟೆಗೆ ಭೇಟಿ ಜೊತೆಗೆ ನಂದಿ ಬೆಟ್ಟಗಳಲ್ಲಿ ಸೂರ್ಯೋದಯ ವೀಕ್ಷಣೆ, ಚಿಕ್ಕಬಳ್ಳಾಪುರದ ಆದಿಯೋಗಿ ಪ್ರತಿಮೆ (ಈಶಾ ಫೌಂಡೇಶನ್) ವೀಕ್ಷಣೆಗಳು ಸೇರಿದ್ದವು.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Ugadi Special Train: ವಿಶೇಷ ರೈಲು ಸಂಚಾರ, ಬೆಂಗಳೂರು-ಬೆಳಗಾವಿ ಪ್ರಯಾಣಿಕರೇ ಗಮನಿಸಿ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ










Click it and Unblock the Notifications