ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘನೆ, 14,000 ರೂಪಾಯಿ ದಂಡ ವಸೂಲಿ... Bengaluru Tobacco Violation
ಬೆಂಗಳೂರು: ತಂಬಾಕು ನಿಯಂತ್ರಣ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೆ ತರಲು ಅಧಿಕಾರಿಗಳು ಇದೀಗ ದೊಡ್ಡ ಮಟ್ಟದಲ್ಲಿ ಕಾರ್ಯಾಚರಣೆ ಶುರು ಮಾಡಿದ್ದಾರೆ. ತಂಬಾಕು ಬಳಕೆ ಕಾರಣ ಹಲವು ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ, ಹೀಗಿದ್ದಾಗ ಸರ್ವಾಜನಿಕ ಪ್ರದೇಶದಲ್ಲಿ ತಂಬಾಕು ಬಳಕೆ ವಿರುದ್ಧವಾಗಿ ಈಗಾಗಲೇ ಕಠಿಣ ಕಾನೂನು ಜಾರಿಗೆ ತರಲಾಗಿದೆ. ಹೀಗಿದ್ರೂ ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘನೆ ಆರೋಪ ಪದೇ ಪದೇ ಕೇಳಿಬರುತ್ತಲೇ ಇತ್ತು. ಹೀಗಾಗಿ ಖುದ್ದು ಅಧಿಕಾರಗಳೇ ಅಖಾಡಕ್ಕೆ ಇಳಿದು, ಆ ಮೂಲಕ ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘನೆ ಮಾಡುತ್ತಿದ್ದವರಿಗೆ ತಕ್ಕಪಾಠ ಕಲಿಸಿದ್ದಾರೆ.
ಅಂದಹಾಗೆ ಬೆಂಗಳೂರಿನಲ್ಲಿ ಗಲ್ಲಿ ಗಲ್ಲಿಗಳಲ್ಲೂ ತಂಬಾಕು ಮಾರಾಟ ನಡೆಯುತ್ತಿರುವ ಕಾರಣಕ್ಕೆ ಈಗ ತಂಬಾಕು ನಿಯಂತ್ರಣ ಕಾಯ್ದೆ ಸರಿಯಾಗಿ ಪಾಲನೆ ಆಗುತ್ತಿಲ್ಲ ಎಂಬ ದೂರುಗಳು ಬಂದಿದ್ದವು. ಈ ಬೆಳವಣಿಗೆ ಜೊತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಭಯ ಇಲ್ಲದೆ ತಂಬಾಕು ಉತ್ಪನ್ನ ಹಾಗೂ ತಂಬಾಕು ಬಳಸುವವರ ಸಂಖ್ಯೆ ಕೂಡ ಹೆಚ್ಚಾಗಿತ್ತು. ಇದೇ ಕಾರಣಕ್ಕೆ ತಂಬಾಕು ನಿಯಂತ್ರಣ ಕಾಯ್ದೆ ನಿಯಮ ಉಲ್ಲಂಘನೆ ತಡೆಯಲು ಬಿಬಿಎಂಪಿ ಉತ್ತರ ವಲಯ ವ್ಯಾಪ್ತಿಯಲ್ಲಿ ಫೆಬ್ರವರಿ 18 ಬುಧವಾರವೇ ವಿಶೇಷ ಪರಿಶೀಲನಾ ಅಭಿಯಾನ ಆರಂಭಿಸಲಾಗಿದೆ. ಈ ಅಭಿಯಾನ ಫೆಬ್ರವರಿ 26 ಗುರುವಾರ ತನಕವೂ ನಡೆಯಲಿದ್ದು, ಈಗ ನಿಯಮ ಉಲ್ಲಂಘನೆ ಮಾಡಿದ್ದವರಿಂದ 14,000 ರೂಪಾಯಿ ದಂಡ ವಸೂಲಿ ಮಾಡಲಾಗಿದೆ.

14,000 ರೂಪಾಯಿ ದಂಡ ವಸೂಲಿ
ತಂಬಾಕು ನಿಯಂತ್ರಣ ಕಾಯ್ದೆ ನಿಯಮ ಉಲ್ಲಂಘನೆ ತಡೆಯಲು ಕೈಗೊಂಡಿರುವ ವಿಶೇಷ ಅಭಿಯಾನ ಸಾರ್ಜನಿಕರಲ್ಲಿ ಜಾಗೃತಿ ಕೂಡ ಮೂಡಿಸಲಿದೆ. ಫೆಬ್ರವರಿ 19 ತನಕವು ಜಾರಿ ದಳದ ಅಧಿಕಾರಿಗಳು 1, 4, 11, 23 & 29ನೇ ವಾರ್ಡ್ಗಳಲ್ಲಿ ಪರಿಶೀಲನೆ ನಡೆಸಿ ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣವನ್ನ ದಾಖಲಿಸಿ ಒಟ್ಟು 14,000 ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. 23ನೇ ವಾರ್ಡ್ನ ನಾಗವಾರದಲ್ಲಿ ಅತಿ ಹೆಚ್ಚು ಎಂದರೆ ಸುಮಾರು 3,000 ರೂಪಾಯಿ ದಂಡ ವಸೂಲಿ ಮಾಡಲಾಗಿದೆ.
ಶಿಕ್ಷಣ ಸಂಸ್ಥೆಗಳ ಸಮೀಪದಲ್ಲೇ ಮಾರಾಟ
ಅಂದಹಾಗೆ ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ನಿಷೇಧವಿದ್ದರೂ ಧೂಮಪಾನ ಮಾಡುವುದು ಸೇರಿ, ಅಪ್ರಾಪ್ತರಿಗೆ ತಂಬಾಕು ಉತ್ಪನ್ನ ಮಾರಾಟ & ನಿಷೇಧಿತ ಪ್ರದೇಶದಲ್ಲಿ ತಂಬಾಕು ಜಾಹೀರಾತು ಪ್ರದರ್ಶನ ತಡೆಯುವುದು ಪ್ರಮುಖವಾಗಿ ಅಭಿಯಾನ ಉದ್ದೇಶವಾಗಿದೆ. ತಂಬಾಕು ನಿಯಂತ್ರಣ ಕಾಯ್ದೆ ಅಡಿಯಲ್ಲಿ ನಿಗದಿ ಮಾಡಿರುವ ಅಂತರ ನಿಯಮ ಉಲ್ಲಂಘಿಸಿ, ಶಿಕ್ಷಣ ಸಂಸ್ಥೆಗಳ ಸಮೀಪದಲ್ಲೇ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕರಿಗೆ ತಕ್ಕ ಪಾಠ ಕಲಿಸಿದ್ದಾರೆ ಅಧಿಕಾರಿಗಳು. ಈ ಮೂಲಕ ಬೆಂಗಳೂರಿನಲ್ಲಿ ಇದೀಗ, ತಂಬಾಕು ಮಾರಾಟ ವಿಚಾರದಲ್ಲಿ ಖಡಕ್ ಕ್ರಮ ಕೈಗೊಂಡಿದ್ದಾರೆ ಪಾಲಿಕೆ ಅಧಿಕಾರಿಗಳು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications