ಅಡ್ಡಾದಿಡ್ಡಿ ವಾಹನ ಚಲಾವಣೆಯಲ್ಲಿ ಬೆಂಗಳೂರು ನಂ.1
ಬೆಂಗಳೂರು, ಜುಲೈ, 21 : ಯಾವಾಗಲೂ ನಂಬರ್ ಒನ್ ಸ್ಥಾನ ಪಡೆಯಲು ಹವಣಿಸುವ ಸಿಲಿಕಾನ್ ಸಿಟಿ ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿ ಸಂಭವಿಸುವ ಅಪಘಾತ ಸಂಖ್ಯೆಯಲ್ಲಿಯೂ ಮೂಂಚೂಣಿ ಸ್ಥಾನ ಪಡೆದುಕೊಂಡಿದೆ.
ನಗರದಲ್ಲಿ ವಾಹನ ದಟ್ಟಣೆ ಏರಿದಂತೆ ಅಪಘಾತಗಳ ಸಂಖ್ಯೆಯೂ ಏರಿಕೆಯಾಗುತ್ತಿದೆ. ವಾಹನ ಚಲಾಯಿಸುವಿಕೆಯಲ್ಲಿ ಜನರು ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಮನಸ್ಸಿಗೆ ಬಂದಂತೆ ಸವಾರಿ ಮಾಡುವುದು ಅಪಘಾತ ಸಂಭವಿಸಲು ಪ್ರಮುಖ ಕಾರಣ ಎಂದು ನ್ಯಾಷನಲ್ ಕ್ರೈಂ ರೆಕಾರ್ಡ್ಸ್ ಬ್ಯೂರೋ(NCRB) ಸಂಸ್ಥೆ ನಡೆಸಿದ ಅಧ್ಯಯನದಿಂದ ತಿಳಿದು ಬಂದಿದೆ.[ಅಪಘಾತ ತಡೆಯಲು ಎಚ್ ಡಿ ಕ್ಯಾಮರ ಅಳವಡಿಸಿದ ಪೊಲೀಸರು]

ವಾಹನ ಚಲಾವಣೆ ವೇಳೆ ಸವಾರರು ಮೊಬೈಲ್ ಬಳಕೆ ಮಾಡುವುದು, ಮದ್ಯ ಸೇವಿಸಿರುವುದು, ಟ್ರಾಫಿಕ್ ಸಿಗ್ನಲ್ ನಲ್ಲಿ ಶಿಸ್ತಿನ ಕ್ರಮ ಅನುಸರಿಸದಿರುವುದು, ಅತಿ ವೇಗವಾಗಿ, ತಪ್ಪು ಮಾರ್ಗದಲ್ಲಿ ವಾಹನ ಓಡಿಸುವುದು, ಒನ್ ವೇ ಯಲ್ಲಿ ವಾಹನಗಳ ನಡುವೆ ಅಂತರ ಕಾಯ್ದುಕೊಳ್ಳದಿರುವುದು ಇವೆಲ್ಲವೂ ಅಪಘಾತ ಹೆಚ್ಚಳಕ್ಕೆ ಮುಖ್ಯ ಕಾರಣ ಎಂದು ನಗರ ಟ್ರಾಫಿಕ್ ಪೊಲೀಸ್ ಹೇಳಿದ್ದಾರೆ.
ಅಪಘಾತಗಳ ವಿವರ ಇಂತಿದೆ:
2014ರಲ್ಲಿ ಸುಮಾರು 90% ನಷ್ಟು ಅಂದರೆ ಸುಮಾರು 5,004 ಅಪಘಾತಗಳು ಸಂಭವಿಸಿದ್ದು, ಅದರಲ್ಲಿ 4,004 ಮಂದಿ ವೇಗವಾಗಿ ವಾಹನ ಓಡಿಸಿ ಅಪಘಾತಕ್ಕೆ ಒಳಗಾದವರು. ಇವರಲ್ಲಿ 626 ಮಂದಿ ಮೃತಪಟ್ಟಿದ್ದು, 2,707 ಮಂದಿ ನೋವಿನಿಂದ ನರಳುತ್ತಿದ್ದಾರೆ. ಅಪಘಾತಗಳ ಸರಣಿಯಲ್ಲಿ ಬೆಂಗಳೂರು ನಗರ ಪ್ರಥಮ ಸ್ಥಾನ ಪಡೆದುಕೊಂಡರೆ, ಕಲ್ಕತ್ತಾ 2ನೇ ಸ್ಥಾನದಲ್ಲಿದೆ.
ನಗರದ ರಾಷ್ಟ್ರೀಯ ಹೆದ್ದಾರಿಗಳಾದ ಬಳ್ಳಾರಿ (122) ಹೊಸೂರು (107) ಹಳೆ ಮದ್ರಾಸ್ ರಸ್ತೆ (104) ಗಳಲ್ಲಿ ಅಪಘಾತಗಳು ಹೆಚ್ಚು ಸಂಭವಿಸಲಿದ್ದು ಅನುಕ್ರಮವಾಗಿ 1ನೇ, 2ನೇ,3ನೇ ಸ್ಥಾನವನ್ನು ಪಡೆದುಕೊಂಡಿದೆ.
| - | ಅಪಘಾತಗಳ ಸಂಖ್ಯೆ | ಸಾವಿನ ಸಂಖ್ಯೆ | ಗಾಯಾಳುಗಳ ಸಂಖ್ಯೆ |
| 2014 | 5,004 | 729 | 4,098 |
| ರಾಷ್ಟ್ರೀಯ ಹೆದ್ದಾರಿ | 847 | 169 | 1,194 |
| ರಾಜ್ಯ ಹೆದ್ದಾರಿ | 266 | 34 | 261 |
| ಎಕ್ಸ್ ಪ್ರೆಸ್ ದಾರಿ | 24 | 4 | 6 |
-
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications