Get Updates
Get notified of breaking news, exclusive insights, and must-see stories!

Bengaluru Kadalekai Parishe 2024: ಬಸವನಗುಡಿಯ ರಸ್ತೆಗಳಲ್ಲಿ ಸಂಚಾರ ಬಂದ್, ಪರ್ಯಾಯ ಮಾರ್ಗಗಳಿವು

ಬೆಂಗಳೂರು, ನವೆಂಬರ್ 23: ಬೆಂಗಳೂರಿನ ಐತಿಹಾಸಿಕ ಕಡಲೆಕಾಯಿ ಪರಿಷೆ 2024ಗೆ ದಿನಗಣನೆ ಶೂರುವಾಗಿದೆ. ಬುಲ್ ಟೆಂಪಲ್ ರಸ್ತೆಯಲ್ಲಿ ದೊಡ್ಡ ಗಣಪತಿ ದೇವಸ್ಥಾನ ಆವರಣದಲ್ಲಿ ಅದ್ಧೂರಿ ಪರಿಷೆ ನಡೆಯಲಿದೆ. 25-11-2024 ರಿಂದ 26-11.2024 ವರೆಗೆ ಎರಡು ದಿನಗಳ ಕಾಲ ಪರಿಷೆ ಆಯೋಜನೆ ಹಿನ್ನೆಲೆಯಲ್ಲಿ ಈ ಭಾಗದ ವಿವಿಧ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ವಾಹನ ಸವಾರರಿಗೆ ಪರ್ಯಾಯ ಮಾರ್ಗ ವ್ಯವಸ್ಥೆ ಮಾಡಲಾಗಿದೆ ಎಂದು ಬೆಂಗಳೂರು ನಗರ ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಬಸವನಗುಡಿ ಸಂಚಾರ ಪೊಲೀಸ್ ಠಾಣೆ ಸರಹದ್ದಿನ ಶ್ರೀ ದೊಡ್ಡಬಸವಣ್ಣ ಮತ್ತು ದೊಡ್ಡ ಗಣಪತಿ ದೇವಸ್ಥಾನದಲ್ಲಿ ಸಂಪ್ರದಾಯದಂತೆ ಐತಿಹಾಸಿಕ ಕಡೆಲೆಕಾಯಿ ಪರಿಷೆ ಲಕ್ಷಾಂತರ ಜನರು ಸೇರಲಿದ್ದಾರೆ. ಈ ಕಾರಣದಿಂದ ವಾಹನಗಳ ಸುಗಮ ಸಂಚಾರದ ಅಡ್ಡಿ ಆಗದಂತೆ ಕ್ರಮ ವಹಿಸಲಾಗಿದೆ. ಸವಾರರು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಬುಲ್‌ ಟೆಂಪಲ್ ರಸ್ತೆಯಲ್ಲಿ ಈ ಕೆಳಕಂಡಂತೆ ಸಂಚಾರ ಮಾರ್ಪಾಟು ಮಾಡಲಾಗಿದೆ.

Bengaluru Traffic Advisory due to Basavanagudi Kadalekai Parishe 2024 Know Alternate Route Diversion

ಕಡಲೆಕಾಯಿ ಪರಿಷೆ: ಮಾರ್ಗ ಬದಲಾವಣೆ

* ಲಾಲ್‌ಬಾಗ್ ವೆಸ್ಟ್‌ಗೇಟ್, ಚಾಮರಾಜಪೇಟೆ, ಬುಲ್‌ ಟೆಂಪಲ್ ಮೂಲಕ ಹನುಮಂತನಗರದ ಕಡೆಗೆ ಸಂಚರಿಸುವ ವಾಹನಗಳು, ಬುಲ್‌ ಟೆಂಪಲ್ ರಸ್ತೆಯ ರಾಮಕೃಷ್ಣ ಆಶ್ರಮ ವೃತ್ತದಲ್ಲಿ ಬಲತಿರುವು ಪಡೆದು. ಸೀತಾರಾಮಯ್ಯ (ಹಯವದನರಾವ್) ರಸ್ತೆಯಲ್ಲಿ ಸಾಗಿ, ಗವಿಪುರಂ 3ನೇ ಅಡ್ಡರಸ್ತೆ, ಮೌಂಟ್ ಜಾಯ್ ರಸ್ತೆಯ ಮೂಲಕ ಹನುಮಂತನಗರ ತಲುಪಬೇಕು.

* ಆರ್.ವಿ. ಟೀಚರ್ಸ್ ಕಾಲೇಜ್ ಜಂಕ್ಷನ್, ಟ್ರಿನಿಟಿ ಆಸ್ಪತ್ರೆ ರಸ್ತೆ ಮತ್ತು ಕೆ.ಆರ್ ರಸ್ತೆ, ಬ್ಯೂಗಲ್ ರಾಕ್ ರಸ್ತೆ ಗಳಿಂದ ಹನುಮಂತನಗರ ಕಡೆಗೆ ಹೋಗುವ ವಾಹನಗಳು ತ್ಯಾಗೋರ್ ಸರ್ಕಲ್ (ಮಾರುಕಟ್ಟೆ ರಸ್ತೆ- ಬ್ಯೂಗಲ್‌ರಾಕ್ ರಸ್ತೆ ಜಂಕ್ಷನ್)ನಲ್ಲಿ ಬಲತಿರುವು ಪಡೆದು ಗಾಂಧಿಬಜಾರ್ ಮುಖ್ಯರಸ್ತೆ ಮೂಲಕ ರಾಮಕೃಷ್ಣ ಆಶ್ರಮ ಜಂಕ್ಷನ್, ಸೀತಾರಾಮಯ್ಯ (ಹಯವದನರಾವ್) ರಸ್ತೆ, ಗವಿಪುರಂ ಎಕ್ಸ್‌ಟೆನ್ಸ್‌ನ್ 3ನೇ ಅಡ್ಡರಸ್ತೆ, ಮೌಂಟ್ ಜಾಯ್ ರಸ್ತೆಯ ಮೂಲಕ ಹನುಮಂತನಗರ ಕಡೆಗೆ ಹೋಗಬಹುದು.

* ತ್ಯಾಗರಾಜನಗರ, ಬನಶಂಕರಿ,ಎನ್.ಆರ್.ಕಾಲೋನಿ, ಬುಲ್‌ಟೆಂಪಲ್ ರಸ್ತೆ ಕಡೆಯಿಂದ ಚಾಮರಾಜಪೇಟೆ ಕಡೆಗೆ ಸಾಗುವ ವಾಹನಗಳು ಬುಲ್‌ ಟೆಂಪಲ್ ರಸ್ತೆಯ ಕಾಮತ್ ಯಾತ್ರಿ ನಿವಾಸ ಜಂಕ್ಷನ್‌ನಲ್ಲಿ ಎಡತಿರುವು ಪಡೆದು, ಆಶೋಕನಗರ 2ನೇ ಕ್ರಾಸ್ (ಬಿ.ಎಂ.ಎಸ್. ಕಾಲೇಜ್ ಹಾಸ್ಟೆಲ್ ರಸ್ತೆ) ರಸ್ತೆಯಲ್ಲಿ ಸಾಗಿ ಕತ್ರಿಗುಪ್ಪೆ ರಸ್ತೆಯ ಜಂಕ್ಷನ್‌ನಲ್ಲಿ ಬಲ ತಿರುವು ಪಡೆಯಬೇಕು. ನಂತರ 3ನೇ ಮುಖ್ಯರಸ್ತೆ ಮೂಲಕ ನಾರಾಯಣಸ್ವಾಮಿ ಸರ್ಕಲ್‌ನಲ್ಲಿ ಕೆ.ಜಿ. ನಗರ ಮುಖ್ಯರಸ್ತೆ ಅಥವಾ ಸೀತಾರಾಮಯ್ಯ (ಹಯವದನರಾವ್) ರಸ್ತೆಯಲ್ಲಿ ಸಾಗಿ ರಾಮಕೃಷ್ಣ ಆಶ್ರಮ ಜಂಕ್ಷನ್ ಮೂಲಕ ಚಾಮರಾಜಪೇಟೆ ತಲುಪುವಂತೆ ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ವಾಹನಗಳ ಪಾರ್ಕಿಂಗ್ ವ್ಯವಸ್ಥೆ

ಎಪಿಎಸ್‌ ಕಾಲೇಜು ಆಟದ ಮೈದಾನದಲ್ಲಿ ಕಡಲೆಕಾಯಿ ಪರಿಷೆಗೆ ಬರುವ ವಾಹನ ಸವಾರರಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಪಿಕ್ ಅಪ್‌ ಮತ್ತು ಡ್ರಾಪ್ ಸ್ಥಳ

* ರಾಮಕೃಷ್ಣ ಆಶ್ರಮ

* ರಂಗರಾವ್ ಜಂಕ್ಷನ್

* ನಾರಾಯಣಸ್ವಾಮಿ ವೃತ್ತ

* ಎಪಿಎಸ್ ಕಾಲೇಜು

* ಗಾಂಧಿ ಬಜಾರ್ ವೃತ್ತ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+