Bengaluru Kadalekai Parishe 2024: ಬಸವನಗುಡಿಯ ರಸ್ತೆಗಳಲ್ಲಿ ಸಂಚಾರ ಬಂದ್, ಪರ್ಯಾಯ ಮಾರ್ಗಗಳಿವು
ಬೆಂಗಳೂರು, ನವೆಂಬರ್ 23: ಬೆಂಗಳೂರಿನ ಐತಿಹಾಸಿಕ ಕಡಲೆಕಾಯಿ ಪರಿಷೆ 2024ಗೆ ದಿನಗಣನೆ ಶೂರುವಾಗಿದೆ. ಬುಲ್ ಟೆಂಪಲ್ ರಸ್ತೆಯಲ್ಲಿ ದೊಡ್ಡ ಗಣಪತಿ ದೇವಸ್ಥಾನ ಆವರಣದಲ್ಲಿ ಅದ್ಧೂರಿ ಪರಿಷೆ ನಡೆಯಲಿದೆ. 25-11-2024 ರಿಂದ 26-11.2024 ವರೆಗೆ ಎರಡು ದಿನಗಳ ಕಾಲ ಪರಿಷೆ ಆಯೋಜನೆ ಹಿನ್ನೆಲೆಯಲ್ಲಿ ಈ ಭಾಗದ ವಿವಿಧ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ವಾಹನ ಸವಾರರಿಗೆ ಪರ್ಯಾಯ ಮಾರ್ಗ ವ್ಯವಸ್ಥೆ ಮಾಡಲಾಗಿದೆ ಎಂದು ಬೆಂಗಳೂರು ನಗರ ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಬಸವನಗುಡಿ ಸಂಚಾರ ಪೊಲೀಸ್ ಠಾಣೆ ಸರಹದ್ದಿನ ಶ್ರೀ ದೊಡ್ಡಬಸವಣ್ಣ ಮತ್ತು ದೊಡ್ಡ ಗಣಪತಿ ದೇವಸ್ಥಾನದಲ್ಲಿ ಸಂಪ್ರದಾಯದಂತೆ ಐತಿಹಾಸಿಕ ಕಡೆಲೆಕಾಯಿ ಪರಿಷೆ ಲಕ್ಷಾಂತರ ಜನರು ಸೇರಲಿದ್ದಾರೆ. ಈ ಕಾರಣದಿಂದ ವಾಹನಗಳ ಸುಗಮ ಸಂಚಾರದ ಅಡ್ಡಿ ಆಗದಂತೆ ಕ್ರಮ ವಹಿಸಲಾಗಿದೆ. ಸವಾರರು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಬುಲ್ ಟೆಂಪಲ್ ರಸ್ತೆಯಲ್ಲಿ ಈ ಕೆಳಕಂಡಂತೆ ಸಂಚಾರ ಮಾರ್ಪಾಟು ಮಾಡಲಾಗಿದೆ.

ಕಡಲೆಕಾಯಿ ಪರಿಷೆ: ಮಾರ್ಗ ಬದಲಾವಣೆ
* ಲಾಲ್ಬಾಗ್ ವೆಸ್ಟ್ಗೇಟ್, ಚಾಮರಾಜಪೇಟೆ, ಬುಲ್ ಟೆಂಪಲ್ ಮೂಲಕ ಹನುಮಂತನಗರದ ಕಡೆಗೆ ಸಂಚರಿಸುವ ವಾಹನಗಳು, ಬುಲ್ ಟೆಂಪಲ್ ರಸ್ತೆಯ ರಾಮಕೃಷ್ಣ ಆಶ್ರಮ ವೃತ್ತದಲ್ಲಿ ಬಲತಿರುವು ಪಡೆದು. ಸೀತಾರಾಮಯ್ಯ (ಹಯವದನರಾವ್) ರಸ್ತೆಯಲ್ಲಿ ಸಾಗಿ, ಗವಿಪುರಂ 3ನೇ ಅಡ್ಡರಸ್ತೆ, ಮೌಂಟ್ ಜಾಯ್ ರಸ್ತೆಯ ಮೂಲಕ ಹನುಮಂತನಗರ ತಲುಪಬೇಕು.
* ಆರ್.ವಿ. ಟೀಚರ್ಸ್ ಕಾಲೇಜ್ ಜಂಕ್ಷನ್, ಟ್ರಿನಿಟಿ ಆಸ್ಪತ್ರೆ ರಸ್ತೆ ಮತ್ತು ಕೆ.ಆರ್ ರಸ್ತೆ, ಬ್ಯೂಗಲ್ ರಾಕ್ ರಸ್ತೆ ಗಳಿಂದ ಹನುಮಂತನಗರ ಕಡೆಗೆ ಹೋಗುವ ವಾಹನಗಳು ತ್ಯಾಗೋರ್ ಸರ್ಕಲ್ (ಮಾರುಕಟ್ಟೆ ರಸ್ತೆ- ಬ್ಯೂಗಲ್ರಾಕ್ ರಸ್ತೆ ಜಂಕ್ಷನ್)ನಲ್ಲಿ ಬಲತಿರುವು ಪಡೆದು ಗಾಂಧಿಬಜಾರ್ ಮುಖ್ಯರಸ್ತೆ ಮೂಲಕ ರಾಮಕೃಷ್ಣ ಆಶ್ರಮ ಜಂಕ್ಷನ್, ಸೀತಾರಾಮಯ್ಯ (ಹಯವದನರಾವ್) ರಸ್ತೆ, ಗವಿಪುರಂ ಎಕ್ಸ್ಟೆನ್ಸ್ನ್ 3ನೇ ಅಡ್ಡರಸ್ತೆ, ಮೌಂಟ್ ಜಾಯ್ ರಸ್ತೆಯ ಮೂಲಕ ಹನುಮಂತನಗರ ಕಡೆಗೆ ಹೋಗಬಹುದು.
* ತ್ಯಾಗರಾಜನಗರ, ಬನಶಂಕರಿ,ಎನ್.ಆರ್.ಕಾಲೋನಿ, ಬುಲ್ಟೆಂಪಲ್ ರಸ್ತೆ ಕಡೆಯಿಂದ ಚಾಮರಾಜಪೇಟೆ ಕಡೆಗೆ ಸಾಗುವ ವಾಹನಗಳು ಬುಲ್ ಟೆಂಪಲ್ ರಸ್ತೆಯ ಕಾಮತ್ ಯಾತ್ರಿ ನಿವಾಸ ಜಂಕ್ಷನ್ನಲ್ಲಿ ಎಡತಿರುವು ಪಡೆದು, ಆಶೋಕನಗರ 2ನೇ ಕ್ರಾಸ್ (ಬಿ.ಎಂ.ಎಸ್. ಕಾಲೇಜ್ ಹಾಸ್ಟೆಲ್ ರಸ್ತೆ) ರಸ್ತೆಯಲ್ಲಿ ಸಾಗಿ ಕತ್ರಿಗುಪ್ಪೆ ರಸ್ತೆಯ ಜಂಕ್ಷನ್ನಲ್ಲಿ ಬಲ ತಿರುವು ಪಡೆಯಬೇಕು. ನಂತರ 3ನೇ ಮುಖ್ಯರಸ್ತೆ ಮೂಲಕ ನಾರಾಯಣಸ್ವಾಮಿ ಸರ್ಕಲ್ನಲ್ಲಿ ಕೆ.ಜಿ. ನಗರ ಮುಖ್ಯರಸ್ತೆ ಅಥವಾ ಸೀತಾರಾಮಯ್ಯ (ಹಯವದನರಾವ್) ರಸ್ತೆಯಲ್ಲಿ ಸಾಗಿ ರಾಮಕೃಷ್ಣ ಆಶ್ರಮ ಜಂಕ್ಷನ್ ಮೂಲಕ ಚಾಮರಾಜಪೇಟೆ ತಲುಪುವಂತೆ ಸಂಚಾರಿ ಪೊಲೀಸರು ತಿಳಿಸಿದ್ದಾರೆ.
"ಸಂಚಾರ ಸಲಹೆ/Traffic advisory" pic.twitter.com/4kbwqeOyH4
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) November 22, 2024
ವಾಹನಗಳ ಪಾರ್ಕಿಂಗ್ ವ್ಯವಸ್ಥೆ
ಎಪಿಎಸ್ ಕಾಲೇಜು ಆಟದ ಮೈದಾನದಲ್ಲಿ ಕಡಲೆಕಾಯಿ ಪರಿಷೆಗೆ ಬರುವ ವಾಹನ ಸವಾರರಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
ಪಿಕ್ ಅಪ್ ಮತ್ತು ಡ್ರಾಪ್ ಸ್ಥಳ
* ರಾಮಕೃಷ್ಣ ಆಶ್ರಮ
* ರಂಗರಾವ್ ಜಂಕ್ಷನ್
* ನಾರಾಯಣಸ್ವಾಮಿ ವೃತ್ತ
* ಎಪಿಎಸ್ ಕಾಲೇಜು
* ಗಾಂಧಿ ಬಜಾರ್ ವೃತ್ತ
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications