ಮಾರ್ಗ ಬದಲಾವಣೆ: ಹಳೆ ಮದ್ರಾಸ್ ರಸ್ತೆ ಬಳಸುವ ಪ್ರಯಾಣಿಕರು ಗಮನಿಸಿ
ಬೆಂಗಳೂರು, ನ.14: ಬೆಂಗಳೂರಿನಲ್ಲಿ ವೈಟ್ ಟಾಪಿಂಗ್ ಕೆಲಸಗಳ ಕಾರಣ ಆಗಾಗ ಸಂಚಾರಿ ಮಾರ್ಗ ಬದಲಾವಣೆಯಾಗುತ್ತಲೆ ಇದೆ. ವಾಹನ ಪ್ರಯಾಣಿಕರು ಈ ಬಗ್ಗೆ ಮಾಹಿತಿ ಪಡೆಯುವುದು ಕೂಡ ಅಷ್ಟೇ ಮುಖ್ಯ. ಈಗ ಹಳೆ ಮದ್ರಾಸ್ ರಸ್ತೆಯನ್ನು ಬಳಸುವ ಪ್ರಯಾಣಿಕರು ಸಂಚಾರಿ ಮಾರ್ಗ ಬದಲಾವಣೆ ಬಗ್ಗೆ ತಿಳಿದುಕೊಳ್ಳಬೇಕಿದೆ.
ಹಳೆ ಮದ್ರಾಸ್ ರಸ್ತೆಯ ಒಂದು ಭಾಗದಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿರುವುದರಿಂದ ಹಳೆ ಮದ್ರಾಸ್ ರಸ್ತೆಯಿಂದ ಬೆಂಗಳೂರಿನ ಇಂದಿರಾನಗರಕ್ಕೆ ವಾಹನಗಳನ್ನು ಚಲಾಯಿಸುವ ಪ್ರಯಾಣಿಕರಿಗೆ ಬೆಂಗಳೂರು ಸಂಚಾರಿ ಪೊಲೀಸರು ಬುಧವಾರದಂದು ಸಲಹೆ ನೀಡಿದ್ದಾರೆ.
ಇಂದಿರಾನಗರ, ಹಲಸೂರು ಮತ್ತು ಜೀವನ್ ಭೀಮಾ ನಗರ ಸೇರಿದಂತೆ ಪೂರ್ವ ಬೆಂಗಳೂರು ಭಾಗಗಳಲ್ಲಿ ಸಂಚಾರ ದಟ್ಟಣೆಯಾಗುವ ಕುರಿತು ಪ್ರಯಾಣಿಕರಿಗೆ ಎಚ್ಚರಿಕೆ ನೀಡಲಾಗಿದೆ.
"ದಿನಾಂಕ 16.11.2022 ರಿಂದ ಹಲಸೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಹಳೇ ಮದ್ರಾಸ್ ರಸ್ತೆಯ ಆಂಜನೇಯ ಜಂಕ್ಷನ್ ನಿಂದ ಇಂದಿರಾನಗರ 100 ಅಡಿ ರಸ್ತೆಯವರೆಗೆ ರಸ್ತೆಯ ಬಲಭಾಗದ ಪಥದಲ್ಲಿ ಬಿಬಿಎಂಪಿ ವತಿಯಿಂದ ವೈಟ್ ಟಾಪಿಂಗ್ ಕಾಮಗಾರಿ ಕೈಗೊಳ್ಳುವುದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಈ ಪರ್ಯಾಯ ಸಂಚಾರ ವ್ಯವಸ್ಥೆಯನ್ನು ಕಲ್ಪಿಸಲಾಗಿರುತ್ತದೆ" ಎಂದು ಬೆಂಗಳೂರು ಸಂಚಾರಿ ಪೊಲೀಸರು ಸೂಚನೆ ನೀಡಿದ್ದಾರೆ.
ಹಲಸೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಹಳೇ ಮದ್ರಾಸ್ ರಸ್ತೆ ಲಕ್ಷ್ಮೀಪುರಂ ಸ್ಮಶಾನ (ಆಂಜನೇಯ ಜಂಕ್ಷನ್) ನಿಂದ ಇಂದಿರಾನಗರ 100 ಅಡಿ ರಸ್ತೆಯಲ್ಲಿ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ.

ಕೆ.ಆರ್.ಪುರ, ಮಹದೇವಪುರ ಮತ್ತು ವೈಟ್ ಫೀಲ್ಡ್ ಕಡೆಯಿಂದ ಹಳೆ ಮದ್ರಾಸ್ ರಸ್ತೆಯ ಮೂಲಕ ಆಂಜನೇಯ ಜಂಕ್ಷನ್ ನಿರ್ಬಂಧಿಸಲಾಗಿರುತ್ತದೆ. ಕಡೆಗೆ ಸಂಚರಿಸುವ ವಾಹನಗಳ ಮಾರ್ಗವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ.
ಇನ್ನು ಭಾರಿ ವಾಹನಗಳು ಕೆ.ಎಸ್.ಆರ್.ಟಿ.ಸಿ, ಬಿ.ಎಂ.ಟಿ.ಸಿ ಮತ್ತು ಖಾಸಗಿ ಬಸ್ಗಳು ಎನ್.ಜಿ.ಇ.ಎಫ್ ಜಂಕ್ಷನ್ನಲ್ಲಿ ಕಡ್ಡಾಯ ಎಡ ತಿರುವು ಪಡೆದು - ಸುರಂಜನ್ ದಾಸ್ ರಸ್ತೆ ಮೂಲಕ ಸಂಚರಿಸಿ ಹಳೇ ವಿಮಾನ ನಿಲ್ದಾಣ ರಸ್ತೆ ಮೂಲಕ ನಗರದ ಕಡೆಗೆ ಸಂಚರಿಸಬೇಕು.
ಇತರೆ ವಾಹನಗಳು ಇಂದಿರಾನಗರ 80 ಅಡಿ ರಸ್ತೆ ಜಂಕ್ಷನ್ ಅಥವಾ ಇಂದಿರಾನಗರ 100 ಅಡಿ ರಸ್ತೆ ಜಂಕ್ಷನ್ನಲ್ಲಿ ಎಡ ತಿರುವು ಪಡೆದು ಬಿ.ಎಂ.ಶ್ರೀ ಜಂಕ್ಷನ್ ಮೂಲಕ ಸಿ.ಎಂ.ಹೆಚ್ ರಸ್ತೆ - ಶಾಂತಿಸಾಗರ್ ಜಂಕ್ಷನ್ - ಆದರ್ಶ ಜಂಕ್ಷನ್ ಮೂಲಕ ನಗರದ ಕಡೆಗೆ ಸಂಚರಿಸಬೇಕು.
ವೈಟ್ ಟಾಪಿಂಗ್ ಕಾಮಗಾರಿಯಿಂದ ಪೂರ್ವ ಬೆಂಗಳೂರಿನ ಇಂದಿರಾನಗರ, ಹಲಸೂರು ಮತ್ತು ಜೀವನ್ ಭೀಮಾ ನಗರ ಟ್ರಾಫಿಕ್ ಪೊಲೀಸ್ ವ್ಯಾಪ್ತಿಯ ಸಿಎಂಎಚ್ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ನಿರೀಕ್ಷಿಸಲಾಗಿದೆ.
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್












Click it and Unblock the Notifications