Bengaluru Traffic Advisory: ಬೆಂಗಳೂರಿನ ಪ್ರಮುಖ ಮಾರ್ಗಗಳಲ್ಲಿ ಡಿ.22ರಿಂದ ಸಂಚಾರ ಮಾರ್ಗ ಬದಲಾವಣೆ
ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಇದೀಗ ಟ್ರಾಫಿಕ್ ಜಾಮ್ ಕಂಟ್ರೋಲ್ ಮಾಡುವುದಕ್ಕೆ ಮತ್ತೊಂದು ಪ್ರಮುಖ ನಿರ್ಧಾರವನ್ನು ಬೆಂಗಳೂರು ಪೊಲೀಸರು ತೆಗೆದುಕೊಂಡಿದ್ದಾರೆ.
ಬೆಂಗಳೂರಿನ ಪ್ರಮುಖ ಸೇತುವೆ ಜಂಕ್ಷನ್ಗಳಲ್ಲಿ ಒಂದಾಗಿರುವ ಮಾರತ್ತಹಳ್ಳಿ ಸೇತುವೆ ಜಂಕ್ಷನ್ನಲ್ಲಿ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಡಿಸೆಂಬರ್ 22 ರಿಂದ HAL ವಿಮಾನ ನಿಲ್ದಾಣ ಸಂಚಾರ ಪೊಲೀಸ್ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ಸಂಚಾರ ನಿರ್ಬಂಧಗಳನ್ನು ಘೋಷಿಸಲಾಗಿದೆ. ಬೆಂಗಳೂರಿನ ವಿವಿಧ ಭಾಗದಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.

ಇಲ್ಲಿನ ದೇವರಬೀಸನಹಳ್ಳಿ ಮತ್ತು ಕಾಡುಬೀಸನಹಳ್ಳಿಯಿಂದ ಕೆಎಲ್ಎಂ ಸರ್ವಿಸ್ ರಸ್ತೆಯ ಮೂಲಕ ಬರುವ ವಾಹನಗಳು ಇನ್ಮುಂದೆ ವರ್ತೂರು ಮತ್ತು ವೈಟ್ಫೀಲ್ಡ್ ಕಡೆಗೆ ಬಲಕ್ಕೆ ತಿರುವು ತೆಗೆದುಕೊಳ್ಳುವುದಕ್ಕೆ ಅವಕಾಶ ಇರುವುದಿಲ್ಲ ಎಂದು ಬೆಂಗಳೂರು ಸಂಚಾರ ಪೊಲೀಸರು ಸೋಷಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ.
ಈ ಭಾಗದಲ್ಲಿ ಟ್ರಾಫಿಕ್ ಜಾಮ್ ಕಂಟ್ರೋಲ್ ಮಾಡುವ ಉದ್ದೇಶದಿಂದ ತುಳಸಿ ಥಿಯೇಟರ್ ಜಂಕ್ಷನ್ನಲ್ಲಿರುವ ಮಾರ್ಗವನ್ನು ಮುಚ್ಚಲಾಗುತ್ತದೆ ಮತ್ತು ಮಾರತ್ತಹಳ್ಳಿಯಿಂದ ಬರುವ ವಾಹನಗಳು ದೊಡ್ಡನೆಕ್ಕುಂದು ಜಂಕ್ಷನ್ನಲ್ಲಿ ಯು-ಟರ್ನ್ ತೆಗೆದುಕೊಳ್ಳಲು ಇರುವುದಿಲ್ಲ ಎಂದು ಸಂಚಾರ ಪೂರ್ವ ವಿಭಾಗದ ಡಿಸಿಪಿ ಸಾಹಿಲ್ ಬಾಗ್ಲಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರ್ಬಂಧಿತ ರಸ್ತೆ ಮಾರ್ಗಗಳು
1. ದೇವರಬೀಸನಹಳ್ಳಿ, ಕಾಡುಬೀಸನಹಳ್ಳಿ ಕಡೆಯಿಂದ ಕೆಎಂಎಲ್ ಮಾಲ್ ಸರ್ವಿಸ್ ರಸ್ತೆಯ ಮೂಲಕ ಸಂಚರಿಸಿ ಮಾರತ್ತಹಳ್ಳಿ ಸೇತುವೆ ಜಂಕ್ಷನ್ ಬಳಿ ಬಲಕ್ಕೆ ತಿರುವು ತೆಗೆದುಕೊಂಡು ವರ್ತೂರು ಮತ್ತು ವೈಟ್ಫೀಲ್ಡ್ ಕಡೆಗೆ ಹೋಗುವ ವಾಹನಗಳ ಸಂಚಾರವು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
2. ಇನ್ನು ಮಾರತ್ತಹಳ್ಳಿ ಕಡೆಯಿಂದ ಬರುವ ವಾಹನಗಳು ದೊಡ್ಡನೆಕ್ಕುಂದಿ ಜಂಕ್ಷನ್ನಲ್ಲಿ ಯು - ಟರ್ನ್ ತೆಗೆದುಕೊಳ್ಳುವುದನ್ನು ನಿರ್ಬಂಧಿಸಲಾಗಿದೆ.
ಪರ್ಯಾಯ ಸಂಚಾರ ಮಾರ್ಗಗಳು
1. ದೇವರಬೀಸನಹಳ್ಳಿ, ಕಾಡುಬೀಸನಹಳ್ಳಿ ಕಡೆಯಿಂದ ವರ್ತೂರು ಮತ್ತು ಕುಂದಲಹಳ್ಳಿ ಮಾರ್ಗದ ಕಡೆಗೆ ಸಂಚರಿಸುವ ವಾಹನಗಳು ಹೊರವರ್ತುಲ ರಸ್ತೆಯ ಮೂಲಕ ಸಂಚರಿಸಿ, ಕಾರ್ತಿಕ್ ನಗರ ಜಂಕ್ಷನ್ ಬಳಿ ಯು - ಟರ್ನ್ ತೆಗೆದುಕೊಳ್ಳಬಹುದು. ಕಲಾಮಂದಿರ ಸರ್ವಿಸ್ ರಸ್ತೆಯ ಮೂಲಕ ವರ್ತೂರು ಮುಖ್ಯರಸ್ತೆ ತಲುಪಿ, ವೈಟ್ಫೀಲ್ಡ್ ಮತ್ತು ವರ್ತೂರು ಕಡೆಗೆ ಸಂಚರಿಸಲು ಅವಕಾಶ ಇರಲಿದೆ.
2. ಇನ್ನು ಮಾರತ್ತಹಳ್ಳಿ, ಕುಂದಲಹಳ್ಳಿ ಕಡೆಯಿಂದ ಕೆ.ಆರ್. ಪುರಕ್ಕೆ (ಕೃಷ್ಣರಾಜಪುರ) ಮಾರ್ಗವಾಗಿ ಹೋಗುವ ವಾಹನಗಳು ದೊಡ್ಡನೆಕ್ಕುಂದಿ ಮುಖ್ಯರಸ್ತೆಯ ಜಂಕ್ಷನ್ನಲ್ಲಿ ಬಲಕ್ಕೆ ತಿರುವು ಪಡೆದು ದೊಡ್ಡನೆಕ್ಕುಂದಿ ಮುಖ್ಯರಸ್ತೆಯ ಮೂಲಕ ಕಾರ್ತಿಕ್ ನಗರ ಜಂಕ್ಷನ್ ಮಾರ್ಗವಾಗಿ ಸಾಗಿ ಹೊರ ವರ್ತುಲ ರಸ್ತೆಯಲ್ಲಿ ಹೋಗುವುದಕ್ಕೆ ಅವಕಾಶ ಇರಲಿದೆ.
#ಸಂಚಾರಸಲಹೆ#TrafficAdvisory @DgpKarnataka @KarnatakaCops @CPBlr @Jointcptraffic @BlrCityPolice @blrcitytraffic @acpwfieldtrf @acpeasttraffic @mahadevapuratrf @halairporttrfps @KRPURATRAFFIC @wftrps @bwaditrafficps @ftowntrfps @jbnagartrfps @halasoortrfps @kghallitrfps… pic.twitter.com/yp3YvVjSv1
— DCP Traffic East ಉಪ ಪೊಲೀಸ್ ಆಯುಕ್ತರು ಸಂಚಾರ ಪೂರ್ವ (@DCPTrEastBCP) December 16, 2025
ಜನರಿಂದ ಮಿಶ್ರ ಪ್ರತಿಕ್ರಿಯೆ
ಇನ್ನು ಬೆಂಗಳೂರು ಸಂಚಾರ ಪೊಲೀಸರ ಈ ಸಂಚಾರ ಮಾರ್ಗ ಬದಲಾವಣೆಗೆ ಸಾರ್ವಜನಿಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಾರತ್ತಹಳ್ಳಿ ಸೇತುವೆಯಿಂದ ಮಾರತ್ತಹಳ್ಳಿ ಮಾರುಕಟ್ಟೆಯವರೆಗೆ ಪಾರ್ಕಿಂಗ್ ಸ್ಥಳವಿಲ್ಲ ಎಂದು ಖಚಿತಪಡಿಸಿಕೊಳ್ಳಿ. ಈ ಪ್ರದೇಶವು ಬಾಟಲ್ ನೆಕ್ ಆಗಿದೆ ಎಂದು ಕೆಲವರು ಹೇಳಿದ್ದಾರೆ.
ಧನ್ಯವಾದಗಳು ಈ ಭಾಗದಲ್ಲಿ ಉಂಟಾಗಿದ್ದ ಗೊಂದಲಗಳಿಗೆ ಕೊನೆಗೂ ತೆರೆ ಬೀಳುವ ಮುನ್ಸೂಚನೆ ಸಿಕ್ಕಂತಾಗಿದೆ. ಇನ್ನು ದೊಡ್ಡನೆಕ್ಕುಂದಿ ಮುಖ್ಯರಸ್ತೆ ಒನ್ ವೇ ಆಗಿರಬೇಕು, ಇಲ್ಲದಿದ್ದರೆ ಇಸ್ರೋ ಯು ಟರ್ನ್ನಲ್ಲಿ ಅವ್ಯವಸ್ಥೆ ಸೃಷ್ಟಿಯಾಗಬಹುದು ಎಂದು ಕೆಲವು ನೆಟ್ಟಿಗರು ರಿಯಾಕ್ಟ್ ಮಾಡಿದ್ದಾರೆ.
-
Swachh Survey: ಬೆಂಗಳೂರು ಸ್ವಚ್ಛ ಸರ್ವೇಕ್ಷಣ 2025-26: 38 ಉದ್ಯಾನವನ, 11 ಮೈದಾನಗಳ ಸ್ವಚ್ಛತೆ: ರಾಜೇಂದ್ರ ಚೋಳನ್ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ












Click it and Unblock the Notifications