Bengaluru Traffic: ಬೇರೆ ದೇಶಗಳಿಗಿಂತ ಬೆಂಗಳೂರು ಟ್ರಾಫಿಕ್ ವ್ಯವಸ್ಥೆ ಹೇಗಿದೆ!: ಜಿ.ಪರಮೇಶ್ವರ ಹೇಳಿದ್ದೇನು?
ಬೆಂಗಳೂರು, ಅಕ್ಟೋಬರ್ 19: ಸಿಲಿಕಾನ್ ಸಿಟಿ ಬೆಂಗಳೂರು ನಗರವು ಅನೇಕ ವಿಚಾರಗಳ ಜೊತೆಗೆ ಇಲ್ಲಿ ಟ್ರಾಫಿಕ್ ವಿಷಯವಾಗಿಯು ಆಗಾಗ ಮುನ್ನೆಲೆಗೆ ಬರುತ್ತದೆ. ವಿಶ್ವದ ಇತರ ನಗರಗಳ ಪೈಕಿ ಬೆಂಗಳೂರಿನ ಟ್ರಾಫಿಕ್ ದಟ್ಟಣೆಗೆ ಅಗ್ರಸ್ಥಾನ ಇದೆ. ರಸ್ತೆಗುಂಡಿ ಜೊತೆಗೆ ಇಲ್ಲಿನ ಸಂಚಾರ ಸಮಸ್ಯೆಗಳಿಂದಲೂ ಸುದ್ದಿಯಾಗುವ ಬೆಂಗಳೂರಿನ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ ಅವರು ಪ್ರತಿಕ್ರಿಯಿಸಿದ್ದಾರೆ.
ವಿಧಾನಸೌಧದ ಮುಂಭಾಗದಲ್ಲಿ ನಡೆದ ಬೆಂಗಳೂರು ನಗರ ಸಂಚಾರ ಪೊಲೀಸ್ ಹಾಗೂ ಹೋಂಡಾ ಇಂಡಿಯಾ ಫೌಂಡೇಶನ್ ರವರ ಸಹಯೋಗದಲ್ಲಿ 50 ಸಂಚಾರ ಗಸ್ತು ವಾಹನಗಳನ್ನು ಹಸ್ತಾಂತರಿಸಿ ಅವರು ಮಾತನಾಡಿದರು. ದೇಶದ ಮುಂಬೈ, ಕೋಲ್ಕತ್ತಾ, ದೆಹಲಿ ಮಹಾನಗರಗಳಿಗೆ ಹೋಲಿಸಿದರೆ ಬೆಂಗಳೂರು ನಗರದಲ್ಲಿ ಸಂಚಾರ ಸುವ್ಯವಸ್ಥೆ ಉತ್ತಮ ಸ್ಥಿತಿಯಲ್ಲಿದೆ ಎಂದು ಅವರು ತಿಳಿಸಿದರು.

ದೊಡ್ಡ ಕಂಪನಿಗಳು, ಕೈಗಾರಿಕೆಗಳು ಸಾರ್ವಜನಿಕರಿಗೆ ಉಪಯೋಗ ಅಗುವ ಕೆಲಸ ಮಾಡಬೇಕು. ತಮ್ಮ ಲಾಭದಲ್ಲಿ ಶೇಕಡಾ 2ರಷ್ಟು ಖರ್ಚು ಮಾಡಬೇಕು ಎಂಬ ನಿಯಮ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಅನೇಕ ಕಂಪನಿಗಳು ಕೆಲಸ ಮಾಡುತ್ತಿವೆ. ಹೋಂಡಾ ಸಂಸ್ಥೆಯವರು ಬೆಂಗಳೂರು ನಗರ ಸಂಚಾರ ಪೊಲೀಸರಿಗೆ 1.30 ಕೋಟಿ ರೂ. ವೆಚ್ಚದಲ್ಲಿ 50 ಗಸ್ತು ವಾಹನಗಳನ್ನು ನೀಡುವ ಮೂಲಕ ತಮ್ಮ ಬದ್ಧತೆಯನ್ನು ತೋರಿದ್ದಾರೆ. ಈ ದ್ವಿಚಕ್ರ ವಾಹನಗಳು ಟ್ರಾಫಿಕ್ ನಿಯಂತ್ರಿಸಲು ಪೊಲೀಸರಿಗೆ ಉಪಯೋಗ ಆಗುತ್ತವೆ ಎಂದು ಹೇಳಿದರು.
ಸರ್ಕಾರವು ಗಮನದಲ್ಲಿಟ್ಟುಕೊಂಡು ಪ್ರತಿವರ್ಷ ನೂರಾರು ವಾಹನಗಳನ್ನು ಖರೀದಿಸಿ, ನೀಡಲಾಗುತ್ತದೆ. ಈ ವರ್ಷ 500 ವಾಹನಗಳನ್ನು ಖರೀದಿಸಲಾಗಿದೆ. ಈ ಹಿಂದೆ ಪೊಲೀಸ್ ಅಧಿಕಾರಿಗಳ ನಿಯೋಗವನ್ನು ಲಂಡನ್ಗೆ ಕರೆದೊಯ್ಯಲಾಗಿತ್ತು. ಲಂಡನ್ ಮೆಟ್ರೋ ಪೊಲೀಸರು ಕಮಾಂಡ್ ಸೆಂಟರ್ನ ಕಾರ್ಯವೈಖರಿಯನ್ನು ಪರಿಚಯಿಸಿದ್ದರು. ಅಪಘಾತ ಸೇರಿದಂತೆ ಯಾವುದೇ ತುರ್ತು ಸಂದರ್ಭಗಳಲ್ಲಿ ಸ್ಪಂದಿಸಲು ಅನುಕೂಲವಾಗುವಂತೆ ನಿರ್ಮಿಸಿದ್ದರು.
ಬೆಂಗಳೂರಲ್ಲಿ ಕಮಾಂಡ್ ಸೆಂಟರ್
ಬೆಂಗಳೂರು ನಗರದಲ್ಲಿ 26 ಕೋಟಿ ರೂಪಾಯಿ ಖರ್ಚು ಮಾಡಿ ಬೆಂಗಳೂರು ನಗರದಲ್ಲಿ ಕಮಾಂಡ್ ಸೆಂಟರ್ ನಿರ್ಮಿಸಲಾಗಿದೆ. ಸಾರ್ವಜನಿಕರ ಯಾವುದೇ ರೀತಿಯ ತುರ್ತು ಕರೆಗಳಿಗೆ ಪೊಲೀಸರು 9 ನಿಮಿಷದಲ್ಲಿ ಸ್ಪಂದಿಸುತ್ತಾರೆ ಎಂದು ಅವರು ವಿವರಿಸಿದರು.
ಬೆಂಗಳೂರು ನಗರ ಸಂಚಾರ ಪೊಲೀಸರು 'ಬಿಟಿಪಿ ಅಸ್ತ್ರಂ ಇ-ಆಕ್ಸಿಡೆಂಟ್' ಹೊಸ ಆವಿಷ್ಕಾರವನ್ನು ಪರಿಚಯಿಯಿಸಲಾಗಿದೆ.
ಅಪಘಾತದ ಸಂದರ್ಭದಲ್ಲಿ ಯಾರು ಸ್ಪಂದಿಸುವುದಿಲ್ಲ. ಅಲ್ಲದೇ, ವಿಮೆ ಪಡೆದುಕೊಳ್ಳಲು ಕಷ್ಟವಾಗುತ್ತಿದೆ. ಇದರ ಒತ್ತಡವನ್ನು ಕಡಿಮೆ ಮಾಡಲು ಬಿಟಿಪಿ ಅಸ್ತ್ರಂ ಆ್ಯಪ್ನಲ್ಲಿ ಇ-ಆಕ್ಸಿಡೆಂಟ್ ಮೂಲಕ ರಿಪೋರ್ಟ್ ಮಾಡಿದರೆ ನೆರವಾಗುತ್ತದೆ ಎಂದರು.
ಡ್ರಗ್ಸ್ ದಂಧೆಯನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಡ್ರಗ್ಸ್ ಹಿಡಿಯುವ ಕೆಲಸ ಪರಿಣಾಮಕಾರಿಯಾಗಿ ಆಗುತ್ತಿದೆ. ಒಂದೇ ಪ್ರಕರಣದಲ್ಲಿ 24 ಕೋಟಿ ರೂ. ಮೌಲ್ಯದ ಡ್ರಗ್ಸ್ ಪತ್ತೆ ಹಚ್ಚಿದ್ದಾರೆ. ನಮ್ಮ ಪೊಲೀಸರು ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಮತ್ತು ಯುವಕರಿಗೆ ಡ್ರಗ್ಸ್ ದುಷ್ಪರಿಣಾಮದ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ನಿರಂತರವಾಗಿ ಕೆಲಸ ಮಾಡಲಾಗುತ್ತಿದೆ. ರಸ್ತೆ ಗುಂಡಿ ವಿಚಾರದಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ ಎಂದರು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications