ಬೆಂಗಳೂರಿಗರಿಗೆ ಟ್ರಾಫಿಕ್ ಶಾಪ, ವರ್ಷಕ್ಕೆ 7 ಲಕ್ಷ ಗಂಟೆ ವ್ಯರ್ಥ: ಆರ್ಥಿಕ ಸಮೀಕ್ಷೆಯಲ್ಲಿ ನಗರ ನರಕದ ಉಲ್ಲೇಖ
ಬೆಂಗಳೂರು: ಬೆಂಗಳೂರಿನ ಟ್ರಾಫಿಕ್ ಜಾಮ್ ಸಮಸ್ಯೆಯು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಟ್ರಾಫಿಕ್ ಜಾಮ್ ಸಮಸ್ಯೆಯಿಂದ ಜನ ಹೈರಾಣಾಗಿದ್ದು, ನಿತ್ಯವೂ ವಾಹನ ಸವಾರರು ಪರದಾಡುವ ಪರಿಸ್ಥಿತಿ ಇದೆ. ಇದೀಗ ಬೆಂಗಳೂರು ಟ್ರಾಫಿಕ್ ಜಾಮ್ ಸಮಸ್ಯೆಯ ಬಗ್ಗೆ ಮತ್ತೊಂದು ಆಘಾತಕಾರಿ ವರದಿ ಬಂದಿದೆ.
ಕೇಂದ್ರ ಸರ್ಕಾರವು ಮಂಡಿಸಿರುವ ಆರ್ಥಿಕ ಸಮೀಕ್ಷೆಯಲ್ಲಿ ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ವಿಶೇಷ ಉಲ್ಲೇಖ ಮಾಡಲಾಗಿದೆ. ಹೆಚ್ಚುತ್ತಿರುವ ವಾಹನಗಳ ಸಂಖ್ಯೆ, ಮೂಲಸೌಕರ್ಯ ಕೊರತೆ ಹಾಗೂ ಜನಸಂಖ್ಯೆ ಹೆಚ್ಚಳವೂ ಸೇರಿದಂತೆ ಹಲವು ಕಾರಣಗಳಿಗೆ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಗಂಭೀರ ಸಮಸ್ಯೆಯಾಗಿದ್ದು, ಇದು ಉತ್ಪಾದಕತೆ, ಆರ್ಥಿಕ ಬೆಳವಣಿಗೆ ಹಾಗೂ ನಾಗರಿಕರ ಜೀವನಮಟ್ಟದ ಮೇಲೆ ನೇರ ಪರಿಣಾಮ ಬೀರುತ್ತಿದೆ ಎಂದು ಸಮೀಕ್ಷೆಯಲ್ಲಿ ಉಲ್ಲೇಖ ಮಾಡಲಾಗಿದೆ. ಈಚೆಗೆ ವಿಶ್ವದಲ್ಲೇ ಹೆಚ್ಚು ಟ್ರಾಫಿಕ್ ಇರುವ ನಗರಗಳಲ್ಲಿ ಬೆಂಗಳೂರು ಎರಡನೇ ಸ್ಥಾನ ಪಡೆದುಕೊಂಡಿತ್ತು. ನೆದರ್ಲೆಂಡ್ಸ್ ಮೂಲದ ಟಾಮ್ಟಾಮ್ ಎನ್ನುವ ಸಂಸ್ಥೆಯು ಬಿಡುಗಡೆ ಮಾಡಿರುವ 2025ರ ಸಂಚಾರ ಸೂಚ್ಯಂಕ (Traffic Index) ವರದಿಯಲ್ಲಿ ಬೆಂಗಳೂರು ಟ್ರಾಫಿಕ್ ಜಾಮ್ ಸಮಸ್ಯೆಯ ಬಗ್ಗೆ ಉಲ್ಲೇಖ ಮಾಡಲಾಗಿತ್ತು.

ಇದೀಗ ಕೇಂದ್ರ ಸರ್ಕಾರವು ಮಂಡಿಸಿರುವ ಆರ್ಥಿಕ ಸಮೀಕ್ಷೆಯಲ್ಲಿ ಬೆಂಗಳೂರು ಟ್ರಾಫಿಕ್ ಜಾಮ್ ಸಮಸ್ಯೆಯ ಬಗ್ಗೆ ಉಲ್ಲೇಖಿಸಲಾಗಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಹವ್ಯಾಸಿ ಬರಹಗಾರ ಕೃಷ್ಣಭಟ್ ಅವರ ಅಭಿಪ್ರಾಯ ಇಲ್ಲಿದೆ.
ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಕೇಂದ್ರದ ಆರ್ಥಿಕ ಸಮೀಕ್ಷೆ ವರದಿಯ ಮೇಲೆ ಕಣ್ಣಾಡಿಸಿದಾಗ ಕಂಡುಬಂದ ಕೆಲವು ಅಂಶಗಳು:
1. ಬೆಂಗಳೂರಿನ ಸರಾಸರಿ ಪ್ರತಿ ವ್ಯಕ್ತಿ ವರ್ಷಕ್ಕೆ 117 ತಾಸು ಟ್ರಾಫಿಕ್ನಿಂದಾಗಿ ರಸ್ತೆಯಲ್ಲಿ ಕಳೆಯುತ್ತಾರೆ.
2. ಟ್ರಾಫಿಕ್ನಿಂದಾಗಿ ಬೆಂಗಳೂರಿನ ಜನರ ಒಟ್ಟು 7.07 ಲಕ್ಷ ಪ್ರೊಡಕ್ಟಿವ್ ಗಂಟೆಗಳು ನಷ್ಟವಾಗುತ್ತಿವೆ. ಇದರ ವೆಚ್ಚ ಅಂದಾಜು 11.7 ಬಿಲಿಯನ್ ರೂಪಾಯಿ. ಅಂದರೆ, ಇವರು ಒಂದು ವೇಳೆ ಟ್ರಾಫಿಕ್ನಲ್ಲಿ ನಿಲ್ಲದೇ ಕೆಲಸ ಮಾಡಿರುತ್ತಿದ್ದರೆ ಇಷ್ಟು ಮೌಲ್ಯದ ಉತ್ಪನ್ನ ತಯಾರಿಸುತ್ತಿದ್ದರು.
3. ಬೆಂಗಳೂರು ಇಷ್ಟು ದೊಡ್ಡ ತಂತ್ರಜ್ಞಾನದ ಕೇಂದ್ರವಾದರೂ ದೆಹಲಿ ಹಾಗೂ ಮುಂಬೈಗೆ ಹೋಲಿಸಿದರೆ ಮೂಲಸೌಕರ್ಯದಲ್ಲಿ ಅಗತ್ಯವಿದ್ದಷ್ಟು ಹೂಡಿಕೆ ಮಾಡಲಿಲ್ಲ ಹಾಗೂ ತಂತ್ರಜ್ಞಾನ ಕಂಪನಿಗಳು ಬೆಂಗಳೂರಿನ ಮೇಲೆ ಹೆಚ್ಚು ಕೇಂದ್ರೀಕರಿಸಿವೆ.
4. ಗೃಹಲಕ್ಷ್ಮಿ ಸ್ಕೀಮ್ನಿಂದಾಗಿ ತಕ್ಷಣಕ್ಕೆ ಜನರಿಗೆ ಆರ್ಥಿಕ ನೆರವು ಸಿಗುತ್ತದೆಯಾದರೂ, ಅಗತ್ಯ ಮೂಲಸೌಕರ್ಯ ಹೂಡಿಕೆಯ ಮೇಲೆ ಪರಿಣಾಮ ಬೀರುತ್ತಿದೆ. ಕುಟುಂಬದ ಆದಾಯದ 11 ರಿಂದ 87 ಶೇ. ವರೆಗೆ ಸರ್ಕಾರ ಉಚಿತ ಹಣ ವಿತರಣೆ ಮಾಡುತ್ತಿದೆ.
5. ಸಂಬಳ ಹಾಗೂ ಸಬ್ಸಿಡಿಗಳನ್ನೆಲ್ಲ ಇತರೆ ವೆಚ್ಚಗಳ ಅಡಿಯಲ್ಲಿ ಸೇರಿಸಿದ್ದರಿಂದ ಆಯವ್ಯಯದಲ್ಲಿ ಪಾರದರ್ಶಕತೆ ಇಲ್ಲ.
6. ಆರೆಂಜ್ ಎಕಾನಮಿ ಬೆಳವಣಿಗೆಯಲ್ಲಿ ಅಡ್ಡಿ ಇದೆ. ಅಂದರೆ, ದೊಡ್ಡ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ ಮಾಡಲು ಸ್ಥಳವಿಲ್ಲ. ವಿದೇಶಿ ಕಲಾಕಾರರಿಗೆ ಹಣ ಪಾವತಿ ಮಾಡುವುದಕ್ಕೆ ವಿಪರೀತ ನಿರ್ಬಂಧಗಳಿವೆ.
7. ಎಥೆನಾಲ್ಗೆ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಿರುವುದರಿಂದ ಮುಸುಕಿನ ಜೋಳ ಬೆಳೆ ಹೆಚ್ಚಳವಾಗಿದ್ದು, ಇತರ ಬೆಳೆ ಕಡಿಮೆಯಾಗಿದೆ. ಇದರಿಂದ ರಾಜ್ಯದ ಆಹಾರ ಭದ್ರತೆಗೆ ಅಡ್ಡಿಯಾಗಿದೆ.
8. ನಗರದಲ್ಲಿ ಬಳಸಿದ ನೀರನ್ನು ಸಂಸ್ಕರಿಸಿ ಮರುಬಳಕೆ ಮಾಡುವ ವ್ಯವಸ್ಥೆ ಪರಿಣಾಮಕಾರಿಯಾಗಿ ಜಾರಿಯಾಗಿಲ್ಲ. ಇದರಿಂದ, ಹೊಸ ಸಿಹಿ ನೀರಿಗೆ ಬೇಡಿಕೆ ಹೆಚ್ಚುತ್ತಿದೆ.
-
Bengaluru Second Airport: 5 ತಿಂಗಳಲ್ಲಿ ಬೆಂಗಳೂರು 2ನೇ ವಿಮಾನ ನಿಲ್ದಾಣ ಸ್ಥಳ ಫೈನಲ್: 3 ತಾಣಗಳಿಗೆ ಕಾರ್ಯಸಾಧ್ಯತಾ ವರದಿ -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Bengaluru Rent: ಬೆಂಗಳೂರು ಬಾಡಿಗೆ, ಅಡ್ವಾನ್ಸ್ ದುಬಾರಿ: ದೆಹಲಿ, ಮುಂಬೈನಲ್ಲಿ ಇಷ್ಟಿಲ್ಲ, ನಾರ್ಥಿ ಯುವತಿ ವೈರಲ್ ವಿಡಿಯೋ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
IPL 2026: ಬೆಂಗಳೂರು ಕ್ರಿಕೆಟ್ ಪ್ರೇಮಿಗಳೇ ಗಮನಿಸಿ, ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗುವ ಮುನ್ನ ಈ ಹೊಸ ರೂಲ್ಸ್ ಗೊತ್ತಿರಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications