ಬೆಂಗಳೂರಿನಲ್ಲಿ ಬ್ಯಾಂಕ್ ಆಫ್ ಅಮೆರಿಕಾ ನೌಕರನ ಹೋಂಡಾ ಆಕ್ವೀವಾ ಮೇಲಿದೆ ಒಂದಲ್ಲ, ಎರಡಲ್ಲ 2,00,000 ರೂಪಾಯಿಗೂ ಅಧಿಕ ದಂಡ
ಬೆಂಗಳೂರು, ಜನವರಿ 29: ಸಾಮಾನ್ಯವಾಗಿ ದ್ವಿಚಕ್ರ ವಾಹನ ಸವಾರರು ಸಿಗ್ನಲ್ ಜಂಪ್, ಹೆಲ್ಮೆಟ್ ಧರಿಸದೇ ಸಂಚರಿಸಿದ ಕಾರಣಕ್ಕೆ ಸಾವಿರ ರೂಪಾಯಿ ಲೆಕ್ಕದಲ್ಲಿ ದಂಡ ಕಟ್ಟಿರುವ ಉದಾಹರಣೆಗಳಿವೆ. ಆದರೆ, ಇದೀಗ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ, ವ್ಯಕ್ತಿಯೋವರ್ನನಿಗೆ ರೂಪಾಯಿ 2 ಲಕ್ಷಕ್ಕೂ ಹೆಚ್ಚು ಮೊತ್ತದ ದಂಡ ಬಿದ್ದಿರುವ ಅಚ್ಚರಿಯ ಘಟನೆ ಬೆಳಕಿಗೆ ಬಂದಿದೆ.
KA04 KJ 9629 ನಂಬರಿನ ಬಿಳಿ ಬಣ್ಣದ ಹೋಂಡಾ ಅಕ್ಟೀವಾ ದ್ವಿಚಕ್ರ ವಾಹನದ ಮೇಲೆ ಒಟ್ಟು 2,13,000 ರೂಪಾಯಿ ದಂಡ ಬಿದ್ದಿದೆ. ಈ ವಾಹನದ ಮಾಲೀಕ ಮೊಹಮ್ಮದ್ ಮುಜಾಮಿಲ್ ಫೈಜಲ್ ಎಂದು ತಿಳಿದುಬಂದಿದೆ. ಈ ಪ್ರಕರಣ ಬೆಳಕಿಗೆ ಬಂದಿರುವ ರೀತಿಯೂ ಗಮನ ಸೆಳೆಯುವಂತಿದೆ.

ಘಟನೆ ಬೆಳಕಿಗೆ ಬಂದಿದ್ದು ಹೇಗೆ?: ಭಾನುವಾರ ರಾತ್ರಿ ಮೊಹಮ್ಮದ್ ಮುಜಾಮಿಲ್ ಅವರು ಫ್ರೇಜರ್ ಟೌನ್ನಲ್ಲಿರುವ ಲೋಕಾ ಮೊಕಾ (Loca Moca) ಎಂಬ ಕೆಫೆಗೆ ಭೇಟಿ ನೀಡಿದ್ದರು. ಅಲ್ಲಿ ಪಕ್ಕದ ಟೇಬಲ್ನಲ್ಲಿ ಕುಳಿತಿದ್ದ ಮಹಿಳೆಯರ ಕಡೆಗೆ ಸಿಗರೇಟ್ ಹೊಗೆ ಬಿಡುತ್ತಾ, ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ಈ ಕುರಿತು ಕೆಫೆ ಸಿಬ್ಬಂದಿ ಎಚ್ಚರಿಕೆ ನೀಡಿದಾಗ, ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ಬೈದು ಗಲಾಟೆ ಮಾಡಿದ್ದಾರೆ. ಅಲ್ಲದೇ, "ಹೊರಗೆ ಬಾ, ನಿನ್ನ ನೋಡಿಕೊಳ್ಳುತ್ತೇನೆ," ಎಂಬ ರೀತಿಯಲ್ಲಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಘಟನೆ ಬಳಿಕ ಕೆಫೆ ಮಾಲಕಿ ನೇತ್ರಾ ಅವರು ಪುಲಿಕೇಶಿನಗರ ಪೊಲೀಸ್ ಠಾಣೆಗೆ ತೆರಳಿ, ಮೊಹಮ್ಮದ್ ಮುಜಾಮಿಲ್ ವಿರುದ್ಧ ಎನ್ಸಿಆರ್ (NCR) ದಾಖಲಿಸಿದ್ದಾರೆ. ಇದಕ್ಕೂ ಮುನ್ನ, ಕೆಫೆ ಮಾಲಕಿ ಆತನ ಹೋಂಡಾ ಅಕ್ಟೀವಾ ಮೇಲಿರುವ ಟ್ರಾಫಿಕ್ ದಂಡದ ವಿವರಗಳನ್ನು ಆನ್ಲೈನ್ನಲ್ಲಿ ಪರಿಶೀಲಿಸಿದಾಗ, ಕೇವಲ ಸಿಗ್ನಲ್ ಜಂಪ್ ಪ್ರಕರಣಗಳಿಂದಲೇ 2,13,000 ರೂಪಾಯಿ ದಂಡ ಬಿದ್ದಿರುವುದು ಬೆಳಕಿಗೆ ಬಂದಿದೆ.
ಸಾರ್ವಜನಿಕರು ಹೇಳೋದೇನು?: ಇಷ್ಟೊಂದು ಭಾರೀ ದಂಡಕ್ಕೆ ಒಳಗಾದ ಮೊಹಮ್ಮದ್ ಮುಜಾಮಿಲ್ ಅವರು ಬೆಂಗಳೂರಿನ ಹಲಸೂರಿನಲ್ಲಿ ಇರುವ ಬ್ಯಾಂಕ್ ಆಫ್ ಅಮೆರಿಕಾ ಸಂಸ್ಥೆಯ ಶಾಖೆಯಲ್ಲಿ ಎಚ್ಆರ್ (HR) ಆಗಿ ಕೆಲಸ ಮಾಡುತ್ತಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಈ ಹಿನ್ನೆಲೆ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, "ಇಂತಹವರಿಗೆ ಹಣದ ಮದ ಹೆಚ್ಚಾಗಿದೆ. ಪೊಲೀಸರು ಸೂಕ್ತ ಕ್ರಮ ಕೈಗೊಂಡು ಕಾನೂನು ಕ್ರಮ ಜರುಗಿಸಬೇಕು," ಎಂದು ಆಗ್ರಹಿಸುತ್ತಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications