ಬೆಂಗಳೂರಿನಲ್ಲಿ ಬ್ಯಾಂಕ್ ಆಫ್ ಅಮೆರಿಕಾ ನೌಕರನ ಹೋಂಡಾ ಆಕ್ವೀವಾ ಮೇಲಿದೆ ಒಂದಲ್ಲ, ಎರಡಲ್ಲ 2,00,000 ರೂಪಾಯಿಗೂ ಅಧಿಕ ದಂಡ
ಬೆಂಗಳೂರು, ಜನವರಿ 29: ಸಾಮಾನ್ಯವಾಗಿ ದ್ವಿಚಕ್ರ ವಾಹನ ಸವಾರರು ಸಿಗ್ನಲ್ ಜಂಪ್, ಹೆಲ್ಮೆಟ್ ಧರಿಸದೇ ಸಂಚರಿಸಿದ ಕಾರಣಕ್ಕೆ ಸಾವಿರ ರೂಪಾಯಿ ಲೆಕ್ಕದಲ್ಲಿ ದಂಡ ಕಟ್ಟಿರುವ ಉದಾಹರಣೆಗಳಿವೆ. ಆದರೆ, ಇದೀಗ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ, ವ್ಯಕ್ತಿಯೋವರ್ನನಿಗೆ ರೂಪಾಯಿ 2 ಲಕ್ಷಕ್ಕೂ ಹೆಚ್ಚು ಮೊತ್ತದ ದಂಡ ಬಿದ್ದಿರುವ ಅಚ್ಚರಿಯ ಘಟನೆ ಬೆಳಕಿಗೆ ಬಂದಿದೆ.
KA04 KJ 9629 ನಂಬರಿನ ಬಿಳಿ ಬಣ್ಣದ ಹೋಂಡಾ ಅಕ್ಟೀವಾ ದ್ವಿಚಕ್ರ ವಾಹನದ ಮೇಲೆ ಒಟ್ಟು 2,13,000 ರೂಪಾಯಿ ದಂಡ ಬಿದ್ದಿದೆ. ಈ ವಾಹನದ ಮಾಲೀಕ ಮೊಹಮ್ಮದ್ ಮುಜಾಮಿಲ್ ಫೈಜಲ್ ಎಂದು ತಿಳಿದುಬಂದಿದೆ. ಈ ಪ್ರಕರಣ ಬೆಳಕಿಗೆ ಬಂದಿರುವ ರೀತಿಯೂ ಗಮನ ಸೆಳೆಯುವಂತಿದೆ.

ಘಟನೆ ಬೆಳಕಿಗೆ ಬಂದಿದ್ದು ಹೇಗೆ?: ಭಾನುವಾರ ರಾತ್ರಿ ಮೊಹಮ್ಮದ್ ಮುಜಾಮಿಲ್ ಅವರು ಫ್ರೇಜರ್ ಟೌನ್ನಲ್ಲಿರುವ ಲೋಕಾ ಮೊಕಾ (Loca Moca) ಎಂಬ ಕೆಫೆಗೆ ಭೇಟಿ ನೀಡಿದ್ದರು. ಅಲ್ಲಿ ಪಕ್ಕದ ಟೇಬಲ್ನಲ್ಲಿ ಕುಳಿತಿದ್ದ ಮಹಿಳೆಯರ ಕಡೆಗೆ ಸಿಗರೇಟ್ ಹೊಗೆ ಬಿಡುತ್ತಾ, ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ಈ ಕುರಿತು ಕೆಫೆ ಸಿಬ್ಬಂದಿ ಎಚ್ಚರಿಕೆ ನೀಡಿದಾಗ, ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ಬೈದು ಗಲಾಟೆ ಮಾಡಿದ್ದಾರೆ. ಅಲ್ಲದೇ, "ಹೊರಗೆ ಬಾ, ನಿನ್ನ ನೋಡಿಕೊಳ್ಳುತ್ತೇನೆ," ಎಂಬ ರೀತಿಯಲ್ಲಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಘಟನೆ ಬಳಿಕ ಕೆಫೆ ಮಾಲಕಿ ನೇತ್ರಾ ಅವರು ಪುಲಿಕೇಶಿನಗರ ಪೊಲೀಸ್ ಠಾಣೆಗೆ ತೆರಳಿ, ಮೊಹಮ್ಮದ್ ಮುಜಾಮಿಲ್ ವಿರುದ್ಧ ಎನ್ಸಿಆರ್ (NCR) ದಾಖಲಿಸಿದ್ದಾರೆ. ಇದಕ್ಕೂ ಮುನ್ನ, ಕೆಫೆ ಮಾಲಕಿ ಆತನ ಹೋಂಡಾ ಅಕ್ಟೀವಾ ಮೇಲಿರುವ ಟ್ರಾಫಿಕ್ ದಂಡದ ವಿವರಗಳನ್ನು ಆನ್ಲೈನ್ನಲ್ಲಿ ಪರಿಶೀಲಿಸಿದಾಗ, ಕೇವಲ ಸಿಗ್ನಲ್ ಜಂಪ್ ಪ್ರಕರಣಗಳಿಂದಲೇ 2,13,000 ರೂಪಾಯಿ ದಂಡ ಬಿದ್ದಿರುವುದು ಬೆಳಕಿಗೆ ಬಂದಿದೆ.
ಸಾರ್ವಜನಿಕರು ಹೇಳೋದೇನು?: ಇಷ್ಟೊಂದು ಭಾರೀ ದಂಡಕ್ಕೆ ಒಳಗಾದ ಮೊಹಮ್ಮದ್ ಮುಜಾಮಿಲ್ ಅವರು ಬೆಂಗಳೂರಿನ ಹಲಸೂರಿನಲ್ಲಿ ಇರುವ ಬ್ಯಾಂಕ್ ಆಫ್ ಅಮೆರಿಕಾ ಸಂಸ್ಥೆಯ ಶಾಖೆಯಲ್ಲಿ ಎಚ್ಆರ್ (HR) ಆಗಿ ಕೆಲಸ ಮಾಡುತ್ತಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಈ ಹಿನ್ನೆಲೆ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, "ಇಂತಹವರಿಗೆ ಹಣದ ಮದ ಹೆಚ್ಚಾಗಿದೆ. ಪೊಲೀಸರು ಸೂಕ್ತ ಕ್ರಮ ಕೈಗೊಂಡು ಕಾನೂನು ಕ್ರಮ ಜರುಗಿಸಬೇಕು," ಎಂದು ಆಗ್ರಹಿಸುತ್ತಿದ್ದಾರೆ.
-
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
ಕೃಷಿಕರಿಗೆ ವರದಾನವಾದ ಶೈಲಜಾ ವಿಠಲ್ ಆವಿಷ್ಕರಿಸಿದ 35 ಕೃಷಿ ಯಂತ್ರೋಪಕರಣ, ಸಣ್ಣ ರೈತರಿಗೆ ದೊಡ್ಡ ಲಾಭ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್












Click it and Unblock the Notifications