Bengaluru Traffic Fine: ಇನ್ಮುಂದೆ ಇದಕ್ಕೆ ಟ್ರಾಫಿಕ್ ಫೈನ್ ಕಟ್ಟಂಗಿಲ್ಲ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ದು ಬಹುದೊಡ್ಡ ಸಮಸ್ಯೆ. ಅದರಲ್ಲೂ ಫೀಕ್ ಅವರ್ಗಳಲ್ಲಿ ಜನ ತಾಸುಗಟ್ಟಲ್ಲೆ ಟ್ರಾಫಿಕ್ ಜಾಮ್ನಲ್ಲಿ ಸಿಕ್ಕಿಹಾಕಿಕೊಳ್ಳುತ್ತಾರೆ. ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಎರಡು ಮೂರು ವರ್ಷಗಳ ಮುಂಚೆಗಿಂತ ಹೆಚ್ಚು ಟ್ರಾಫಿಕ್ ಜಾಮ್ ಆಗುತ್ತಿದೆ ಎನ್ನುವ ಆರೋಪಗಳೂ ಇವೆ. ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸುವವರ ಮೇಲೆ ಬೆಂಗಳೂರು ಟ್ರಾಫಿಕ್ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಆದರೆ, ಟ್ರಾಫಿಕ್ನಿಂದ ತುರ್ತು ಸಂದರ್ಭದಲ್ಲಿ ಸಮಸ್ಯೆಗಳಾಗುತ್ತಿವೆ.
ಇದೀಗ ಬೆಂಗಳೂರಿನಲ್ಲಿ ತುರ್ತು ಸಂದರ್ಭದಲ್ಲಿ ಸಾರ್ವಜನಿಕರಿಗೆ ಸಹಾಯ ಮಾಡಲು ಬೆಂಗಳೂರು ಟ್ರಾಫಿಕ್ ಪೊಲೀಸರು ಮುಂದಾಗಿದ್ದಾರೆ. ಬೆಂಗಳೂರಿನಲ್ಲಿ ದಿನ ನಿತ್ಯವೂ ಟ್ರಾಫಿಕ್ನಲ್ಲೇ ಅರ್ಧ ಜನ ಹೈರಾಣಾಗುತ್ತಾರೆ. ಇನ್ನು ತುರ್ತು ಸಂದರ್ಭಗಳಲ್ಲಿ ಹೇಳುವುದೇ ಬೇಡ. ಕೆಲವರು ಟ್ರಾಫಿಕ್ ತಪ್ಪಿಸುವ ಉದ್ದೇಶದಿಂದ ಪುಟ್ಪಾತ್ನ ಮೇಲೆ, ಸಿಗ್ನಲ್ ಜಂಪ್ ಮಾಡುವುದು ಹಾಗೂ ಒನ್ವೇನಲ್ಲಿ ಹೋಗುವುದೂ ಸಹ ಇದೆ. ಈ ರೀತಿ ನಿಯಮ ಉಲ್ಲಂಘನೆ ಮಾಡುವವರಿಗೆ ಬೆಂಗಳೂರು ಟ್ರಾಫಿಕ್ ಪೊಲೀಸರು ಚುರುಕು ಮುಟ್ಟಿಸುತ್ತಿದ್ದಾರೆ. ಇದೀಗ ಬೆಂಗಳೂರು ಪೊಲೀಸರು ನಿರ್ದಿಷ್ಟ ತುರ್ತು ಸಂದರ್ಭದಲ್ಲಿ ಸಾರ್ವಜನಿಕರಿಗೆ ಟ್ರಾಫಿಕ್ ರೂಲ್ಸ್ನಿಂದ ಎಕ್ಸ್ಕ್ಯೂಸ್ (ವಿನಾಯಿತಿ) ನೀಡಿದ್ದಾರೆ.

ಆಂಬ್ಯುಲೆನ್ಸ್ಗೆ ದಾರಿ ಬಿಟ್ಟರೆ ದಂಡವಿಲ್ಲ: ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಎಂತಹ ಗಂಭೀರ ಸಮಸ್ಯೆ ಎಂದರೆ, ಟ್ರಾಫಿಕ್ನಲ್ಲಿ ಆಂಬ್ಯುಲೆನ್ಸ್ ಬಂದರೂ ಜನ ದಾರಿ ಬಿಡಲು ಹಿಂದೆ ಮುಂದೆ ನೋಡುತ್ತಾರೆ. ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದರೆ, ದಂಡ ಬೀಳುತ್ತದೆ ಎನ್ನುವ ಆತಂಕವೇ ಇದಕ್ಕೆ ಕಾರಣ. ಟ್ರಾಫಿಕ್ ಸಿಗ್ನಲ್ ಗ್ರೀನ್ ಆಗಲಿ ಎಂದು ವಾಹನ ಸವಾರರು ಕಾಯುತ್ತಿರುತ್ತಾರೆ. ಇದೀಗ ಈ ಬಗ್ಗೆ ಟ್ರಾಫಿಕ್ ಪೊಲೀಸರು ಗುಡ್ನ್ಯೂಸ್ವೊಂದನ್ನು ನೀಡಿದ್ದಾರೆ. ಆಂಬ್ಯುಲೆನ್ಸ್ ಹೋಗಲು ದಾರಿ ಬಿಟ್ಟುಕೊಟ್ಟರೆ ನೀವು ದಂಡ ಪಾವತಿಸಬೇಕಾಗಿಲ್ಲ ಎಂದಿದ್ದಾರೆ.
ಆಂಬ್ಯುಲೆನ್ಸ್ ಹೋಗುವ ಕಾರಣಕ್ಕೆ ನೀವು (ವಾಹನ ಸವಾರರು) ಟ್ರಾಫಿಕ್ ಜಂಪ್ ಅಥವಾ ನಿಯಮ ಉಲ್ಲಂಘನೆ ಮಾಡಿದ್ದರೆ, ದಂಡ ಕಟ್ಟಬೇಕಾಗಿಲ್ಲ. ಚಲನ್ ಆಗಿದ್ದರೂ, ದಾರಿ ಮಾಡಿಕೊಟ್ಟವರ ಟ್ರಾಫಿಕ್ ಫೈನ್ ಅನ್ನು ಮನ್ನಾ ಮಾಡುವುದಾಗಿ ಸಂಚಾರ ವಿಭಾಗದ ಜಂಟಿ ಆಯುಕ್ತ ಎಂ.ಎನ್ ಅನುಚೇತ್ ಅವರು ಹೇಳಿದ್ದಾರೆ. ಈ ಮೂಲಕ ಜೀವ ಉಳಿಸಿವುದು ಮೊದಲ ಆದ್ಯತೆ ಎಂದು ಸಂಚಾರ ಪೊಲೀಸರು ಹೇಳಿದ್ದಾರೆ.
ವಾಹನ ಸವಾರರು ಯಾವುದೇ ಆತಂಕವಿಲ್ಲದೆ (ಟ್ರಾಫಿಕ್ ಫೈನ್ನ) ಆಂಬ್ಯುಲೆನ್ಸ್ ಹೋಗಲು ಅವಕಾಶ ಮಾಡಿಕೊಡಬಹುದಾಗಿದೆ. ಒಂದೊಮ್ಮೆ ಫೈನ್ ಬಿದ್ದರೂ, ಯಾವ ಕಾರಣಕ್ಕಾಗಿ ಸಿಗ್ನಲ್ ಬ್ರೇಕ್ ಮಾಡಬೇಕಾಯಿತು ಎಂದು ಹೇಳಿದರೆ ಸಾಕು. ಟ್ರಾಫಿಕ್ ಪೊಲೀಸರು ಆ ಫೈನ್ ಮನ್ನಾ ಮಾಡಲಿದ್ದಾರೆ. ಆದರೆ, ಇದು ನಿಖರವಾಗಿರಬೇಕು ಎಂದೂ ಹೇಳಲಾಗಿದೆ.
ಇನ್ನು ಬೆಂಗಳೂರಿನಲ್ಲಿ ಟ್ರಾಫಿಕ್ ಕಂಟ್ರೋಲ್ ಮಾಡುವುದಕ್ಕೆ ಬೆಂಗಳೂರು ಟ್ರಾಫಿಕ್ ಪೊಲೀಸರು ಎಐ ತಂತ್ರಜ್ಞಾನದ ಮೊರೆ ಹೋಗಿದ್ದಾರೆ. ಬೆಂಗಳೂರಿನಲ್ಲಿ ಮೊದಲ ಹಂತದಲ್ಲಿ ಒಟ್ಟು 60 ಜಂಕ್ಷನ್ಗಳಲ್ಲಿ ಎಐ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗಿದ್ದು, ಇದು ಯಶಸ್ವಿಯಾಗಿದೆ. 165 ಜಂಕ್ಷನ್ಗಳಲ್ಲಿ ಎಐ ತಂತ್ರಜ್ಞಾನ ಅಳವಡಿಸಲಾಗಿದೆ. ಬೆಂಗಳೂರಿನಲ್ಲಿ ಶೇಕಡ 68 ರಷ್ಟು ಬೈಕ್ಗಳಿವೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications