ವಿಡಿಯೋ: ಟೆಂಪೋ ಚಾಲಕನ ಮೇಲೆ ಟ್ರಾಫಿಕ್ ಪೊಲೀಸ್ ದೌರ್ಜನ್ಯ
Recommended Video
ಬೆಂಗಳೂರು, ಸೆಪ್ಟೆಂಬರ್ 20: ಟೆಂಪೊ ಚಾಲಕನೊಬ್ಬನ ಮೇಲೆ ಹಲ್ಲೆ ಮಾಡಿದ ಬೆಂಗಳೂರು ಟ್ರಾಫಿಕ್ ಕಾನ್ಸ್ಟೇಬಲ್ ಒಬ್ಬರ ವಿಡಿಯೋ ವೈರಲ್ ಆಗಿದೆ.
ಇಂದು ಬೆಳಗ್ಗೆ ಟೌನ್ ಹಾಲ್ ಬಳಿ ಘಟನೆಯು ನಡೆದಿದ್ದು, ಬಿಬಿಎಂಪಿ ಕಡೆಯಿಂದ ಟೌನ್ ಹಾಲ್ ಬಳಿ ಯೂ ಟರ್ನ ತೆಗೆದುಕೊಂಡ ಎಂಬ ಕಾರಣಕ್ಕೆ ಟೆಂಪೊ ಟ್ರಾವೆಲರ್ ಚಾಲಕ ಸುನಿಲ್ ಎಂಬ ಯುವಕನಿಗೆ ಟ್ರಾಫಿಕ್ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಥಳಿಸಿದ್ದಾರೆ. ಅಷ್ಟೆ ಅಲ್ಲದೆ ಅತ್ಯಂತ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿದ್ದಾರೆ.
ಘಟನೆಯ ಪೂರ್ಣ ದೃಶ್ಯಗಳನ್ನು ಚಾಲಕ ಸುನಿಲ್ ಮೊಬೈಲ್ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಭಾರಿ ವೈರಲ್ ಆಗಿದೆ. ಟ್ರಾಫಿಕ್ ಪೊಲೀಸ್ ತೋರಿದ ದೌರ್ಜನ್ಯಕ್ಕೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.

ಯೂ ಟರ್ನ್ ತೆಗೆದುಕೊಂಡನೆಂಬ ಕಾರಣಕ್ಕೆ ಟೆಂಪೋ ಏರಿ ಚಾಲಕನ ಪಕ್ಕ ಕೂತ ಪೊಲೀಸ್ ಪೇದೆ, ಮೊದಲಿಗೆ ಗಾಡಿಯನ್ನು ರಸ್ತೆಯ ಬದಿಗೆ ನಿಲ್ಲಿಸುವಂತೆ ಹೇಳಿದ್ದಾರೆ. ಚಾಲಕ ಸುನಿಲ್, 'ಇಲ್ಲಿ ವಾಹನಗಳಿವೆ ಮುಂದೆ ನಿಲ್ಲಿಸುತ್ತೇನೆ' ಎಂದಿದ್ದಾರೆ. ಆಗ ತಾನೇ ವಾಹನದ ಸ್ಟೀರಿಂಗ್ ವ್ಹೀಲ್ ಹಿಡಿದು ಪಕ್ಕಕ್ಕೆ ಎಳೆಯುವ ಪ್ರಯತ್ನ ಮಾಡಿದ್ದಾರೆ ಪೊಲೀಸ್ ಪೇದೆ.
ಟ್ರಾಫಿಕ್ ಪೊಲೀಸ್ ಪೇದೆಯು ಅಲ್ಸೂರು ಗೇಟ್ ಸಂಚಾರಿ ಪೊಲೀಸ್ ಠಾಣೆಯವರು ಎನ್ನಲಾಗಿದ್ದು, ಮಾಹಿತಿಗಾಗಿ ಠಾಣೆಗೆ ಕರೆ ಮಾಡಿದರೆ ಠಾಣೆಯ ಲ್ಯಾಂಡ್ ಲೈನ್ ದುರಸ್ಥಿ ಆಗಿತ್ತು, ಎಸ್ಐ ಸಹ ಕರೆಯನ್ನು ಸ್ವೀಕರಿಸಲಿಲ್ಲ.
ಇತ್ತೀಚಿನ ದಿನಗಳಲ್ಲಿ ಪೊಲೀಸರ ದೌರ್ಜನ್ಯದ ಪ್ರಕರಣಗಳು ಹೆಚ್ಚಾಗುತ್ತಲಿವೆ. ಜೊತೆಗೆ ಸಾರ್ವಜನಿಕರು ಪೊಲೀಸರ ಮೇಲೆ ಹಲ್ಲೆ ನಡೆಸುತ್ತಿರುವ ಪ್ರಕರಣಗಳೂ ಹೆಚ್ಚಾಗಿವೆ. ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿಯಾಗಿ ದಂಡದ ಪ್ರಮಾಣ ಹೆಚ್ಚಾದ ನಂತರ ಈ ರೀತಿಯ ಪ್ರಕರಣಗಳು ಹೆಚ್ಚಾಗುತ್ತಿರುವುದು ಕಾಕತಾಳೀಯವಲ್ಲ, ದಂಡ ಹೆಚ್ಚಳವು ಮೊದಲೇ ಇದ್ದ ಪೊಲೀಸ್-ಸಾರ್ವಜನಿಕರ ನಡುವೆ ಇದ್ದ ತಿಕ್ಕಾಟವನ್ನು ಹೆಚ್ಚು ಮಾಡಿದೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications